Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: ರಾಜೀವ್ ಗಾಂಧಿ ಸ್ಟೇಡಿಯಂ…RCB ಗೆ ಭಯ ಶುರು..!
Sports

IPL 2023: ರಾಜೀವ್ ಗಾಂಧಿ ಸ್ಟೇಡಿಯಂ…RCB ಗೆ ಭಯ ಶುರು..!

May 17, 2023
samagrasuddi

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ SRH ತಂಡಕ್ಕೆ ಈ ಪಂದ್ಯ ಔಪಚಾರಿಕ. ಆದರೆ ಪ್ಲೇಆಫ್ ರೇಸ್​ನಲ್ಲಿರುವ RCB ಪಾಲಿಗೆ ಇದು ನಿರ್ಣಾಯಕ ಪಂದ್ಯ.ಅಂದರೆ ಈ ಪಂದ್ಯದಲ್ಲಿ RCB ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಈ ಪಂದ್ಯದಲ್ಲಿ ಗೆದ್ದು, ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿದರೆ ನೆಟ್​ ರನ್​ ರೇಟ್​ ನೆರವಿನೊಂದಿಗೆ RCB ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿಯೇ SRH ವಿರುದ್ಧ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದೆ.ಆದರೆ ಈ ಪಂದ್ಯವು SRH ತಂಡದ ತವರು ಮೈದಾನ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಇದೀಗ RCB ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಕ್ಕೆ ಮುಖ್ಯ ಕಾರಣ ಈ ಮೈದಾನದಲ್ಲಿನ ಆರ್​ಸಿಬಿ ತಂಡದ ಪ್ರದರ್ಶನ.ರಾಜೀವ್​ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಆದರೆ ಈ ವೇಳೆ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯ ರದ್ದಾಗಿತ್ತು. ಅಂದರೆ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋಲನುಭವಿಸಿದೆ.ಇನ್ನು ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದು 2019 ರಲ್ಲಿ. ಈ ವೇಳೆ ಎಸ್​ಆರ್​ಹೆಚ್ ತಂಡವು ಆರ್​ಸಿಬಿ ವಿರುದ್ಧ 231 ರನ್​ ಬಾರಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿಯನ್ನು ಕೇವಲ 113 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತ್ತು. ಹಾಗೆಯೇ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಕೊನೆಯ ಬಾರಿ ಜಯ ಸಾಧಿಸಿದ್ದು 2015 ರಲ್ಲಿ. ಅದು ಕೂಡ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ. ಹೀಗಾಗಿಯೇ ಎಸ್​​ಆರ್​ಹೆಚ್​ ಮೈದಾನವು ಆರ್​ಸಿಬಿ ಪಾಲಿಗೆ ನತದೃಷ್ಟ ಎಂದು ಬಣ್ಣಿಸಲಾಗುತ್ತದೆ.ಇದೀಗ ಇದೇ ಮೈದಾನದಲ್ಲಿ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಕಳೆದ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಈ ಪಂದ್ಯವನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

source https://tv9kannada.com/photo-gallery/cricket-photos/ipl-2023-rcb-at-rajiv-gandhi-stadium-hyderabad-kannada-news-zp-580950.html

Tags: Cricket, IPL, IPL 2023, Rajiv Gandhi Stadium, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

PBKS vs DC Live Score IPL 2023: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ
IPL 2023: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ RCB: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
  • ನಮ್ಮ ಜನಾಂಗದಿಂದಲೇ ಸರ್ವೆಯನ್ನು ಮಾಡಿಸುವುದರ ಮೂಲಕ ಮುಂದಿನ ಮೂರು ತಿಂಗಳಲ್ಲಿ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು: ಬಿ.ಎಸ್.ಸೋಮಶೇಖರ್.
  • ಕಾಂಗ್ರೆಸ್ ಪಕ್ಷದವರಿಂದ ಸುಳ್ಳಿನ ಅಪ ಪ್ರಚಾರ ; ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ.
  • ಸ್ಥಗಿತಗೊಂಡ ಕಾಮಗಾರಿ ಪುನರಾರಂಭಿಸಿ: ಪಪ್ಪಿ ಸ್ಟೂಡೆಂಟ್ ಸದಸ್ಯರು ಮನವಿ.
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress