Skip to content
  • Sunday, March 22, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • Ambati Rayudu: ರಾಜಕೀಯಕ್ಕೆ ಕ್ರಿಕೆಟಿಗ ಅಂಬಟಿ ರಾಯುಡು ಎಂಟ್ರಿ! ಯಾವ ಪಕ್ಷ ಸೇರ್ತಾರೆ?
Sports

Ambati Rayudu: ರಾಜಕೀಯಕ್ಕೆ ಕ್ರಿಕೆಟಿಗ ಅಂಬಟಿ ರಾಯುಡು ಎಂಟ್ರಿ! ಯಾವ ಪಕ್ಷ ಸೇರ್ತಾರೆ?

June 8, 2023
samagrasuddi

ಇತ್ತೀಚೆಗೆ ಮುಗಿದ ಐಪಿಎಲ್ 16ನೇ ಆವೃತ್ತಿಯಲ್ಲಿ ಚೆನ್ನೈ ತಂಡವನ್ನು 5ನೇ ಬಾರಿಗೆ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಫೈನಲ್​ಗೂ ಮುನ್ನವೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ನತದೃಷ್ಟ ಕ್ರಿಕೆಟಿಗ ಅಂಬಟಿ ರಾಯುಡು ರಾಜಕೀಯದಲ್ಲಿ ತಮ್ಮ 2ನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.ಈಗಾಗಲೇ ರಾಜಕೀಯಕ್ಕೆ ಎಂಟ್ರಿಕೊಡುವುದಾಗಿ ಹೇಳಿಕೊಂಡಿದ್ದ ಹಿರಿಯ ಕ್ರಿಕೆಟಿಗ ಅಂಬಟಿ ರಾಯುಡು ಆ ನಿಟ್ಟಿನಲ್ಲಿ ತಮ್ಮ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಕಳೆದ ತಿಂಗಳು 11ರಂದು ಸಿಎಂ ಜಗನ್ ಅವರನ್ನು ಭೇಟಿಯಾಗಿದ್ದ ಅಂಬಟಿ ರಾಯುಡು ಇತ್ತೀಚೆಗೆ ಮತ್ತೊಮ್ಮೆ ಸಿಎಂ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಗನ್ ಅವರನ್ನು ಭೇಟಿ ಮಾಡಲು ರಾಯುಡು ಗುರುವಾರ ಮಧ್ಯಾಹ್ನ ತಾಡೆಪಲ್ಲಿಯಲ್ಲಿರುವ ಸಿಎಂ ಕ್ಯಾಂಪ್ ಕಚೇರಿಗೆ ಆಗಮನಿಸಿದ್ದರು. ಇಬ್ಬರ ನಡುವೆ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಯಿತು. ಜಗನ್ ಭೇಟಿಯ ನಂತರ ಅಂಬಟಿ ರಾಯುಡು ಮನೆಗೆ ತೆರಳಿದರು. ಗುಂಟೂರು ಜಿಲ್ಲೆಯ ಪೊನ್ನೂರಿನ ಅಂಬಟಿ ರಾಯುಡು ಅವರು ವೈಸಿಪಿ ಸೇರಿ ಮುಂದಿನ ಚುನಾವಣೆಯಲ್ಲಿ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದೆ. ಈ ಪ್ರಕ್ರಿಯೆಯಲ್ಲಿ ನಿತ್ಯ ಸಿಎಂ ಜಗನ್ ಭೇಟಿಯಾಗುತ್ತಿರುವುದು ವದಂತಿಗೆ ಬಲ ನೀಡುತ್ತಿದೆ. ಆದರೆ, ಅಂಬಟಿ ರಾಯುಡು ಅವರು ಗುಂಟೂರು ಸಂಸದ ಅಥವಾ ಪೊನ್ನೂರು ಶಾಸಕ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.2019 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಅಂಬಟಿ ರಾಯುಡು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಐಪಿಎಲ್ ಫೈನಲ್ ಮುಗಿದ್ದ ಬೆನ್ನಲ್ಲೇ, ಅಂದರೆ ಮೇ 30 ರಂದು ಶೀಘ್ರದಲ್ಲೇ 2ನೇ ಇನ್ನಿಂಗ್ಸ್ ಆರಂಭಿಸಲಿದ್ದೇನೆ ಎಂದು ಅಂಬಟಿ ರಾಯುಡು ಟ್ವೀಟ್ ಮಾಡಿದ್ದರು. ಇದೀಗ ಸಿಎಂ ಜಗನ್ ಅವರನ್ನು ಮತ್ತೆ ಮತ್ತೆ ಭೇಟಿಯಾಗುತ್ತಿರುವುದನ್ನು ನೋಡಿದರೆ ರಾಯುಡು ರಾಜಕೀಯದಲ್ಲಿ ತಮ್ಮ 2ನೇ ಇನ್ನಿಂಗ್ಸ್ ಆರಂಭಿಸುವಂತೆ ತೋರುತ್ತಿದೆ.ಕಾಪು ಸಮುದಾಯಕ್ಕೆ ಸೇರಿದ ಅಂಬಟಿ ತಿರುಪತಿ ರಾಯುಡು ಅವರು ಈ ಮೊದಲು ಜನಸೇನೆ ಪಕ್ಷವನ್ನು ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಇತ್ತೀಚಿಗೆ ರಾಯಡು ವೈಸಿಪಿ ಕಡೆ ಗಮನ ಹರಿಸಿದಂತೆ ಕಾಣುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ತಿಂಗಳು ಶ್ರೀಕಾಕುಳಂ ಜಿಲ್ಲೆಯ ಮೂಲ್‌ಪೇಟ್ ಬಂದರಿನ ಶಂಕುಸ್ಥಾಪನೆ ಮಾಡಿದ ಸಿಎಂ ವಿಡಿಯೋವನ್ನು ರಿಟ್ವೀಟ್ ಮಾಡಿದಂದಿನಿಂದ ಅಂಬಾಟಿ ವೈಸಿಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಅಲ್ಲದೆ ರಾಜ್ಯದ ಎಲ್ಲರಿಗೂ ಜಗನ್ ಮೇಲೆ ನಂಬಿಕೆ ಇದೆ ಎಂದು ಅಂಬಾಟಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದರು. ಆ ಟ್ವೀಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಕೂಡ ನಡೆದಿತ್ತು.

source https://tv9kannada.com/photo-gallery/cricket-photos/indian-cricketer-ambati-rayudu-meets-with-cm-jagan-in-amaravati-he-may-join-ycp-party-psr-597044.html

Tags: Cricket, samagrasuddi, ಸಮಗ್ರ ಸುದ್ದಿ

Post navigation

ICC: ಕಪಿಲ್ ಟು ರೋಹಿತ್; ಐಸಿಸಿ ಫೈನಲ್​ಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಐವರು ನಾಯಕರಿವರು
WTC Final 2023: ಮಿಯಾ ಮ್ಯಾಜಿಕ್: ಮಿಂಚಿನ ದಾಳಿಯೊಂದಿಗೆ ವಿಶೇಷ ಸಾಧನೆ ಮಾಡಿದ ಸಿರಾಜ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
  • Life Cycle Mutual Funds: ಸೆಬಿಯ ಹೊಸ ಮ್ಯೂಚುವಲ್ ಫಂಡ್ ನಿಯಮ, ಲಾಭ ಮತ್ತು ಅನಾನುಕೂಲಗಳ ಸಂಪೂರ್ಣ ಮಾಹಿತಿ.
  • RCB Ticket Scam Alert: ಐಪಿಎಲ್ ಟಿಕೆಟ್ ಹೆಸರಿನಲ್ಲಿ ವಂಚನೆ; ಬೆಂಗ್ಳೂರು ಪೊಲೀಸರಿಂದ ಹೈ-ಅಲರ್ಟ್!
  • ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.
  • ​Day Special, ಮಾರ್ಚ್ 22: ಇತಿಹಾಸದ ಪುಟಗಳಲ್ಲಿನ ಸುವರ್ಣ ಅಕ್ಷರಗಳು ಮತ್ತು ವಿಶ್ವ ಜಲ ದಿನದ ವಿಶೇಷತೆ
Copyright © 2026
CONTACT US
Theme by: Theme Horse
Proudly Powered by: WordPress