Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ
Sports

WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ

June 4, 2023
samagrasuddi

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್​ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್​​ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್​ರೌಂಡರ್​ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.
ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್​ ಕೂಡ ಆಯ್ಕೆಯಾಗಿಲ್ಲ.ಇನ್ನು ಬೆಸ್ಟ್ ಇಲೆವೆನ್​ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್​ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)2- ದಿಮುತ್ ಕರುಣರತ್ನೆ (ಶ್ರೀಲಂಕಾ)3- ಬಾಬರ್ ಆಝಂ (ಪಾಕಿಸ್ತಾನ್)3- ಬಾಬರ್ ಆಝಂ (ಪಾಕಿಸ್ತಾನ್)5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)6- ರವೀಂದ್ರ ಜಡೇಜಾ- ಆಲ್​ರೌಂಡರ್ (ಭಾರತ)7- ರವಿಚಂದ್ರನ್ ಅಶ್ವಿನ್- ಆಲ್​ರೌಂಡರ್ (ಭಾರತ)8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)9- ಪ್ಯಾಟ್ ಕಮಿನ್ಸ್- ಆಲ್​ರೌಂಡರ್ (ಆಸ್ಟ್ರೇಲಿಯಾ)10- ಕಗಿಸೊ ರಬಾಡ (ಸೌತ್ ಆಫ್ರಿಕಾ)11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

source https://tv9kannada.com/photo-gallery/cricket-photos/wtc-final-2023-cricket-australias-wtc-team-of-the-tournament-kannada-news-zp-594111.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ‘ಭಾವನಾತ್ಮಕ ಕ್ಷಣವಾಗಿತ್ತು’; ತಂಡದಿಂದ ಹೊರಗಿದ್ದ ಬಗ್ಗೆ ರಹಾನೆ ಹೇಳಿದ ಮಾತುಗಳಿವು
IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
Copyright © 2026
CONTACT US
Theme by: Theme Horse
Proudly Powered by: WordPress