ಮಾನನಷ್ಟ ಮೊಕದ್ದಮೆ ಪ್ರಕರಣ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹ

ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕುರಿತು 2019 ರಲ್ಲಿ ನೀಡಿದ ಹೇಳಿಕೆಗಾಗಿ ನಿನ್ನೆ(ಗುರುವಾರ)  ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಲೋಕಸಭೆಯ ಸೆಕ್ರೆಟರಿಯೇಟ್ ಗಾಂಧಿಯನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ಖಚಿತಪಡಿಸಿದೆ.

ಅವರ ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ” ಎಂದು ರಾಷ್ಟ್ರೀಯ ಸಂಸತ್ತಿನ ನೋಟೀಸ್ ಶುಕ್ರವಾರ ತಿಳಿಸಿದೆ.

The post ಮಾನನಷ್ಟ ಮೊಕದ್ದಮೆ ಪ್ರಕರಣ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹ first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/Tban5DV
via IFTTT

Views: 0

Leave a Reply

Your email address will not be published. Required fields are marked *