ಬೆಂಗಳೂರು: ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಸಿದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಲೈವ್ ಬರಲಿದ್ದಾರೆ. ಫೆಬ್ರವರಿ.14ರಂದು ಸಂಜೆ.6.45ರಿಂದ ಲೈವ್ ನಲ್ಲಿ ಕುಳಿತು ಮಾತನಾಡಲಿರುವಂತ ಅವರು, ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಉತ್ತರ ನೀಡಲಿದ್ದಾರೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಫೆ.14ರಂದು ಸಂಜೆ 6.45ಕ್ಕೆ ಎಕ್ಸ್ ಮಾಧ್ಯಮದ ಮೂಲಕ ನೇರಪ್ರಸಾರದಲ್ಲಿ ಮಾತನಾಡಲಿದ್ದಾರೆ ಎಂಬುದಾಗಿ ತಿಳಿಸಿದೆ.
ಸಿಎಂ ಸಿದ್ಧರಾಮಯ್ಯ ಅವರು ಲೈವ್ ನಲ್ಲಿ ಸಾರ್ವಜನಿಕರು ಕೇಳುವಂತ ಪ್ರಶ್ನೆಗೆ ಉತ್ತರವನ್ನು ನೀಡಲಿದ್ದಾರೆ. ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯದ ಅಂಶಗಳ ಬಗ್ಗೆಯೂ ಮಾತನಾಡಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ.
ತೆರಿಗೆ ಹಂಚಿಕೆ ಬಗ್ಗೆ ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಲಿದ್ದಾರೆ. ಈ ಮೂಲಕ ಎಕ್ಸ್ ಲೈವ್ ನಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1