Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: RCB ತಂಡದಿಂದ 7 ಆಟಗಾರರಿಗೆ ಗೇಟ್ ಪಾಸ್ ಸಾಧ್ಯತೆ
Sports

IPL 2023: RCB ತಂಡದಿಂದ 7 ಆಟಗಾರರಿಗೆ ಗೇಟ್ ಪಾಸ್ ಸಾಧ್ಯತೆ

May 30, 2023
samagrasuddi

IPL 2023: ಐಪಿಎಲ್ ಸೀಸನ್ 16 ಮುಕ್ತಾಯಗೊಂಡಿದೆ. ಅಂತಿಮ ಹಣಾಹಣಿಯಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇತ್ತ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದೊಂದಿಗೆ ಟೂರ್ನಿ ಆರಂಭಿಸಿದ್ದ ಆರ್​ಸಿಬಿ 6ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.
ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಿದ್ದ ಆರ್​ಸಿಬಿ ಜಯ ಸಾಧಿಸಿದ್ದು ಕೇವಲ 7 ಪಂದ್ಯಗಳಲ್ಲಿ ಮಾತ್ರ. ವಿಶೇಷ ಎಂದರೆ ಈ ಏಳು ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ್ದು ಕೇವಲ ನಾಲ್ವರು ಆಟಗಾರರು ಮಾತ್ರ.ಅಂದರೆ ಟೂರ್ನಿಯುದ್ಧಕ್ಕೂ ಫಾಫ್ ಡುಪ್ಲೆಸಿಸ್ (730 ರನ್), ವಿರಾಟ್ ಕೊಹ್ಲಿ (639 ರನ್), ಗ್ಲೆನ್ ಮ್ಯಾಕ್ಸ್​ವೆಲ್ (400 ರನ್) ಹಾಗೂ ಮೊಹಮ್ಮದ್ ಸಿರಾಜ್ (19 ವಿಕೆಟ್) ಮಿಂಚಿದ್ದು ಬಿಟ್ಟರೆ, ಉಳಿದವರು ಲೆಕ್ಕಕ್ಕಿದ್ದರೇ ಹೊರತು ಆಟಕ್ಕಿರಲಿಲ್ಲ.
ಹೀಗಾಗಿಯೇ ಮುಂದಿನ ಸೀಸನ್​ ಐಪಿಎಲ್​ಗೂ ಮುನ್ನ ಆರ್​ಸಿಬಿ ತಂಡಕ್ಕೆ ಮೇಜರ್ ಸರ್ಜರಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಈ ಬಾರಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಕೈ ಬಿಡುವುದು ಬಹುತೇಕ ಖಚಿತ ಎನ್ನಲಾಗಿದೆ. ಅದರಂತೆ ಈ ಸಲ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...1- ದಿನೇಶ್ ಕಾರ್ತಿಕ್: 13 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ. ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿರುವ ಕಾರಣ ಡಿಕೆಯನ್ನು ಕೂಡ ಉಳಿಸಿಕೊಳ್ಳುವುದಿಲ್ಲ ಎನ್ನಬಹುದು.2- ಮಹಿಪಾಲ್ ಲೋಮ್ರರ್: 10 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಲೋಮ್ರರ್ 135 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿ ಲೋಮ್ರರ್​ಗೂ ಗೇಟ್ ಪಾಸ್ ನೀಡಲಿದೆ.3- ಅನೂಜ್ ರಾವತ್: 7 ಇನಿಂಗ್ಸ್​ ಆಡಿರುವ ಅನೂಜ್ ರಾವತ್ ಕಲೆಹಾಕಿರುವುದು ಕೇವಲ 91 ರನ್​ ಮಾತ್ರ. ಇತ್ತ 3.4 ಕೋಟಿಗೆ ಖರೀದಿಸಿರುವ ಆಟಗಾರನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ತಂಡದಿಂದ ರಿಲೀಸ್ ಮಾಡುವುದು ಖಚಿತ.4- ಶಹಬಾಝ್ ಅಹ್ಮದ್: 10 ಪಂದ್ಯಗಳಲ್ಲಿ 6 ಮ್ಯಾಚ್​ನಲ್ಲಿ ಬ್ಯಾಟ್ ಮಾಡಿರುವ ಶಹಬಾಝ್ ಕಲೆಹಾಕಿದ್ದು 42 ರನ್​ ಮಾತ್ರ. ಇನ್ನು ಕೇವಲ 1 ವಿಕೆಟ್ ಮಾತ್ರ ಪಡೆದಿದ್ದಾರೆ. ಹೀಗಾಗಿ ಶಹಬಾಝ್​ನ ಕೈ ಬಿಡುವುದು ಬಹುತೇಕ ಖಚಿತ ಎನ್ನಬಹುದು.5- ಕೇದರ್ ಜಾಧವ್: 1 ಇನಿಂಗ್ಸ್ ಆಡಿದ್ದ ಹಿರಿಯ ಆಟಗಾರ ಕೇದರ್ ಜಾಧವ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಜಾಧವ್ ಅವರನ್ನು ಉಳಿಸಿಕೊಳ್ಳುವುದು ಅನುಮಾನ.6- ಸುಯಶ್ ಪ್ರಭುದೇಸಾಯಿ: 5 ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಸುಯಶ್ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 35 ರನ್ ಮಾತ್ರ. ಹೀಗಾಗಿ ಸುಯಶ್​ರನ್ನು ಕೂಡ ರಿಲೀಸ್ ಮಾಡಬಹುದು.7- ಕರ್ಣ್ ಶರ್ಮಾ: 7 ಪಂದ್ಯಗಳಲ್ಲಿ 223 ರನ್ ನೀಡಿ ಕರ್ಣ್ ಶರ್ಮಾ ಒಟ್ಟು 10 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಮುಂದಿನ ಸೀಸನ್​ಗಾಗಿ 35 ವರ್ಷದ ಹಿರಿಯ ಆಟಗಾರನನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.RCB ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-players-who-should-be-released-in-ipl-2024-kannada-news-zp-590511.html

Post navigation

Wrestlers Protest: ಇಂಡಿಯಾ ಗೇಟ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆಗೆ ಅವಕಾಶವಿಲ್ಲ: ದೆಹಲಿ ಪೊಲೀಸ್
ಕುಸ್ತಿಪಟುಗಳು ಪದಕಗಳನ್ನು ಗಂಗಾ ನದಿಗೆ ಎಸೆಯದಂತೆ ತಡೆದ ರೈತ ನಾಯಕ ನರೇಶ್ ಟಿಕಾಯತ್

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
  • ನಮ್ಮ ಜನಾಂಗದಿಂದಲೇ ಸರ್ವೆಯನ್ನು ಮಾಡಿಸುವುದರ ಮೂಲಕ ಮುಂದಿನ ಮೂರು ತಿಂಗಳಲ್ಲಿ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು: ಬಿ.ಎಸ್.ಸೋಮಶೇಖರ್.
  • ಕಾಂಗ್ರೆಸ್ ಪಕ್ಷದವರಿಂದ ಸುಳ್ಳಿನ ಅಪ ಪ್ರಚಾರ ; ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ.
  • ಸ್ಥಗಿತಗೊಂಡ ಕಾಮಗಾರಿ ಪುನರಾರಂಭಿಸಿ: ಪಪ್ಪಿ ಸ್ಟೂಡೆಂಟ್ ಸದಸ್ಯರು ಮನವಿ.
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress