Horoscope 9 Mar : ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು.

ಮೇಷ ರಾಶಿ: ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಯೋಚಿಸಿ. ಕೌಟುಂಬಿಕ ವಲಯದಲ್ಲಿ ನಿಮ್ಮ ಬಗ್ಗೆ ಆದರ ಇರುವುದು. ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ನಿಮ್ಮ ಅನನುಕೂಲತೆಯನ್ನು ಯಾರ ಬಳಿಯೂ ಹೇಳಲಾರಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನಿಮ್ಮ ಮನಸೋ ಇಚ್ಛೆ ವರ್ತನೆಯು ಇತರಿಗೆ ಕಷ್ಟವಾಗುವುದು.

ವೃಷಭ ರಾಶಿ: ನೀವು ಶತ್ರುಗಳನ್ನು ಹೆಲ್ಲುವ ತಂತ್ರವನ್ನು ಮಾಡಬೇಕಾಗುವುದು. ಉದ್ಯೋಗದ ಕಾರಣಕ್ಕೆ ಪ್ರಯಾಣ ಅನಿವರ್ಯ ಎನಿಸುವುದು. ಸಾಲವನ್ನು ಪಡೆದು ಅವರ ಜೊತೆ ವಾಗ್ವಾದವನ್ನು ಮಾಡುವುದು ಬೇಡ.‌ ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಅಪರಿಚಿತರ ಜೊತೆಗಿನ ಮಾತುಗಳು ನಿಮಗೆ ಹಿತವೆನಿಸುವುದು. ನಿಮ್ಮ ಮಿತಿಯಲ್ಲಿ ಉಳಿತಾಯ ಮಾಡುವಿರಿ.

ಮಿಥುನ ರಾಶಿ: ನಿಮ್ಮವರ ನಿಂದನೆಯನ್ನು ಸಹಿಸುವುದು ಕಷ್ಟವಾಗುವುದು. ಪಾಲುದಾರಿಕೆಯಲ್ಲಿ ಕುತೂಹಲವು ಹೆಚ್ಚಿರುವುದು. ಯಾವುದೇ ಉದ್ವೇಗಕ್ಕೆ ಒಳಗಾಗದೇ ಕಾರ್ಯವನ್ನು ನಿರ್ವಹಿಸಿ. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಯಂತ್ರಗಳ ಬಳಕೆಯನ್ನು ನೀವು ಕಡಿಮೆ‌ ಮಾಡುವಿರಿ. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಅನಗತ್ಯ ಮಾತುಗಳಿಗಿಂತ ಮೌನವೇ ಲೇಸೆನಿಸಬಹುದು.

ಕಟಕ ರಾಶಿ: ನಿಮ್ಮ ಬಗ್ಗೆ ಯಾರಾದರೂ ಕುಹಕವಾಡುವುದು ನಿಮಗೆ ಬೇಸರ ತಂದೀತು. ಸಿಟ್ಟನ್ನು ವ್ಯಕ್ತಪಡಿಸದೇ ಸುಮ್ಮನಿರುವಿರಿ. ಯಾರಿಂದಲೋ ಆಗಬೇಕಾದ ಕೆಲಸವನ್ನು ನೀವು ಮಾಡಿಕೊಡಬೇಕಾಗುವುದು. ಎಲ್ಲದಕ್ಕೂ ಅದೃಷ್ಟವೊಂದೇ ಸಾಲದು. ನಿಮ್ಮ ಶ್ರಮವೂ ಅಗತ್ಯ. ಭೂಮಿಯನ್ನು ಖರೀದಿಯನ್ನು ಸದ್ಯಕ್ಕೆ ಕೈಬಿಡಿ.‌ ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ನಿಮ್ಮನ್ನು ಅವಲಂಬಿಸಿದವರಿಗೆ ಕಷ್ಟ ಕೊಡುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು.

ಸಿಂಹ ರಾಶಿ: ನೀವು ಗುಟ್ಟನ್ನು ಮಾಡಲು ಹೋಗಿ ಸಿಕ್ಕಿಬೀಳುಬಿರಿ. ಪರಿಚಿತರಿಂದ ನಿಮಗೆ ಉಡುಗೊರೆ ಸಿಗಲಿದೆ. ನಿಮ್ಮ ಅವ್ಯವಸ್ಥೆಗೆ ಯಾರನ್ನೋ‌ ದೂಷಿಸುವುದು ಬೇಡ. ಪಾಲಕರ ಜೊತೆ ಸುಂದರ ಸಮಯವನ್ನು ಕಳೆಯುವಿರಿ. ಕೊರತೆಯನ್ನು ನೆನೆದು ದುಃಖಿಸುವುದು ಬೇಡ. ಕಾಲಕ್ಕೆ ಸಿಗಬೇಕಾದುದು ಸಿಗಲಿದೆ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಸಾಕ್ಷಿಯು ಸಿಗದೇಹೋಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಪ್ರವಾಸದಿಂದ ತೊಂದರೆಯಾಗಬಹುದು. ನಿಮ್ಮ ಪ್ರಾಮಾಣಿಕ ಪ್ರಯತ್ನವನ್ನು ಬಿಡದೇ ಮುಂದುವರಿಸುವಿರಿ.

ಕನ್ಯಾ ರಾಶಿ: ಇಂದು ನೀವು ಆಲಸ್ಯದಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ತುರ್ತು ವಿಚಾರವನ್ನು ಮರೆಯುವಿರಿ. ಹಿರಿಯರ ಸೇವೆಯನ್ನು ಮಾಡುವಿರಿ. ಆಪ್ತರನ್ನು ದೂರವಿರಿಸಿಕೊಂಡು ಸಂಕಟಪಡುವಿರಿ. ವಿಶ್ವಾಸಘಾತವಾದರೆ ನಿಮಗೆ ನೋವಾಗಲಿದೆ. ವಿದ್ಯಾರ್ಥಿಗಳ ಶ್ರಮವು ವ್ಯರ್ಥವಾಗುವುದು. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಮನೆಯ ಸ್ಥಳವನ್ನು ಬದಲಾಯಿಸಬೇಕಾಗಬಹುದು. ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಮಕ್ಕಳ ಜೊತೆ ಎಲ್ಲಿಗಾದರೂ ಸುತ್ತಾಡಲು ಹೋಗುವಿರಿ. ಮೂರನೇ ವ್ಯಕ್ತಿಗಳ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ.

ತುಲಾ ರಾಶಿ: ನಿಮ್ಮ‌‌‌ ಮೇಲಿರುವ ಅಪವಾದವನ್ನು ಕಳೆದುಕೊಳ್ಳಲು ಬೇಕಾದ ಪ್ರಯತ್ನದಲ್ಲಿ ಇರುವಿರಿ. ಯಾವ ಯಶಸ್ಸನ್ನು ಪಡೆಯಲೂ ನೀವು ಯೋಚಿಸಲಾರಿರಿ. ಕಾನೂನಿನ ಸಮರದ ಬಗ್ಗೆ ಹೊಸ ದಾರಿಯಲ್ಲಿ ಸಾಗುವಿರಿ. ಅಪರಿಚಿತರ ಸಂಪರ್ಕವನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳುವಿರಿ. ಉತ್ಪನ್ನಗಳನ್ನು ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ದೈವಭಕ್ತಿಯಿಂದ ಮನಸ್ಸಿನ ಗೊಂದಲವನ್ನು ಪರಿಹರಿಸಿಕೊಂಡು ಸ್ಥೈರ್ಯವನ್ನು ತಂದುಕೊಳ್ಳುಬಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಇಂದಿನ ಆಹಾರವು ಆರೋಗ್ಯವನ್ನು ಕೆಡಿಸಬಹುದು. ಅಲ್ಪರ ಸಹವಾಸದಿಂದ ಅಭಿಮಾನಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಮಕ್ಕಳ ಖರ್ಚಿಗೆ ಹಣವನ್ನು ಕೊಡುವಿರಿ.

ವೃಶ್ಚಿಕ ರಾಶಿ: ಇಂದು ದೂರ ಪ್ರಯಾಣವನ್ನು ಯೊಚಿಸಿ ಮಾಡುವುದು ಉತ್ತಮ. ಉದ್ಯೋಗದಲ್ಲಿ ಉನ್ನತ‌ಸ್ಥಾನದ ಸುದ್ದಿಯನ್ನು ನೀವು ಕೇಳಬಹುದು. ಮಾನಸಿಕ ಸ್ಥಿತಿಯನ್ನು ಎಲ್ಲ ಸಂದರ್ಭದಲ್ಲಿಯೂ ಸಮತೋಲನದಿಂದ ಇಟ್ಟುಕೊಳ್ಳಿ. ನಿಮ್ಮ ಹಣದ ನಷ್ಟಕ್ಕೆ ಮಾತ್ಯಾರನ್ನೋ ದೂರುವುದು ಬೇಡ. ಹೊಸ ಉದ್ಯೋಗವು ನಿಮಗೆ ಆರ್ಥಿಕತೆಯಿಂದ ನೆಮ್ಮದಿಯನ್ನು ನೀಡುವುದು. ಗೃಹ ನಿರ್ಮಾಣದ ಬಗ್ಗೆ ಯೋಗ್ಯ ವ್ಯಕ್ತಿಗಳ ಜೊತೆ ಸಂವಹನ‌ ನಡೆಸಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ನಿಮ್ಮ ಹಿತೈಷಿಗಳಾದರೂ ಅವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ. ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಬರುವಂತೆ ವರ್ತಿಸುವಿರಿ.

ಧನು ರಾಶಿ: ಇಂದು ಭೂಮಿಯ ವ್ಯವಹಾರದಲ್ಲಿ ಮಾತ್ರ ತೊಡಗಿದರಿಗೆ ಲಾಭವಾಗುವಂತೆ ಅನ್ನಿಸುವುದು. ಯಾರನ್ನೂ ನಂಬುವುದು ಎಂಬ ಗೊಂದಲ ಇರುವುದು. ಸರ್ಕಾರೇತರ ಸಂಸ್ಥೆಗಳಿಂದ ಉನ್ನತ ಸ್ಥಾನಕ್ಕೆ ಅವಕಾಶ ಬರಬಹುದು. ದೂರದಲ್ಲಿರುವವರೆಗೆ ಮನೆಯ ನೆನಪು ಕಾಡಬಹುದು. ನೀವು ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಸ್ಥಿರಾಸ್ತಿಯನ್ನು ವ್ಯವಹಾರ‌ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಯುಕ್ತಿಯಿಂದ ಕೆಲಸ ಮಾಡುವುದು ಒಳಿತು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ‌ ಇರುಬುದು. ಸಾಹಿತ್ಯದಲ್ಲಿ ಆಸಕ್ತಿ ಮೂಡುವ ಸಾಧ್ಯತೆ ಇದೆ.

ಮಕರ ರಾಶಿ: ನಿಮ್ಮ ಆದಾಯದ ಬಗ್ಗೆ ಸ್ಪಷ್ಟ ಮಾಹಿತಿಯು ಯಾರ ಬಳಿಯೂ ಹೇಳುವುದು ಬೇಡ. ಉದ್ಯಮದ ವಿಚಾರದಲ್ಲಿ ಯಾರಿಗಾದರೂ ಅಸೂಯೆ ಬಂದು ಏನಾದರೂ ಮಾಡಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ಕಿರಿಕಿರಿಯನ್ನು ಅನುಭವಿಸಿದರೂ ಅದನ್ನು ವ್ಯಕ್ತ ಮಾಡುವುದು ಬೇಡ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ನಿಮ್ಮ ಸರಿಯಾದ ಕೆಲಸವನ್ನು ಮಾಡಿ. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ‌ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದಾಂಪತ್ಯಕ್ಕೆ ಹೆಚ್ಚು ಒತ್ತು ಕೊಡುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಿ ಹುಡುಕಾಟ ಮಾಡುವಿರಿ.

ಕುಂಭ ರಾಶಿ: ಇಂದು ಮನೆಯಲ್ಲಿ ಶುಭ ಕಾರ್ಯವನ್ನು ಮಾಡುವ ಬಗ್ಗೆ ಇತರರ ಜೊತೆ ಚರ್ಚಿಸುವಿರಿ. ಪಾಲುದಾರಿಕೆಯಲ್ಲಿ ಎಚ್ಚರ ತಪ್ಪಿಸಿಕೊಳ್ಳುವುದು ಬೇಡ. ಬಂಧುಗಳ ಮಾತು ನಿಮಗೆ ಕಿರಿಕಿರಿ ಅನಿಸಬಹುದು. ಸಿಟ್ಟು ಮಾಡಿಕೊಂಡು ಮನೆಯಿಂದ ಹೊರಟರೂ ವ್ಯವಹಾರದಲ್ಲಿ ಲಾಭ ಬರುವ ಕಾರಣ ಅನಿವಾರ್ಯವಾಗಿ ಶಾಂತರಾಗಬೇಕಾದೀತು. ‌ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಯಾರಾದರೂ ವ್ಯಕ್ತಿತ್ವನ್ನು ಅನುಸರಿಸುವ ಮೊದಲು ನಿಮ್ಮ ಬಗ್ಗೆ ಅರಿವು ಇರಲಿ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಾಗುವುದು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಆಪ್ತರ ಮಾತಿನ ಮೇಲೆ ಭರವಸೆ ಇಡಿ.

ಮೀನ ರಾಶಿ: ಇಂದು ನಿಮ್ಮ ವಾಹನದಿಂದ‌ ಲಾಭವು ಕಾಣಿಸಿಕೊಳ್ಳುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ಅನುಕೂಲತೆಗಳು ಸಹಜವಾಗಿ ನಿರ್ಮಾಣವಗಲಿದೆ. ಆಲಸ್ಯದಿಂದ ನಿಮ್ಮ‌ ವ್ಯಾಪರದಲ್ಲಿ ಹಿನ್ನಡೆ ಇರಲಿದೆ. ಸಾಲದ ಚಿಂತೆಯಲ್ಲಿ ನೀವು ಎಲ್ಲವನ್ನೂ ಮರೆಯುವಿರಿ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಕಳೆದುಕೊಂಡ ವಸ್ತುವನ್ನು ಬೇರೆ ರೀತಿಯಲ್ಲಿ ಪಡೆದುಕೊಳ್ಳುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಉದ್ಯೋಗದ ಬಗ್ಗೆ ಯಾರ ಬಳಿಯಾದರೂ ಚರ್ಚಿಸುವಿರಿ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *