ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನ ರಾಬರಿ: ಕೋಲಾರ ನಗರಸಭೆ ಕಾಂಗ್ರೆಸ್ ಸದಸ್ಯ ಅರೆಸ್ಟ್!

ಕೋಲಾರ ಜಿಲ್ಲೆಯ ಕೆಜಿಎಫ್​ನ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯನನ್ನು ಆಂಧ್ರ ಪೊಲೀಸರು ಚಿನ್ನ ದರೋಡೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ದರೋಡೆಕೋರರು ತಮಿಳುನಾಡಿನಿಂದ ಬರುತ್ತಿದ್ದ ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 3.5 ಕೆಜಿ ಚಿನ್ನ ದೋಚಿದ್ದರು. ಸದ್ಯ ಪೊಲೀಸರು ದರೋಡೆ ಮಾಡಿದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ, ಏಪ್ರಿಲ್​ 06: ರಾಬರಿ ಪ್ರಕರಣದಲ್ಲಿ (Robbery case) ಕಾಂಗ್ರೆಸ್ (congress) ಮುಖಂಡನನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಕೆಜಿಎಫ್ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯ ಜಯಪಾಲ್​ರನ್ನು ಬಂಧಿಸಲಾಗಿದೆ. ತಮಿಳುನಾಡಿನ ಚೆನೈ ನಿಂದ ಕೆಜಿಎಫ್​ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡ ದೋಚಿತ್ತು. ಏಪ್ರಿಲ್ 2 ರಂದು ರಾತ್ರಿ ಘಟನೆ ನಡೆದಿತ್ತು. ವಿ.ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆಜಿಎಫ್​ನ ಜಯಪಾಲ್, ಜಯಪಾಲ್ ಕಾರು ಚಾಲಕ ಮುಕ್ರಂ‌ ಪಾಷಾ ಹಾಗೂ ತಮಿಳುನಾಡಿನ ಇಬ್ಬರು ಸೇರಿ ಆಂಧ್ರ ಹಾಗೂ ತಮಿಳುನಾಡು ಗಡಿ ನಾಯಕನೇರಿ ಘಾಟ್ ಬಳಿ ದರೋಡೆ ಮಾಡಿದ್ದರು. ಸದ್ಯ ವಿಕೋಟ ಪೊಲೀಸರಿಂದ ರಾಬರಿ ಮಾಡಿದ್ದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

TV 9 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *