ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನ. 14
ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮವು ದಿನಾಂಕ 16-11-
2024 ರಿಂದ 13-01-2025 ನೆರವೇರಲಿದ್ದು ಈ 60 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾಲೆ ಧರಿಸಿದ ಸ್ವಾಮಿಗಳಿಗೆ
ಪ್ರತಿನಿತ್ಯ ಉಚಿತ ಅನ್ನದಾನ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ನ ಅಧ್ಯಕ್ಷರು ಶರಣ್
ಕುಮಾರ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಿನಾಂಕ 16 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣ ಹೋಮ ಶ್ರೀ ಚಂಡಿಕಾ ಹೋಮ
ಪೂಜಾ ಕಾರ್ಯಕ್ರಮ ನೆರವೇರಿಸಲ್ಲಾಗುವುದು. ಮಧ್ಯಾಹ್ನ 12:45 ಗಂಟೆಗೆ ಪೂರ್ಣಾವತಿ ನಡೆಯುವುದು ಹಾಗೂ ಅನ್ನದಾನದ
ಕಾರ್ಯಕ್ರಮದ ಉದ್ಘಾಟನೆಯನ್ನು ವರ್ತಕರಾದ ಉದಯ ಶೆಟ್ಟಿ ನೇರವೇರಿಸಲಿದ್ದು, ಇದರ ಅಧ್ಯಕ್ಷತೆಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ
ಟ್ರಸ್ಟ್ನ ಅಧ್ಯಕ್ಷರು ಶರಣ್ ಕುಮಾರ್ ವಹಿಸಲಿದ್ದಾರೆ.

18-12-2024 ಬುಧುವಾರ ರಂದು ಸಂಜೆ ಏಳು ಗಂಟೆಗೆ 18 ಮೆಟ್ಟಿಲುಗಳ ಪಡಿಪೂಜ ಕಾರ್ಯಕ್ರಮ ,22-12-2024 ರಂದು ಮಧ್ಯಾಹ್ನ 12
ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಾ ಅನ್ನದಾನ ಕಾರ್ಯಕ್ರಮ, 13-01-2025 ಸೋಮವಾರ ಸಂಜೆ
6:00ಗೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ,. ದಿನಾಂಕ 14.01.2025 ಮಂಗಳವಾರ ಮಕರ ಸಂಕ್ರಮಣದ
ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಿಸಲಾಗುವುದು ಎಂದಿದ್ದಾರೆ.
ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಸಕಲ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ದೇವಸ್ಥಾನದ
ಕಾರ್ಯದರ್ಶಿಯಾದ ವೆಂಕಟೇಶ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕೋರಿದ್ದಾರೆ.
Views: 0