Odisha Train Accident: ದುರ್ಘಟನೆಗೆ ನಲುಗಿದ ಕೊಹ್ಲಿ ಹೃದಯ; ಟ್ವಿಟರ್​ನಲ್ಲಿ ಕ್ರಿಕೆಟಿಗರ ಸಂತಾಪ

ಒಡಿಶಾದಲ್ಲಿ ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 900ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಯನ್ನು ಇಡೀ ಮನುಕುಲವೇ ಮಮ್ಮಲ ಮರುಗುತ್ತಿದೆ. ನೊಂದ ಕುಟುಂಬಗಳಿಗೆ ಸಾಂತ್ವಾನ ಹೇಳುವ ಕೆಲಸವನ್ನು ದೇಶ ವಿದೇಶಗಳ ಪ್ರಭಾವಿಗಳು ಮಾಡುತ್ತಿದ್ದಾರೆ. ಇದರಲ್ಲಿ ಟೀಂ ಇಂಡಿಯಾ ಆಟಗಾರರು ಸೇರಿದ್ದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.ಸದ್ಯ ಡಬ್ಲ್ಯುಟಿಸಿ ಫೈನಲ್​ಗಾಗಿ ಇಂಗ್ಲೆಂಡ್​ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಈ ದುರಂತದ ಬಗ್ಗೆ ಟ್ವೀಟ್ ಮಾಡಿದ್ದು, ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು, ಆ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಇಡೀ ದೇಶ ಅವರ ಜೊತೆ ನಿಂತಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.ಒಡಿಶಾ ರೈಲು ಅಪಘಾತದ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಆದಷ್ಟು ಬೇಗ ಪ್ರಯಾಣಿಕರನ್ನು ರಕ್ಷಿಸುವಂತೆ  ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.ಒಡಿಶಾ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.

source https://tv9kannada.com/photo-gallery/cricket-photos/odisha-train-accident-virat-kohli-gautam-gambhir-harbhajan-singh-yuvraj-singh-emotional-post-coromandel-express-train-crash-psr-593166.html

Leave a Reply

Your email address will not be published. Required fields are marked *