75ನೇ ಗಣರಾಜ್ಯೋತ್ಸವ: ಕಾರಿನ ಬದಲು 40 ವರ್ಷಗಳ ಬಳಿಕ ಸಾರೋಟಿನಲ್ಲಿ ಆಗಮಿಸದ ರಾಷ್ಟ್ರಪತಿ ದ್ರೌಪದಿ ಮುರ್ಮು.

ನವದೆಹಲಿ: 75ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ.

ಈ ಬಾರಿಯ ಗಣತಂತ್ರ ದಿವಸ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಶೇಷವಾದ ದಿನವಾಗಿದೆ. 40 ವರ್ಷಗಳ ಬಳಿಕ ರಾಷ್ಟ್ರಪತಿಗಳು ಸಾರೋಟಿನಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭಕ್ಕೆ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾರೋಟಿನಲ್ಲಿ ಕುಳಿತು ಸಾಗಿದ್ದು ಎಲ್ಲರ ಗಮನ ಸೆಳೆಯಿತು.

ಅಲ್ಲದೇ 250 ವರ್ಷಗಳ ಕಾಲ ಸೇವೆ ಪೂರೈಸಿದ ಅಂಗರಕ್ಷಕರು 1773ರಲ್ಲಿ ಆರಂಭವಾದ ರಾಷ್ಟ್ರಪತಿಗಳ ಅಂಗರಕ್ಷಕ ದಳ ಇದೇ ಮೊದಲ ಬಾರಿಗೆ ರಾಷ್ಟ್ರ ಧ್ವಜ ಹಿಡಿದು ಸಾಗಿದ್ದು ಮತ್ತೊಂದು ವಿಶೇಷ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *