Skip to content
  • Sunday, March 22, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • World Cup 2023: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಲ್ಲ ಎಂದು PCB ಹೊಸ ಕ್ಯಾತೆ..!
Sports

World Cup 2023: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಲ್ಲ ಎಂದು PCB ಹೊಸ ಕ್ಯಾತೆ..!

June 8, 2023
samagrasuddi

World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಬಿಸಿಸಿಐ ತಯಾರಿಗಳನ್ನು ಆರಂಭಿಸಿದೆ. ಈಗಾಗಲೇ ದೇಶದ ಪ್ರಮುಖ ಮೈದಾನಗಳ ನವೀಕರಣ ನಡೆಯುತ್ತಿದೆ. ಇದರ ನಡುವೆ ಅಹ್ಮದಾಬಾದ್ ಮೈದಾನದಲ್ಲಿ ನಾವು ಭಾರತದ ವಿರುದ್ಧ ಆಡುವುದಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ಕ್ಯಾತೆ ತೆಗೆದಿದೆ.ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರದಿಂದ ಅನುಮತಿ ಪಡೆದರೆ, ತಮ್ಮ ಪಂದ್ಯಗಳನ್ನು ನಿರ್ದಿಷ್ಟ ಮೈದಾನಗಳಲ್ಲಿ ನಿಗದಿಪಡಿಸುವಂತೆ ಪಾಕ್ ಕ್ರಿಕೆಟ್ ಮಂಡಳಿ ಐಸಿಸಿಗೆ ಮನವಿ ಸಲ್ಲಿಸಿದೆ.ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಯಾವುದೇ ಲೀಗ್ ಪಂದ್ಯಗಳನ್ನು ಆಯೋಜಿಸದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಯೋಫ್ ಅಲ್ಲಾರ್ಡಿಸ್ ಅವರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಆಡಳಿತ ಸಮಿತಿ ಅಧ್ಯಕ್ಷ ನಜಮ್ ಸೇಥಿ ವಿನಂತಿಸಿದ್ದಾರೆ.ಇದಾಗ್ಯೂ ನಾಕೌಟ್ ಪಂದ್ಯಗಳನ್ನು ಅಹ್ಮದಾಬಾದ್​ನಲ್ಲಿ ಆಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿರುವ ಪಿಸಿಬಿ, ಪಾಕಿಸ್ತಾನ್ ಪಂದ್ಯಗಳನ್ನು ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ನಿಗದಿ ಮಾಡುವಂತೆ ಐಸಿಸಿಯನ್ನು ಕೋರಿದೆ.ಇತ್ತ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹ್ಮದಾಬಾದ್​ನಲ್ಲಿ ಆಯೋಜಿಸಲು ಬಿಸಿಸಿಐ ಪ್ರಸ್ತಾಪ ಸಲ್ಲಿಸಿದೆ. ಆದರೆ ಇದೀಗ ಇದೇ ಮೈದಾನದಲ್ಲಿ ಪಂದ್ಯವಾಡಲು ಪಿಸಿಬಿ ಹಿಂಜರಿಯುತ್ತಿದೆ.ಭಾರತವು ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್​ನಿಂದ ಹಿಂದೆ ಸರಿದಿದ್ದು, ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸುವಂತೆ ತಿಳಿಸಿದೆ. ಇದೇ ಕಾರಣದಿಂದಾಗಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಏಕದಿನ ವಿಶ್ವಕಪ್ ಮೈದಾನಗಳ ವಿಷಯದಲ್ಲಿ ಬಿಸಿಸಿಐಗೆ ಹೊಸ ಸಮಸ್ಯೆಯನ್ನು ಹುಟ್ಟುಹಾಕಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.ಇದಾಗ್ಯೂ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಕದನವನ್ನು ವಿಶ್ವದ ಅತೀ ದೊಡ್ಡ ಸ್ಟೇಡಿಯಂ ಅಹ್ಮದಾಬಾದ್​ನಲ್ಲೇ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದ್ದು, ಹೀಗಾಗಿ ಭಾರತೀಯ ಕ್ರಿಕೆಟ್ ಮಂಡಳಿ ಈ ಯೋಜನೆಯಿಂದ ಹಿಂದೆ ಸರಿಯುವ ಸಾಧ್ಯತೆಯಿಲ್ಲ ಎಂದೇ ಹೇಳಬಹುದು.

source https://tv9kannada.com/photo-gallery/cricket-photos/no-india-vs-pakistan-world-cup-2023-match-in-ahmedabad-pcb-kannada-news-zp-597020.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ಮಿಯಾ ಮ್ಯಾಜಿಕ್: ಮಿಂಚಿನ ದಾಳಿಯೊಂದಿಗೆ ವಿಶೇಷ ಸಾಧನೆ ಮಾಡಿದ ಸಿರಾಜ್
WTC Final 2023: 15 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೂ ಕೊಹ್ಲಿ ದಾಖಲೆ ಮುರಿದ ರೋಹಿತ್ ಶರ್ಮಾ..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
  • Life Cycle Mutual Funds: ಸೆಬಿಯ ಹೊಸ ಮ್ಯೂಚುವಲ್ ಫಂಡ್ ನಿಯಮ, ಲಾಭ ಮತ್ತು ಅನಾನುಕೂಲಗಳ ಸಂಪೂರ್ಣ ಮಾಹಿತಿ.
  • RCB Ticket Scam Alert: ಐಪಿಎಲ್ ಟಿಕೆಟ್ ಹೆಸರಿನಲ್ಲಿ ವಂಚನೆ; ಬೆಂಗ್ಳೂರು ಪೊಲೀಸರಿಂದ ಹೈ-ಅಲರ್ಟ್!
  • ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.
  • ​Day Special, ಮಾರ್ಚ್ 22: ಇತಿಹಾಸದ ಪುಟಗಳಲ್ಲಿನ ಸುವರ್ಣ ಅಕ್ಷರಗಳು ಮತ್ತು ವಿಶ್ವ ಜಲ ದಿನದ ವಿಶೇಷತೆ
Copyright © 2026
CONTACT US
Theme by: Theme Horse
Proudly Powered by: WordPress