PM Kisan 14th installment release :ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ನಿಮ್ಮ ಖಾತೆಗೆ ಈ ಹಣ ಬಂದಿಲ್ಲ ಎಂದಾದರೆ ತಕ್ಶನ್ ಈ ನಂಬರ್ ಗೆ ಕರೆ ಮಾಡಿ .

PM Kisan 14th installment release : ಪ್ರಧಾನಿ ಮೋದಿ ಇಂದು ದೇಶದ 8.5 ಕೋಟಿ ರೈತರಿಗೆ ಉಡುಗೊರೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿ 14 ನೇ ಕಂತು ಬಿಡುಗಡೆಯಾಗಿದೆ. ನಿಮ್ಮ ಖಾತೆಗೂ ಪಿಎಂ ಕಿಸಾನ್ ಹಣ ಬಂದಿಲ್ಲ ಎಂದಾದರೆ ಆತಂಕಗೊಳ್ಳುವ ಅಗತ್ಯವಿಲ್ಲ. ಖಾತೆಗೆ ಹಣ ವರ್ಗಾವಣೆಯಾಗದಿರುವ ರೈತರು ಈ ಒಂದು ನಂಬರ್ ಗೆ ಕರೆ ಮಾಡಿದರೆ ಸಾಕು. ತಕ್ಷಣ ನಿಮ್ಮ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ರಾಜಸ್ಥಾನದಿಂದ ಪ್ರಧಾನಿ ರೈತರ ಹಣ ಬಿಡುಗಡೆ :
ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಈ ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. ಸರಕಾರ 8.5 ಕೋಟಿ ರೈತರ ಖಾತೆಗಳಿಗೆ 2000 ರೂ. ಬಿಡುಗಡೆ ಮಾಡಿದೆ.
ನೀವು ಪಿಎಂ ಕಿಸಾನ್ ಹಣವನ್ನು ಸ್ವೀಕರಿಸಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ಈ ರೀತಿ ಪರಿಶೀಲಿಸಿ :
>> ನೀವು ಹಣವನ್ನು ಪಡೆದಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ನೀವು ಬೆನೆಫಿಶಿಯರಿ ಸ್ಟೇಟಸ್ ಮೂಲಕ ಕಂಡು ಹಿಡಿಯಬಹುದು.
>> ಇದಕ್ಕಾಗಿ ನೀವು pmkisan.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
>> ಇದರ ನಂತರ, Farmers Corner ವಿಭಾಗದಲ್ಲಿ, ಬೆನೆಫಿಶಿಯರಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
>> ಈಗ ನೀವು ನಿಮ್ಮ ಮೊಬೈಲ್ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.
>> ನಂತರ Get Data ಮೇಲೆ ಕ್ಲಿಕ್ ಮಾಡಿ.
>> ಈಗ ಬೆನೆಫಿಶಿಯರಿ ಸ್ಟೇಟಸ್ ಮೇಲೆ KYC ಯ ಮುಂದೆ NO ಎಂದು ಬರೆದರೆ, ನಿಮ್ಮ ಕಂತು ಬಂದು ಸೇರಿಲ್ಲ ಎಂದರ್ಥ.
>> ನಿಮ್ಮ ಇ-ಕೆವೈಸಿ ಅಪ್ಡೇಟ್ ಆಗಿರದಿದ್ದರೆ ನಿಮ್ಮ 14ನೇ ಕಂತಿನ ಹಣ ಖಾತೆಗೆ ಸೇರುವುದಿಲ್ಲ.
ಲೆಕ್ಕಾಧಿಕಾರಿ ಮತ್ತು ಕೃಷಿ ಅಧಿಕಾರಿಯನ್ನು ಸಂಪರ್ಕಿಸಿ :
ಪಿಎಂ ಕಿಸಾನ್ ಯೋಜನೆಯ ನೋಂದಾಯಿತ ರೈತರಿಗೆ ಈ ಯೋಜನೆಯ ಲಾಭವನ್ನು ನೀಡಲಾಗುತ್ತದೆ. ಆದರೆ, ನೀವು ನೋಂದಾಯಿತ ರೈತರಾಗಿದ್ದು, ನಿಮ್ಮ ಖಾತೆಗೆ ಹಣ ಬಂದಿಲ್ಲ ಎಂದಾದರೆ ಮೊದಲನೆಯದಾಗಿ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಲೆಕ್ಕಾಧಿಕಾರಿ ಮತ್ತು ಕೃಷಿ ಅಧಿಕಾರಿಯನ್ನು ಸಂಪರ್ಕಿಸಿ. ಒಂದು ವೇಳೆ ಇಲ್ಲಿ ನಿಮಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದಾದರೆ ಸಂಬಂಧಿಸಿದ ಸಹಾಯವಾಣಿಗೆ ಕರೆ ಮಾಡಬಹುದು.
ನೀವು ಇಲ್ಲಿ ಸಂಪರ್ಕಿಸಬಹುದು :
>> PM-KISAN ಹೆಲ್ಪ್ ಡೆಸ್ಕ್ ಸೋಮವಾರದಿಂದ ಶುಕ್ರವಾರದವರೆಗೆ ತೆರೆದಿರುತ್ತದೆ. ಇದರ ಹೊರತಾಗಿ, ನೀವು pmkisan-ict@gov.in
ಇ-ಮೇಲ್ನಲ್ಲಿಯೂ ಸಂಪರ್ಕಿಸಬಹುದು . ಇದು ಇನ್ನೂ ಕೆಲಸ ಮಾಡದಿದ್ದರೆ 011-23381092 (ನೇರ ಸಹಾಯವಾಣಿ) ಸಂಖ್ಯೆಗೆ ಕರೆ ಮಾಡಿ.
ಕೃಷಿ ಸಚಿವಾಲಯ ನೀಡಿದ ಮಾಹಿತಿಯ ಪ್ರಕಾರ, ನೀವು ಕಲ್ಯಾಣ ವಿಭಾಗದಲ್ಲಿ ಸಂಪರ್ಕಿಸಬಹುದು :
, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವು ಯಾವುದೇ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ತಲುಪದಿದ್ದರೆ, ಅದನ್ನು ತಕ್ಷಣವೇ ಪರಿಹರಿಸಲಾಗುವುದು. ಇದಲ್ಲದೆ, ಈ ಯೋಜನೆಯ ಕಲ್ಯಾಣ ವಿಭಾಗವನ್ನು ಸಂಪರ್ಕಿಸಬಹುದು.
>> PM ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266
>> PM ಕಿಸಾನ್ ಸಹಾಯವಾಣಿ ಸಂಖ್ಯೆ: 155261
>> PM ಕಿಸಾನ್ ಲ್ಯಾಂಡ್ಲೈನ್ ಸಂಖ್ಯೆಗಳು: 011—23381092, 23382401
>> PM ಕಿಸಾನ್ ಹೊಸ ಸಹಾಯವಾಣಿ: 011-24300606, 0120-6025109