Horoscope Today 20 February 2025: ಅಸಹಾಯಕತೆಯನ್ನು ಸವಾಲಾಗಿ ಪಡೆದರೆ ಯಶಸ್ಸು ಪಡೆಯಬಹುದು.

Horoscope Today 20 February 2025: ಕಳೆದುಕೊಂಡಿದ್ದನ್ನು ಕಳದಲ್ಲಿಯೇ ಪಡೆಯುವಿರಿ

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ಗಂಡ, ಕರಣ : ವಣಿಜ, ಸೂರ್ಯೋದಯ – 06 – 55 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:47 – 14:14, ಯಮಘಂಡ ಕಾಲ 08:24 – 09:51, ಗುಳಿಕ ಕಾಲ 11:19 – 12:47.

ಮೇಷ ರಾಶಿ: ಇಂದು ಸಿಗುವ ವ್ಯಕ್ತಿಗಳು ನಿಮ್ಮ ಮೇಲೆ‌ ಸದ್ಭಾವ ಮೂಡಿಸದೇ ಇರಬಹುದು. ಅಧಿಕ ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ನಿಮ್ಮಲ್ಲಿರುವ ಒಳ್ಳೆಯದನ್ನು ನಿಜವಾಗಿಯೂ ಪ್ರಶಂಸಿಸಲು ನಿಮ್ಮಿಬ್ಬರಿಗೂ ಸ್ವಲ್ಪ ಅಂತರದ ಅಗತ್ಯವಿದೆ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ನಿಮಗೆ ಬರುವ ಆಸ್ತಿಯಲ್ಲಿ ಕಿರಿಕಿರಿ ಮಾಡುವಿರಿ. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನಿಮ್ಮ ಹೊಸ ಸುದ್ದಿಯು ಎಲ್ಲರಿಗೂ ಅಚ್ಚರಿ ಮೂಡಿಸುವುದು.

ವೃಷಭ ರಾಶಿ: ಇಂದು ಸುಮ್ಮನೇ ಇರುವ ಬದಲು ಏನನ್ನಾದರೂ ಹೊಸತನ್ನು ಮಾಡುವ ಯೋಜನೆ ರೂಪಿಸಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಸಂಬಂಧಗಳಲ್ಲಿ ಒಡಕು ಬರಬಹುದು. ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು ವಿಚಾರಗಳನ್ನು ನಿರ್ಲಕ್ಷ್ಯಿಸದಿದ್ದರೆ ದೊಡ್ಡದಾಗಬಹುದು. ಅಸಹಾಯಕತೆಯನ್ನು ಸವಾಲಾಗಿ ಪಡೆದರೆ ಯಶಸ್ಸು ಪಡೆಯಬಹುದು. ಕಷ್ಟಗಳ ನಿವಾರಣೆಗೆ ದೇವರಲ್ಲಿ ಭಕ್ತಿಯಿಂದ ಪ್ರಾರ್ಥಿಸುವಿರಿ. ಆಪ್ತರಿಂದ ಸಲಹೆಯನ್ನು ಕೇಳಲು ನಿಮಗೆ ಮುಜುಗರವಾಗಬಹುದು. ಇನ್ನೊಬ್ಬರ ವಸ್ತುವನ್ನು ನೀವು ಇಟ್ಟುಕೊಳ್ಳಲಿದ್ದೀರಿ. ವಿದೇಶದಲ್ಲಿ ಇರುವವರಿಗೆ ಆರೋಗ್ಯವು ಕೆಡಬಹುದು. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು. ಬಂಧುಗಳ ಕಿರಿಕಿರಿಯನ್ನು ಸಹಿಸುವುದು ನಿಮಗೆ ಕಷ್ಟವಾದೀತು.

ಮಿಥುನ ರಾಶಿ: ಅನುಕಂಪದ ಆಧಾರದಿಂದ ಅಧಿಕಾರ ಪಡೆಯಲು ಕಷ್ಟ. ಸಂಗಾತಿಯ ಜೊತೆ ಕಾಲ ಕಳೆಯಲು ಹವಣಿಸುವಿರಿ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಪರರ ಸ್ವತ್ತನ್ನು ಯಾವುದಾದರೂ ರೀತಿಯಲ್ಲಿ ಪಡೆಯುವ ಯೋಚನೆ ಬರಬಹುದು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ಇಂದಿನ ಕನಸು ನಿಮಗೆ ಭೀತಿಯನ್ನು ತಂದೀತು. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ತಂದೆ ಮತ್ತು ತಾಯಿಯರಿಗೆ ಪ್ರಿಯವಾದುದನ್ನು ಮಾಡುವಿರಿ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶೆ. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ.

ಕರ್ಕಾಟಕ ರಾಶಿ: ಅಧಿಕಾರಿ ವರ್ಗಕ್ಕೆ ಸೂಕ್ತ ಮಾಹಿತಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿರ್ಲಕ್ಷ್ಯವನ್ನು ಜವಾಬ್ದಾರಿಯ ಯಾವ ವೃತ್ತಿಯಲ್ಲಿಯೂ ಮಾಡುವುದು ಬೇಡ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಓಡುತ್ತಿದ್ದು ಅದನ್ನು ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು. ನಿಮ್ಮ ಹೆಸರನ್ನು ಹೇಳಿ ಯಾರಾದರೂ ವಂಚಿಸಿಯಾರು. ನಿಮ್ಮನ್ನು ಕಂಡರೆ ಕನಿಕರ ಹುಟ್ಟುವಂತೆ ಇರುವಿರಿ. ಕುಟುಂಬದಿಂದ ದೂರವಿದ್ದರೂ ಮಾತುಕತೆಗಳ ಮೂಲಕ ಹತ್ತಿರವಾಗುವಿರಿ. ಪೂರ್ಣಪ್ರಮಾಣದ ಕೃಷಿಯಲ್ಲಿ ತೊಡಗುವ ಆಸಕ್ತಿ ಉಂಟಾಗಬಹುದು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಲಿದ್ದೀರಿ. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು.

ಸಿಂಹ ರಾಶಿ: ಅಧಿಕಾರದ ಬಳಕೆಯಿಂದ ಎಚ್ಚರಿಕೆ ಬರಬಹುದು. ಪರರ ಗುಣದಲ್ಲಿ ಅಸೂಯೆ ಇರುವುದು. ಸಂಗಾತಿಯ ಪ್ರೀತಿಗೆ ನೀವು ಸೋಲಬಹುದು. ಎಷ್ಟೋ ದಿನಗಳಿಂದ ಬಯಸಿದ್ದ ವಸ್ತುವನ್ನು ನೀವು ಅನಾಯಾಸವಾಗಿ ಯಾರಿಂದಲೋ ಪಡೆಯುವುರಿ. ವಾಸಸ್ಥಳ ಬದಲಾಣೆ ಮಾಡುವಿರಿ. ತಿಳಿವಳಿಕೆ ಇಲ್ಲದೇ ಮಾತನಾಡಿ ಅಪಹಾಸ್ಯಕ್ಕೆ ಸಿಲುಕುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸಿ ಸುಮ್ಮನಿರುವುದು ಉತ್ತಮ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು ತೋರುವುದು. ನಿಮ್ಮ ಬಗ್ಗೆ ಇರುವ ಕಾಳಜಿಗೆ ನೀವು ಮನಸೋಲುವಿರಿ. ಮನೆಯ ಕೆಲಸಲ್ಲಿ ಸಮಯವು ಹೋಗಿದ್ದೇ ಗೊತ್ತಾಗದು. ಇಂದಿನ ಕಾರ್ಯ ಬೆಟ್ಟವನ್ನು ಬಗೆದು ಇಲಿಯ ತನ್ನ ಹಿಡಿದಂತೆ ಆಗಬಹುದು.

ಕನ್ಯಾ ರಾಶಿ: ಇಂದು ವ್ಯಾಪಾರದ ವಿಚಾರದಲ್ಲಿ ಮನೆಯವರ ಜೊತೆ ಕಲಹ. ನಿಮಗೆ ದ್ವಂದ್ವಗಳು ಒಂದು ಸರಿಯಾದ ನಿರ್ಧಾರಕ್ಕೆ ಬರಲು ಅನುಕೂಲ ಮಾಡಿಕೊಡುವುದಿಲ್ಲ. ಬಾರದೇ ಇರುವುದನ್ನು ನೆನಪುಮಾಡಿಕೊಂಡು ಬೇಸರಿಸುವಿರಿ. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಸಪಕ್ವವಾದ ಮನಸ್ಸಿಗೆ ಏನು ಹೇಳಿದರೂ ಪ್ರಯೋಜನವಾಗದು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇದರಿಂದ ನಿಮಗೆ ಬಹಳ ಮುಜುಗರವಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳದೇ ವರ್ತಿಸಿ. ನಿಮಗೆ ಸಿಕ್ಕ ಜವಾಬ್ದಾರಿಯನ್ನು ತಪ್ಪಿಸಿಕೊಳ್ಳಲು ಮಾರ್ಗವನ್ನು ಹುಡುಕುವಿರಿ. ಇಂದು ನೀವು ನಂಬಿದ ಅದೃಷ್ಟವು ಕೈ ಕೊಡಬಹುದು. ಕೃಷಿಕರ ವಸ್ತುಗಳು ಕಾಣೆಯಾಗಬಹುದು. ನಿಮಗೆ ಸಿಗಬೇಕಾದ ಹಣವು ಸಿಗದೇ ಇರುವುದರಿಂದ ಬೇಸರ ಬೇಡ. ಸ್ತ್ರೀಯರ ಬಗ್ಗೆ ನಿಮಗೆ ಅನುಕಂಪವಿದ್ದರೂ ಅದನ್ನು ಹೇಳಿಕೊಳ್ಳಲಾಗದು.

ತುಲಾ ರಾಶಿ: ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಪ್ರಶಂಸಿಸಬಹುದು. ವಿವಾಹ ಸಂಬಂಧದ ಮಾತುಕತೆಗಳು ಸಮಾಧಾನ ಕೊಡದು. ಕೃತಘ್ನರಾಗಿ ಮೆರೆಯುವುದು ಬೇಡ. ಎಲ್ಲಿಯಾದರೂ ಜಾರಿ ಬೀಳಲು ಹೆಚ್ಚು ಸಮಯ ಬೇಡ. ಅಂಗಳವನ್ನೇ ಹಾರಲಾರದವನು ಆಕಾಶವನ್ನು ಹಾರಿಯಾನು ಎಂದು ನಿಮ್ಮನ್ನು ಲೇವಡಿ ಮಾಡಬಹುದು. ಎಷ್ಟೇ ಸೌಕರ್ಯವಿದ್ದರೂ ಇನ್ನಷ್ಟು ಬೇಕೆನಿಸಬಹುದು. ಅತಿಥಿಗಳ ಆಗಮನದಿಂದ ನಿಮ್ಮ ಯೋಜನೆಗಳು ಅಸ್ತವ್ಯಸ್ತ. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮವರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು. ಇದು ನಿಮಗೆ ಸಾಧನೆಗೆ ಪ್ರೇರಣೆಯೂ ಆಗಬಹುದು. ಹತ್ತಾರೂ ಆಲೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮ ದಿನಚರಿಯನ್ನು ಹಾಳು ಮಾಡಬಹುದು.

ವೃಶ್ಚಿಕ ರಾಶಿ: ಇಂದು ನೀವು ಕಾರ್ಯಕ್ಕೆ ಹೊರಡುವ ಮೊದಲೇ ತನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಯಾವುದನ್ನೂ ವ್ಯರ್ಥ ಎಂದು ಭಾವಿಸದೇ ಸಕಾರಾತ್ಮಕವಾಗಿ ಇರಿ. ಏಕಕಾಲದಲ್ಲಿ ಅನೇಕ ವಿಚಾರಗಳ ಚಿಂತನೆಯನ್ನು ನಡೆಸುವಿರಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗ್ಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಸಾಲದಿಂದ ಮುಕ್ತನಾಗಲು ನೀವು ಮಾಡುವ ಕಾರ್ಯ ವಿಫಲವಾಗುಬುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ. ಕಛೇರಿಯಲ್ಲಿ ನಿಮ್ಮದಾದ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳುವಿರಿ. ಕೆಲವು ಸಂದರ್ಭಗಳು ನಿಮ್ಮ ಪರೀಕ್ಷೆಗಾಗಿ ಬರಲಿದ್ದು ಅದನ್ನು ಎದುರಿಸುವುದು ನಿಮ್ಮ ಮೇಲಿದೆ. ಮೂರ್ಖರಂತೆ ವರ್ತಿಸಿ ಎಲ್ಲರ ನಡುವೆ ನಗೆಪಾಟಲಾಗುವಿರಿ.

ಧನು ರಾಶಿ: ಶತ್ರುಗಳು ಆಕ್ರಮಣ ಮಾಡುವ ಸೂಚನೆ ನಿಮಗೆ ಸಿಗಬಹುದು. ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ನಿಮ್ಮ ಎಲ್ಲಾ ಶ್ರಮದಾಯಕ ಯೋಜನೆ ಮತ್ತು ಸಂಘಟನೆಯು ಅಂತಿಮವಾಗಿ ಫಲವನ್ನು ನೀಡಲಿದೆ. ದೈಹಿಕ ಕ್ರೀಡೆ ಹಾಗೂ ಚಟುವಟಿಕೆಗಳಲ್ಲಿ ಜಯ. ವಿಶೇಷವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು. ನಿಗದಿತ ಸಮಯಕ್ಕಿಂತ ಮೊದಲೇ ಸಾಲವನ್ನು ತೀರಿಸಿದ್ದಕ್ಕೆ ನಿಮ್ಮಲ್ಲಿ ಅಹಂಕಾರವು ಜಾಗರೂಕವಾಗಬಹುದು. ಅನ್ಯರು ನೆನಪಿಟ್ಟುಕೊಳ್ಳುವ ಯಾವುದಾದರೂ ಕಾರ್ಯವನ್ನು ಮಾಡುವಿರಿ. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದ್ದು ನಿಮಗೆ ಬೇಸರ ತರಿಸೀತು.

ಮಕರ ರಾಶಿ: ಅಚಾತುರ್ಯದಿಂದ ಮಾತನಾಡಿ ನಿಮ್ಮನ್ನು ನೀವೇ ಕೆಳಗೆ ಇಳಿಸಿಕೊಳ್ಳುವಿರಿ. ನೀವು ಇಂದು ಸಂಗಾತಿಯ ಜೊತೆ ವಾಸ್ತವ ಬದುಕಿನ ಬಗ್ಗೆ ಚಿಂತನೆಯನ್ನು ನಡೆಸುವಿರಿ. ವೃತ್ತಿ ಜೀವನದಲ್ಲಿ ಗೌರವವನ್ನು ಮತ್ತು ಇರುವುದಕ್ಕಿಂತ ಹೆಚ್ಚಿನ ಸ್ಥಾನವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು. ಉದ್ಯೋಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ. ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು. ಬಾಡಿಗೆ ಮನೆಯ ಕಿರಿಕಿರಿಯು ನಿಮಗೆ ಸಾಕಾಗಿ ಹೋಗುವುದು. ಮುನ್ನೋಟ ಸರಿಯಾಗಿದ್ದರೆ ಎಲ್ಲವೂ ನಿಮಗೆ ಜೊತೆಗಾವುದು. ಅಧಿಕಾರಿಗಳಿಂದ ನಿಮ್ಮ ಆರ್ಥಿಕತೆಯು ಪರಿಶೀಲನೆಗೊಳ್ಳುವುದು. ದುಡಿಮೆಯ ಸ್ವಲ್ಪ ಭಾಗವನ್ನಾದರೂ ಇತರಿಗೆ ಕೊಡಬೇಕು ಎಂದು ಅನ್ನಿಸಬಹುದು.

ಕುಂಭ ರಾಶಿ: ಅಧಿಕಾರ ನೀಡುವ ನಂಬಿಕೆ ಹುಟ್ಟಿಸಿ ಕಾರ್ಯವನ್ನು ಮಾಡಿಸಿಕೊಳ್ಳುವರು. ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ಅಪರಿಚಿತರ ನಡುವೆ ಆದ ಕಲಹವು ವಿಪರೀತಕ್ಕೆ ಹೋಗುವುದು. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ಅದಕ್ಕಾಗಿ ಅವರ ಜೊತೆ ಮನಸೋ ಇಚ್ಛೆ ವರ್ತಿಸುವುದು ಬೇಡ. ಅವರಿಗೆ ತಮ್ಮಷ್ಟಕ್ಕೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಿ. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು ಯೋರಿಸುತ್ತದೆ. ಆಹಾರವನ್ನು ಒಳ್ಳೆಯ ಮನಸ್ಸಿನಿಂದ ತ್ಯಾಗ ಮಾಡಿ. ಸ್ವಂತ ಕಾರ್ಯದ ಕಾರಣ ಕಛೇರಿಗೆ ವಿರಾಮ ಹೇಳುವಿರಿ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು. ನಿಮ್ಮ ಸುತ್ತಲೂ ನಡೆಯುವುದನ್ನು ಹತ್ತಿರದಿಂದ ಗಮನಿಸಿ, ನೀವು ನಿಮ್ಮನ್ನು ಸರಿಯಾಗಿ ಕಂಡುಕೊಳ್ಳಿ.

ಮೀನ ರಾಶಿ: ಅಮೂಲ್ಯ ವಸ್ತುಗಳ ವಿಕ್ರಯದಲ್ಲಿ ಅಧಿಕ‌ ಲಾಭ. ಹೂಡಿಕೆಯನ್ನು ಅದರ ಮೆಲೇಯೇ ಮಾಡಬಹುದು. ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ಧಾರ್ಮಿಕ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಯೋಜನೆಯನ್ನು ಅನೇಕರ ಜೊತೆಗೂಡಿ ಚರ್ಚಿಸುವಿರಿ. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಅಪರಿಚಿತ ಸ್ತ್ರೀಯನ್ನು ಕಂಡು ಮೋಹಗೊಳ್ಳುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ಸಂಗಾತಿಗೆ ಬೇಕಾದ ಸಹಕಾರವನ್ನು ಖುಷಿಯಿಂದ ಮಾಡುವಿರಿ.

Leave a Reply

Your email address will not be published. Required fields are marked *