ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ :ದಶಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸೌಭಾಗ್ಯ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ ಸಂಜೆ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:39 ರಿಂದ 11:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:40 ರಿಂದ 02:11 ರ ವರೆಗೆ.
ಮೇಷ ರಾಶಿ: ನೀವು ಇಂದು ಉಳಿಸಿಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದು ಹೆಚ್ಚಿರುವುದು. ಅನವಶ್ಯಕ ಮಾತುಗಳಿಂದ ಇತರರಿಗೆ ಬೇಸರವಾದೀತು. ನಿಮಗಿರುವ ಕುತೂಹಲವನ್ನು ಯಾರಾದರೂ ತಣಿಸಿಯಾರು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಣ್ಣ ಅಡಚಣೆಯಾದೀತು. ವಿದ್ಯಾರ್ಥಿಗಳು ಪರೀಕ್ಷೆಯ ಭಯವನ್ನು ಕಳೆದುಕೊಳ್ಳುವುದು ಉತ್ತಮ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ದೊಡ್ಡ ಸ್ವರದಲ್ಲಿ ಮಾತನಾಡುವುದು ನಿಮಗೆ ಇಷ್ಟವಾಗದು. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಇಂದಿನ ಕೆಲಸಕ್ಕೆ ಬೇಕಾದ ಉತ್ಸಾಹವನ್ನು ತಂದುಕೊಳ್ಳಿ.
ವೃಷಭ ರಾಶಿ: ನೀವು ಯಾವ ಸಂದರ್ಭದಲ್ಲಿಯೂ ವಿವೇಕಶೂನ್ಯವಾಗಿ ವರ್ತಿಸುವುದು ಬೇಡ. ಹಿರಿಯರ ಮೇಲೆ ಗೌರವವು ಕಡಿಮೆ ಆದೀತು. ಕೃಷಿಯು ನಿಮಗೆ ಮಾಡಬೇಕೆನಿಸಬಹುದು. ಇಂದಿನ ಕಾರ್ಯದ ಹೊರೆಯನ್ನು ಹೊತ್ತು ಓಡಾಡುವಿರಿ. ಇತರರನ್ನು ಹೋಲಿಸಿಕೊಂಡು ನಿಮ್ಮನ್ನು ನೀವು ಸಮಾಧಾನ ಮಾಡಿಕೊಳ್ಳುವಿರಿ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಸಂಗಾತಿಯನ್ನು ನೀವು ಎಷ್ಟೇ ಒಪ್ಪಿಸಿದರೂ ಅದರಿಂದ ಪ್ರಯೋಜನವಾಗದು. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿಕೊಳ್ಳುವಿರಿ. ಸರ್ಕಾರದ ಕಡೆಯಿಂದ ಒತ್ತಡ ಬರಬಹುದು.
ಮಿಥುನ ರಾಶಿ: ಇಂದು ನೀವು ಎಷ್ಟೊಂದು ಜೋಪಾನ ಮಾಡಿದರೂ ಎಲ್ಲಿಲಾದರೂ ಪೆಟ್ಟು ಬೀಳಬಹುದು. ಆತ್ಮವಿಶ್ವಾಸವಿದ್ದರೂ ಮುನ್ನುಗ್ಗುವ ಹಾದಿಯಲ್ಲಿ ಪೂರ್ಣ ನಂಬಿಕೆ ಇರದು. ಇಂದು ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾದೀತು. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ನೆರವಾಗುವಿಕೆ ಇರಲಿದ್ದು, ಸಂತೋಷವಾಗಲಿದೆ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ನಿಮ್ಮ ಮನಸ್ಸಿನ ಮೇಲೆ ಆಕ್ರಮಣಗಳು ಆಗಬಹುದು. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ. ಅತಿಯಾದ ಸೌಂದರ್ಯ ಪ್ರಜ್ಞೆಯಿಂದ ಸಮಯವು ಹಾಳಾಗುವುದು.
ಕಟಕ ರಾಶಿ: ಇಂದು ನಿಮಗೆ ಸ್ತ್ರೀಯರಿಂದ ಅಪವಾದ ಬರಬಹುದು. ಹಿರಿಯರ ಜೊತೆ ಸೌಜನ್ಯದಿಂದ ನಡೆದುಕೊಳ್ಳಬೇಕು. ದುಂದುವೆಚ್ಚಕ್ಕೆ ಯಾರಾದರೂ ತಿಳಿಹೇಳಿಯಾರು. ಇಂದು ನೀವು ಯಾರಿಂದಲಾದರೂ ಸಹಾಯವನ್ನು ಪಡೆಯುವಿರಿ. ಕಾರ್ಯಸ್ಥಳದ ಬದಲಾವಣೆ ಇರಲಿದೆ. ಅಧಿಕಾರವು ಸುಮಶಯ್ಯೆಯಾಗಿರದು. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ವ್ಯವಹಾರವು ಪ್ರಾಮಾಣಿಕವಾಗಿ ಇರಲಿ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನೀವು ಆರ್ಥಿಕತೆಯನ್ನು ಸರಿಯಾಗಿ ನಿರ್ವಹಿಸಿದ್ದನ್ನು ತೋರಿಸಬೇಕಾಗುವುದು.
ಸಿಂಹ ರಾಶಿ: ಇಂದು ನಿಮ್ಮ ಕಾರ್ಯಕ್ಕೆ ಬರುವ ಹಣಕಾಸಿನ ವಿಘ್ನವನ್ನು ಮಿತ್ರರು ಸರಿ ಮಾಡುವರು. ಕೃಷಿಯ ಬಗ್ಗೆ ಅನೇಕ ಕಾರಣಗಳಿಂದ ಆಸಕ್ತಿಯು ಸದ್ಯ ಕಡಿಮೆ ಆಗುವುದು. ನಿಮ್ಮ ಸಹಾಯವು ಇಂದು ಯಾವುದಾದರೊಂದು ರೀತಿಯಲ್ಲಿ ಹಿಂದಿರುಗಬಹುದು. ಯಂತ್ರಗಳ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಕಾಣುವಿರಿ. ಪುಣ್ಯ ಸ್ಥಳಗಳ ದರ್ಶನವನ್ನು ಮಾಡುವಿರಿ. ರಾಜಕೀಯ ಪ್ರೇರಿತದಿಂದ ನಿಮ್ಮ ಬಗ್ಗೆ ಸುಳ್ಳು ಸುದ್ದಿಗಳು ಬರಬಹುದು. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಮಕ್ಕಳ ಏಳಿಗೆಯಲ್ಲಿ ನಿಮಗೆ ಕುತೂಹಲ ಬರಬಹುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು. ನಿಮ್ಮ ವಸ್ತುಗಳನ್ನು ಇತರರಿಗೆ ನೀಡುವಿರಿ.
ಕನ್ಯಾ ರಾಶಿ: ಬಂಧುಗಳ ಜೊತೆ ಆಪ್ತ ಸಮಾಲೋಚನೆ ಇರುವುದು. ಸಾಮಾಜಿಕವಾಗಿ ಜನರ ಪ್ರೀತಿಯನ್ನು ಪಡೆಯುವಿರಿ. ವಿವಾಹಕ್ಕೆ ನೀವು ಕ್ಷಣ ಗಣನೆ ಮಾಡುತ್ತಿರುವಿರಿ. ಅಪೂರ್ಣವಾದ ಕೆಲಸಗಳಿಂದ ಚಿಂತೆ ಹೆಚ್ಚಾದೀತು. ಉನ್ನತವಾದ ಆಲೋಚನೆಗಳು ನಿಮ್ಮನ್ನು ದಡ ಸೇರಿಸುವುದು. ಹಳೆಯ ವಸ್ತುಗಳನ್ನು ಮಾರಾಟ ಮಾಡಬೇಕಾದೀತು. ಪ್ರಯಾಣವು ಅವಸರವಸರವಾಗಿ ಇರುವುದು. ನಾನಾ ರೀತಿಯಲ್ಲಿ ಹೂಡಿಕೆಯನ್ನು ಮಾಡುವ ಮನಸ್ಸಾಗುವುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನೌಕರರಿಗೆ ಕೆಲಸವನ್ನು ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ.
ತುಲಾ ರಾಶಿ: ಎಲ್ಲವೂ ಶತ್ರುಗಳಿಂದಲೇ ಆಗಬೇಕೆಂದಿಲ್ಲ. ನಿಮ್ಮ ಸ್ವಭಾವವೂ ಕೆಲವು ಅಧಿಕಾರಕ್ಕೆ ಅಡ್ಡಿಯುಂಟು ಮಾಡಬಹುದು. ಅಧಿಕ ಚಾಂಚಲ್ಯದಿಂದ ದ್ವಂದ್ವಕ್ಕೆ ಸಿಲುಕುವಿರಿ. ತಪ್ಪು ಗ್ರಹಿಕೆಯಿಂದ ನಿಮ್ಮ ಕೆಲಸಗಳು ಅಸ್ತವ್ಯಸ್ತವಾಗಬಹುದು. ಒಂದೇ ಕೆಲಸವನ್ನು ಮತ್ತೆ ಮತ್ತೆ ಮಾಡಬೇಕಾದೀತು. ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಕಾಣಬಹುದು. ಇನ್ನೊಬ್ಬರ ಭಾವನೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲಾರಿರಿ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ಯಾರ ತಪ್ಪನ್ನೂ ನೇರವಾಗಿ ಹೇಳದೇ ಅರ್ಥ ಮಾಡಿಸಿ, ತಿದ್ದಿ. ನಿಮ್ಮ ಘನತೆಗೆ ಧಕ್ಕೆ ಬರುವುದು. ಸಮಯಪಾಲನೆಗೆ ಪ್ರಶಂಸೆಯು ಸಿಗುವುದು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.
ವೃಶ್ಚಿಕ ರಾಶಿ: ಇಂದು ತಂದೆ, ತಾಯಿಯರ ಜೊತೆ ಬಹಳ ದಿನಗಳ ಅನಂತರ ಕಾಲ ಕಳೆಯುವ ಅವಕಾಶ ಸಿಕ್ಕಿರುವುದು ಸಂತೋಷದ ವಿಚಾರವಾಗಿದೆ. ಇಂದಿನ ವ್ಯಾಪಾರವನ್ನು ಬಹಳ ಚುರುಕಿನಿಂದ ಮಾಡುವಿರಿ. ನಿಮ್ಮ ನಿರ್ಧಾರಗಳನ್ನು ಬೇರೆ ಯಾರಾದರೂ ಬದಲಿಸಬಹುದು. ಇದು ನಿಮ್ಮ ಅಪಕ್ವತೆಯನ್ನು ತಿಳಿಸಿಬಹುದು. ಉದ್ಯಮದಲ್ಲಿ ಚಿಂತಿತ ಲಾಭ ಕಾಣದೇ ಮನಸ್ಸು ಕುಗ್ಗಬಹುದು. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಮೇಲಧಿಕಾರಿಗಳ ಮಾತು ಕಿರಿಕಿರಿ ಎನಿಸಬಹುದು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ನಿಮ್ಮ ಇಂದಿನ ಮಾನಸಿಕ ಸ್ಥಿತಿಯನ್ನು ಯಾರ ಬಳಿಯಾದರೂ ಹೇಳಿ ನೆಮ್ಮದಿ ತಂದುಕೊಳ್ಳುವಿರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ.
ಧನು ರಾಶಿ: ಕುಟುಂಬದ ಜೊತೆ ಪುಣ್ಯಸ್ಥಳಗಳಿಗೆ ಹೋಗುವಿರಿ. ಇನ್ನೊಬ್ಬರ ಬಗ್ಗೆ ಅತಿಯಾದ ಆಲೋಚನೆಯ ಅವಶ್ಯಕತೆ ಇರದು.ನಿಷ್ಠುರದ ಮಾತುಗಳಿಂದ ಸ್ನೇಹಿತರನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮ ಕುಶಲ ಕರ್ಮಕ್ಕೆ ಪ್ರಶಂಸೆ ಸಿಗಲಿದೆ. ಹಣ ವ್ಯಯವನ್ನು ಅಧಿಕ ಮಾಡುವುದು ಬೇಡ. ದೇವರ ಕಾರ್ಯದಲ್ಲಿ ಮಗ್ನರಾಗುವಿರಿ. ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಸಹೋದರಿಯರ ನಡುವೆ ಮನಸ್ತಾಪವು ಬರಬಹುದು. ಉದ್ಯಮದಲ್ಲಿ ಕೆಲವು ಮಾರ್ಪಾಡಿನ ಅವಶ್ಯಕತೆ ಇರಲಿದೆ. ಪ್ರಶಂಸೆಯಿಂದ ಅಹಂಕಾರವು ಬರುವುದು. ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೊಸ ಮನೆಯ ಖರೀದಿಯನ್ನು ಮಾಡುವಿರಿ.
ಮಕರ ರಾಶಿ: ನಿಮಗಾಗದವರ ಜೊತೆ ಇಂದು ಕಲಹವನ್ನು ಮಾಡಿಕೊಳ್ಳುವಿರಿ. ಇದರ ಕಾರಣ ನಿಮ್ಮ ಮನಸ್ಸಿಗೆ ಶಾಂತತೆ ಕಡಿಮೆಯಾಗುವುದು. ನಿಮ್ಮ ಮಾತಿಗೆ ಆಕರ್ಷಿತರಾಗಬಹುದು. ತಂತ್ರದಿಂದ ಶತ್ರುವನ್ನು ಗೆಲ್ಲುವಿರಿ. ವ್ಯವಹಾರವನ್ನು ಮಾಡಲು ಓಡಾಟ ಹೆಚ್ಚಾಗಬಹುದು. ಅನಿರೀಕ್ಷಿತ ಧನವ್ಯಯದಿಂದ ಆತಂಕವು ಆಗಲಿದೆ. ರಾಜಕೀಯದಿಂದ ನಿಮಗೆ ಪ್ರೇರಣೆ ಸಿಗುವುದು. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಅನವಶ್ಯಕವಾಗಿ ಆಡುವ ಮಾತುಗಳು ನಿಮ್ಮ ಮೇಲೆನೊ ಗೌರವವನ್ನು ಕಡಿಮೆ ಮಾಡಿಸೀತು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ.
ಕುಂಭ ರಾಶಿ: ನಿಮ್ಮ ಮಿತ್ರರ ಕಾರಣಕ್ಕೆ ನಷ್ಟವಾಗಲಿದೆ. ಹೊಸ ಪಾಲುದಾರಿಕೆಯಿಂದ ನಿಮಗೆ ಕಿರಿಕಿರಿಯಾಗಬಹುದು. ಹೇಳಿಕೊಳ್ಳಲು ಕಷ್ಟವೆನಿಸಬಹುದು. ಇಂದು ನೀವು ವಿವಾದಗಳಿಗೆ ಸಮಯವನ್ನು ಹೆಚ್ಚು ಕೊಡುವಿರಿ. ಸಲ್ಲದ ಆಸೆಗಳನ್ನು ಬೆಳಿಸಿಕೊಳ್ಳುವಿರಿ. ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಸಾಹಸ ಮಾಡಬೇಕಾಗುವುದು. ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಇಂದು ಆದ ನಿದ್ರಾಭಂಗದಿಂದ ದಿನವು ಸರಿಯಾಗದೇ ಹೋಗಬಹುದು. ಎಲ್ಲರ ಮೇಲೂ ವಿನಾ ಕಾರಣ ಕೋಪ ಮಾಡಿಕೊಳ್ಳುವಿರಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಎಲ್ಲದಕ್ಕೂ ದುಷ್ಟರನ್ನು ದೂಷಿಸುವುದು ಸರಿಯಾಗದು.
ಮೀನ ರಾಶಿ: ನಿಮ್ಮ ಅತಿಯಾದ ಸಭ್ಯತೆಯು ದುರುಪಯೋಗವಾಗಬಹುದು. ಕೌಟುಂಬಿಕವಾಗಿ ಸ್ಥಿರಾಸ್ತಿಯ ವಿಚಾರದಲ್ಲಿ ಕಲಹವು ಉಂಟಾಗುವ ಸಾಧ್ಯತೆ ಇದೆ. ಇಂದು ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆ ಇರಲಿ. ಇಷ್ಟ ಬಂದ ಕಡೆ ನೀವು ಸುತ್ತಾಡುವಿರಿ. ಹೊಸ ಅನ್ವೇಷಣೆಯನ್ನು ನೀವು ಇಷ್ಟಪಡುವಿರಿ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ಬೇಜವಾಬ್ದಾರಿತನದಿಂದ ನಿಮ್ಮ ಅಧಿಕಾರವನ್ನು ಕಳೆದುಕೊಳ್ಳಬೇಕಾಗುವುದು. ಅನಾರೋಗ್ಯದ ಸಮಸ್ಯೆಯಿಂದ ಬಳಲಬೇಕಾಗುವುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ ಇರುವ ನಿಮ್ಮ ವಸ್ತುವನ್ನು ಬಹಳ ಪ್ರಯತ್ನದಿಂದ ಪಡೆಯುವಿರಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1