ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ, ಉತ್ತರಾಭಾದ್ರ/ರೇವತೀ ನಿತ್ಯನಕ್ಷತ್ರ, ಭಾನುವಾರ ಮರೆಯುವುದು ಉತ್ತಮ, ಹಳೆಯ ನೆನಪಿನಿಂದ ನೋವು, ಮಕ್ಕಳಿಗೆ ಸಂತೋಷ, ಸಣ್ಣ ವ್ಯಾಪಾರದಿಂದ ಸಮಾಧಾನ. ಇಂದಿನ ಪಂಚಾಗ ಮತ್ತು ಭವಿಷ್ಯ ಇಲ್ಲಿದೆ.

ಮಾರ್ಚ್ 02: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಉತ್ತರಾಭಾದ್ರ/ರೇವತೀ, ಯೋಗ : ಶುಭ, ಕರಣ : ತೈತಿಲ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:11 – 18:40, ಯಮಘಂಡ ಕಾಲ 12:45 – 14:14, ಗುಳಿಕ ಕಾಲ 15:42 – 17:11.
ಮೇಷ ರಾಶಿ: ಇಂದು ಆತುರದಲ್ಲಿ ಎಲ್ಲವನ್ನೂ ನೀವು ಬೇಕು ಎನ್ನುವುದು ಮೂರ್ಖತನವಾದೀತು. ನಿಮ್ಮ ಪ್ರಯತ್ನಗಳು ಮಾತ್ರ ಸರಿಯಾಗಿರಲಿ. ಫಲವನ್ನು ಕೊಡುವವನು ಕೊಟ್ಟೇಕೊಡುತ್ತಾನೆ. ತಾಯಿ ಮಾತಿನಿಂದ ನಿಮಗೆ ಹೊಸ ಸ್ಪೂರ್ತಿಯು ಸಿಗಬಹುದು. ಸಹೋದರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ನಿಮ್ಮ ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸಿ ಸಂತೋಷಿಸುವಿರಿ.
ವೃಷಭ ರಾಶಿ: ಧಾರ್ಮಿಕ ಆಚರಣೆಗಳಲ್ಲಿ ಅತಿಯಾದ ಆಸಕ್ತಿಯು ಇರದು. ವೃತ್ತಿಯ ಅನ್ವೇಷಣೆಗೆ ಸರಿಯಾದ ಸಮಯವಲ್ಲ. ನಿಮ್ಮ ಮಾತಿಗೆ ಮೆಚ್ಚುಗೆ ಸಿಕ್ಕರೂ ಕೆಲಸ ಮಾತ್ರ ಆಗದು. ಯಾರನ್ನೋ ಶಪಿಸುತ್ತ ಇರುವುದು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಬೇಸರವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ಇಂದು ಯಾರ ಬಗ್ಗೆಯೂ ಸರಿ ಹಾಗೂ ತಪ್ಪುಗಳ ತುಲನೆಯು ಕಷ್ಟವಾಗುವುದು. ಏನನ್ನಾದರೂ ಬಳಸುವ ಮೊದಲು ಪರೀಕ್ಷಿಸಿಕೊಳ್ಳಿ. ಮಕ್ಕಳಲ್ಲಿ ಬದಲಾವಣೆಯನ್ನು ನೀವು ಕಾಣಬಹುದು. ಮೃದುವಾದ ಮಾತನ್ನು ನೀವು ಅಭ್ಯಾಸ ಮಾಡಿಕೊಳ್ಳಬೇಕಾದೀತು. ನಿಮ್ಮ ಕಾರ್ಯದಲ್ಲಿ ಮಗ್ನರಾಗಿ ಎಲ್ಲರನ್ನೂ ಮರೆಯುವಿರಿ. ಬಂಧುಗಳ ಜೊತೆ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹೊರಗಿನ ಆಹಾರವನ್ನು ತಿನ್ನುವ ಸ್ಥಿತಿ ಬರಬಹುದು. ಅಸ್ಥಿರತೆಯು ನಮಗೆ ಗೊಂದಲವನ್ನು ಸೃಷ್ಟಿಸುವುದು.
ಮಿಥುನ ರಾಶಿ: ಬೆನ್ನು ಬಿಡದೇ ಬರುವ ಅನಾರೋಗ್ಯವು ನಿಮ್ಮ ಚಿಂತೆಗೀಡುಮಾಡುವುದು. ಮನೆಯ ಕೆಲಸಕ್ಕೆ ಯಾರೂ ಬರದಿರುವುದು ನಿಮಗೆ ಅಸಮಾಧನಾವಾಗುವುದು. ಕಛೇರಿಯಲ್ಲಿ ನಿಮಗೆ ತಪ್ಪಿತಸ್ಥ ಭಾವವು ಬರಬಹುದು. ಸರ್ಕಾರಿ ಕೆಲಸಕ್ಕಾಗಿ ಹಣವನ್ನು ಕೊಡುವಿರಿ. ಯಾರಿಗೂ ಎತ್ತರದ ದನಿಯನ್ನು ಮಾಡುವುದು ಬೇಡ. ಹೊಸ ಉದ್ಯಮವನ್ನು ಮಾಡಲು ಆಪ್ತರ ಅಥವಾ ಅನುಭವಿಗಳ ಸಲಹೆ ಬೇಕಾದೀತು. ದಾಂಪತ್ಯದಲ್ಲಿನ ಒಡಕು ಎಲ್ಲರಿಗೂ ಗೊತ್ತಾಗುವ ಮೊದಲೇ ಸರಿ ಮಾಡಿಕೊಳ್ಳಿ. ಆಕಸ್ಮಿಕ ವಾರ್ತೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ನಿಮ್ಮ ಬಗ್ಗೆ ತಪ್ಪು ಕಲ್ಪನೆಯು ಬರಬಹುದು. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ಮಾಡುವಿರಿ. ಅನಾರೋಗ್ಯವನ್ನು ಬಹಳವಾಗಿ ನಿರ್ಲಕ್ಷಿಸುವಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಆದರೂ ಮಾತಿಗೆ ತಪ್ಪಲಾರಿರಿ. ಅಸಾಧ್ಯವಾದ ಕಾರ್ಯದ ಬಗ್ಗೆ ಅತಿಯಾದ ಒಲವು ಬೇಡ. ನಿಮ್ಮಷ್ಟಕ್ಕೆ ನೀವಿರುವುದು ಸುಖ. ಹಣದಲ್ಲಿ ಮೋಸವಾಗಬಹುದು. ಉನ್ನತ ಹುದ್ದೆಗೆ ಹೋಗಲು ಅವಕಾಶವಿದ್ದರೂ ನಿಮಗೆ ನಾನಾ ಕಾರಣಗಳಿಂದ ಬೇಡವೆನಿಸುವುದು.
ಕರ್ಕಾಟಕ ರಾಶಿ: ಕುಟುಂಬದ ಎಲ್ಲರೂ ನಿಮ್ಮನ್ನೇ ಆಶ್ರಯಿಸಿದ್ದರೆ ನಿರ್ವಹಣೆ ಕಷ್ಟವಾದೀತು. ಕಛೇರಿ ಹಾಗೂ ಕುಟುಂಬ ಎರಡೂ ನಿಮಗೆ ಒತ್ತಡವನ್ನು ತಂದೀತು. ನೂತನ ವಸ್ತುಗಳನ್ನು ಕಡಿಮೆ ಬೆಲೆಗೆ ಪಡೆದುಕೊಳ್ಳುವಿರಿ. ಪ್ರೀತಿಯ ಕಾರಣಕ್ಕೆ ಮನಸ್ಸಿನ ಚಾಂಚಲ್ಯವನ್ನು ನಿಯಂತ್ರಿಸುವುದು ಕಷ್ಟವಾದೀತು. ನಿಮ್ಮ ಮಾತು ಇನ್ನೊಬ್ಬರಿಗೆ ನೋವನ್ನು ಕೊಡುಬಹುದು ಎಂಬ ತಿಳಿವಳಿಕೆ ಇರಲಿ. ನಿಮ್ಮ ಕಲೆಗೆ ಸರಿಯಾದ ಪ್ರೋತ್ಸಾಹವು ಸಿಗಲಿದೆ. ವೃತ್ತಿಯಲ್ಲಿ ನೀವು ತುಂಬಾ ನಿಧಾನದಿಂದ ಕೆಲಸ ಮಾಡುವಿರಿ. ದೂರ ಬಂಧುಗಳ ಭೇಟಿಯಿಂದ ವಿವಾಹ ನಿಶ್ಚಯವಾಗಬಹುದುದು. ಪ್ರೇಮವು ಹೊಸ ತಿರುವನ್ನು ಪಡೆಯಬಹುದು. ಮನಸ್ಸು ಕೆಡಿಸಿಕೊಂಡು ಏನೂ ಮಾಡಲಾಗದು. ಶಾಂತವಾಗಿ, ಸಮಾಧಾನ ಚಿತ್ತದಿಂದ ಮುಂದುವರಿಯಿರಿ. ವಸ್ತುಗಳನ್ನು ಕಳೆದುಹೋಗಿದ್ದು ವಿಳಂಬವಾಗಿ ಬೆಳಕಿಗೆ ಬಂದೀತು. ಹಿರಿಯ ಮಾತನ್ನು ಅಸಡ್ಡೆ ಮಾಡುವಿರಿ. ಸಂಗಾತಿಯ ನಿಲುವನ್ನು ನೀವು ಒಪ್ಪದೇ ಕಲಹವಾಗಬಹುದು. ನಿಮ್ಮ ನಿರ್ಧಾರವು ಸರಿಯಾಗಿದೆಯೇ ಎಂದು ಅವಲೋಕನ ಮಾಡಿಕೊಳ್ಳಿ.
ಸಿಂಹ ರಾಶಿ: ಇಂದು ಅಕಾರಣವಾಗಿ ಮನಸ್ಸು ಸಂತೋಷದಿಂದ ಇರಲಿದೆ. ಕುಟುಂಬವು ನಿಮ್ಮ ಬಗ್ಗೆ ಹಲವು ಕನಸುಗಳನ್ನು ಇಟ್ಟುಕೊಂಡಿದೆ. ದೊಡ್ಡ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಇಂದು ನಿರೀಕ್ಷಿಸುಬುದು ಬೇಡ. ಉದ್ಯೋಗವನ್ನು ನಿರೀಕ್ಷಿತ ಹಂತಕ್ಕೆ ಕೊಂಡೊಯ್ಯಲು ಅಧಿಕ ಶ್ರಮಿಸುವಿರಿ. ಹಠದ ಸ್ವಭಾವದಿಂದ ಸುಲಭವಾಗಿ ಸಿಗುವುದನ್ನು ಕಳೆದುಕೊಳ್ಳಬೇಕಾದೀತು. ಅಪರಿಚಿತರ ಜೊತೆ ಸಲುಗೆ ಬೆಳೆಯಬಹುದು. ಅಪರಿಚಿತರ ಜೊತೆ ಅವಶ್ಯಕತೆಯಷ್ಟೇ ವ್ಯವಹರಿಸಿ. ಭವಿಷ್ಯದ ಅನೇಕ ದ್ವಂದ್ವಗಳು ಇರಬಹುದು. ಯಾರ ಬಗ್ಗೆಯೂ ಹಗುರಾದ ಮಾತುಗಳನ್ನು ಆಡುವುದು ಬೇಡ. ಹಣಕಾಸಿನ ಉಳಿತಾಯದ ಬಗ್ಗೆ ತಜ್ಞರ ಜೊತೆ ಮಾತನಾಡುವಿರಿ, ನಿರ್ಧಾರಕ್ಕೆ ಬರುವಿರಿ. ನಿಮ್ಮದಲ್ಲದ ವಸ್ತುವನ್ನು ಬಳಸಿಕೊಂಡು ಹಾಳು ಮಾಡುವಿರಿ. ಹಳೆಯ ಪ್ರೇಮವು ಬೆಳಕಿಗೆ ಬಂದು ಮುಜುಗರ ಉಂಟಾದೀತು. ಉದ್ಯೋಗದಲ್ಲಿ ಒತ್ತಡ ಸ್ವೀಕರಿಸುವುದು ಅಭ್ಯಾಸವಾಗಿ ಹೋಗುವುದು. ದುರಭ್ಯಾಸವು ಸಹವಾಸದಿಂದ ಬಿಟ್ಟುಹೋಗಲಿದೆ. ಯಾವುದೇ ಪ್ರಭಾವಕ್ಕೆ ಸಿಕ್ಕಿ ನಿಮ್ಮನ್ನು ಬದಲಿಸಿಕೊಳ್ಳಬೇಕಾಗಬಹುದು.
ಕನ್ಯಾ ರಾಶಿ: ಉತ್ತರನ ಪೌರುಷದಂತೆ ಯಾರೂ ಇಲ್ಲದಿದ್ದರೇ ನಿಮ್ಮದೇ ಮೇಲುಗೈ. ನಿಮ್ಮ ಬಯಕೆಗಳನ್ನು ಬೇರೆಯವರ ಮೂಲಕ ಪೂರ್ಣ ಮಾಡಿಕೊಳ್ಳುವಿರಿ. ಆಡಳಿತಕ್ಕೆ ಸಂಬಂಧಿಸಿದ ಕಾರ್ಯವು ಸುಗಮವಾಗಿರುವುದು. ವ್ಯಾಪಾರ ಚಟುವಟಿಕೆಗಳು ನಿಮ್ಮ ಮನೋವೇಗಕ್ಕೆ ಸಿಗದು. ಕಲಾವಿದರು ಅವಕಾಶವನ್ನು ಹುಡುಕಿಕೊಂಡು ಹೋಗಬೇಕಾಗಬಹುದು. ಸಾಲದ ವಿಚಾರವಾಗಿ ಕುಟುಂಬದ ಜೊತೆ ಬಿಸಿ ಚರ್ಚೆಯಾಗಬಹುದು. ಆಸ್ತಿಯ ಹಂಚಿಕೆಯಲ್ಲಿ ನಿಮಗೆ ಸಮಾಧಾನ ಇರದು. ಹಲವು ದಿನಗಳಿಂದ ಉಳಿಸಿಕೊಂಡ ವೈಯಕ್ತಿಕ ಕೆಲಸವೇ ಉಳಿಯಲಿದೆ. ಒಳ್ಳೆಯ ಜನರ ಸಹವಾಸವನ್ನು ಬಯಸುವಿರಿ. ಸ್ವಪ್ರತಿಷ್ಠೆ ಹೆಚ್ಚಾಗುತ್ತದೆ. ಪೂರ್ವಾಪರ ಯೋಚನೆ ಇಲ್ಲದೇ ಒಂದು ಕೆಟ್ಟ ನಿರ್ಧಾರವನ್ನು ತೆಗೆಸುಕೊಳ್ಳುವಿರಿ. ಸಹೋದರರು ನಿಮ್ಮ ಬಗ್ಗೆ ಹಗುರಾಗಿ ಮಾತನಾಡಿದ್ದು ನಿಮ್ಮ ಕಿವಿಗೆ ಮೂರನೇ ವ್ಯಕ್ತಿಗಳಿಂದ ಗೊತ್ತಾಗಲಿದೆ. ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ತಾಯಿ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಿಕೊಳ್ಳಬಹುದು. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಕಣ್ಣಿಡುವ ಅಗತ್ಯವಿದೆ.
ತುಲಾ ರಾಶಿ: ಅಂಗೈನಲ್ಲಿ ಆಕಾಶವಿದೆ ಎಂದು ಆಕಾಶಕ್ಕೆ ಹಾರುವುದು ಸರಿಯಾಗದು. ಹದವರಿತು ಮುನ್ನುಗ್ಗುವುದು ಉಚಿತ. ಸಂಬಂಧಗಳ ಸತ್ತ್ವವನ್ನು ನೀವು ಅರಿಯುವಿರಿ. ನಿಮ್ಮ ನೈಪುಣ್ಯತೆಯನ್ನು ಯಾರೂ ಊಹಿಸಲಾರರು. ನಿಮ್ಮನ್ನು ಎದುರಗೆ ಹೊಗಳಿ, ನಿಮ್ಮಿಂದ ಆಗಬೇಕಾದುದನ್ನು ಮಾಡಿಸಿಕೊಂಡಾರು. ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ಕುಟುಂಬ ಜೊತೆ ದೇವರ ದರ್ಶನವನ್ನು ಮಾಡುವಿರಿ. ನೌಕರರಿಂದ ನಿಮಗೆ ಸರಿಯಾದ ಪ್ರತಿಕ್ರಿಯೆ ಸಿಗದು. ವಿವೇಚನೆ ಇಲ್ಲದೇ ಆಡಿದ ಮಾತುಗಳಿಂದ ಕಲಹವಾಗಬಹುದು. ಅಜಾಗರೂಕತೆಯಿಂದ ಬಿದ್ದು ಗಾಯ ಮಾಡಿಕೊಳ್ಳಬಹುದು. ಕೈಗೊಂಡ ಕಾರ್ಯಗಳಲ್ಲಿ ಪೂರ್ಣ ಜಯವು ಪ್ರಾಪ್ತವಾಗುವುದು. ನಟನೆಯನ್ನು ಇಷ್ಟಪಡುವವರಿಗೆ ಅವಕಾಶಗಳು ಸಿಗುವುದು. ಪ್ರಾಮಾಣಿಕತೆಗೆ ಸಿಕ್ಕ ಪ್ರಶಂಸೆಯಿಂದ ಇನ್ನಷ್ಟು ಉತ್ಸಾಹ ಇರುವುದು. ಯಾರದೋ ಕಾರ್ಯಕ್ಕೆ ನೀವು ದಂಡಿಸಿ ಕೆಲಸ ಮಾಡಬೇಕಾದೀತು. ನಿಮ್ಮ ಮಾತುಗಳು ಹಾಸ್ಯದಿಂದ ಕೂಡಿರಲಿದೆ. ಅನಾರೋಗ್ಯದಿಂದ ವಿಶ್ರಮಿಸಿಕೊಳ್ಳುವಿರಿ.
ವೃಶ್ಚಿಕ ರಾಶಿ: ಆರಂಭದಿಂದಲೇ ನಿಮ್ಮೊಳಗೆ ಆತ್ಮವಿಶ್ವಾಸ ಇರಲಿದ್ದು ಅತಿಯಾದ ಉತ್ಸಾಹದಿಂದ ದಿನವಿಡೀ ಕೆಲಸವನ್ನು ಮಾಡುವಿರಿ. ಆಸ್ತಿ ವ್ಯವಹಾರದ ನಿರ್ಧಾರಗಳು ನಿಮ್ಮ ಪರವಾಗಿರಬಹುದು. ಆದಾಯದ ವಿಚಾರದಲ್ಲಿ ಮನೆಯಿಂದ ಮೆಚ್ಚುಗೆ ಸಿಗಲಿದೆ. ನಿಮ್ಮ ವ್ಯಾಪ್ತಿಯನ್ನು ಮೀರಿದ ಕೆಲಸವನ್ನು ನೀವು ಮಾಡಬೇಕಾದೀತು. ಆಸಕ್ತಿಯು ಇಲ್ಲದಿದ್ದರೂ ಒತ್ತಾಯಕ್ಕೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಅನಿವಾರ್ಯವಿದ್ದರೂ ಧನವ್ಯಯದ ಕಾರಣ ಖರೀದಿಯನ್ನು ಮುಂದೂಡುವಿರಿ. ಸಾಮಾಜಿಕ ಗೌರವವನ್ನು ಪಡೆಯಲು ಆಸೆ ಇರುವುದು. ಎಲ್ಲರ ಮಾತುಗಳಿಗೂ ಉತ್ತರಿಸಬೇಕೆಂದಿಲ್ಲ. ನಕ್ಕು ನಿಮ್ಮ ಕೆಲಸದಲ್ಲಿ ನೀವಿರಿ. ಇಂದು ನೀವು ತಾಯಿಯ ಪ್ರೀತಿಯಿಂದ ವಂಚಿತರಾಗಬಹುದು. ಉದ್ಯೋಗದ ಕಾರಣಕ್ಕೆ ದೂರದ ಊರಿಗೆ ಹೋಗಬೇಕಾಗುವುದು. ಪ್ರಯಾಣದ ಮುಂಜಾಗ್ರತೆಯ ಕ್ರಮವಿರಲಿ. ಗೊತ್ತಿಲ್ಲದ ಪ್ರದೇಶಕ್ಕೆ ಒಂಟಿಯಾಗಿ ಹೋಗಬೇಕಾಗಬಹುದು.
ಧನು ರಾಶಿ: ಇಂದು ನಿಮ್ಮ ಮನಸ್ಸನ್ನು ಒಂದೆಡೆ ಏಕಾಗ್ರವಾಗಿಸಲು ಪ್ರಯತ್ನಿಸಿ. ನಾನಾ ಸಮಸ್ಯೆಗಳು ನಿಮ್ಮೆದುರು ಬಂದರೂ ಮರೆಯುವುದೊಂದೇ ನಿಮಗೆ ಸದ್ಯಕ್ಕಿರುವ ದಾರಿಯಾಗಿದೆ. ಯುವಕರು ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯು ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳಲು ಮಾರ್ಗದರ್ಶನದ ಅವಶ್ಯಕತೆ ಇದೆ. ಜೀವನದಲ್ಲಿ ಸಣ್ಣಪುಟ್ಟ ಸವಾಲುಗಳನ್ನು ಎದುರಿಸಬೇಕಾಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ರಾಜಕೀಯ ವಿಷಯಗಳನ್ನು ಅತಿಯಾಗಿ ಹಚ್ಚಿಕೊಳ್ಳುವುದು ಬೇಡ. ಕಛೇರಿಯಲ್ಲಿ ಯಾರದೋ ತಪ್ಪಿಗೆ ನೀವು ತಲೆ ತಗ್ಗಿಸಬೇಕಾಗಬಹುದು. ಪ್ರಾಣಿಗಳ ಮೇಲೆ ಪ್ರೀತಿ ತೋರಿಸುವಿರಿ. ನಿಮ್ಮ ಕಾರ್ಯದಲ್ಲಿ ನಿಮಗೆ ತಪ್ಪು ಕಾಣಿಸುವುದು. ಹೊಗಳಿಕೆಯಿಂದ ನಿಮಗೆ ಸಂಕೋಚ ಉಂಟಾಗಬಹುದು. ಮಿತಿಮೀರಿದ ಓಡಾವು ನಿಮ್ಮ ದೇಹಬಲವನ್ನು ಕುಗ್ಗಿಸುವುದು. ನಿಮ್ಮ ಬಯಕೆಗಳಿಗೆ ಇನ್ಮೊಬ್ಬರು ಪ್ರೇರಣೆ ಆಗಬಹುದು.
ಮಕರ ರಾಶಿ: ನಿಮ್ಮ ಜಾಣ್ಮೆಯ ಕೆಲಸಕ್ಕೆ ಅಧಿಕಾರಿಗಳಿಂದ ಮೆಚ್ಚುಗೆ. ಸಣ್ಣ ಹೂಡಿಕೆಗಳು ಭವಿಷ್ಯಕ್ಕೆ ಪ್ರಯೋಜನ ಆಗಬಲ್ಲವು. ಮಹಿಳೆಯರು ಸ್ವ ಉದ್ಯೋಗದ ಕಡೆ ಗಮನಹರಿಸುವರು. ನೂತನ ವಸ್ತುಗಳ ಮೇಲೆ ನಿಮಗೆ ಪ್ರೀತಿ ಹೆಚ್ಚಿರುವುದು. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ಹಳೆಯ ಆಸ್ತಿಯನ್ನು ಮಾರಾಟ ಮಾಡುವುದರಿಂದ ಅಥವಾ ಬಾಡಿಗೆಗೆ ನೀಡುವುದರಿಂದ ಆರ್ಥಿಕ ಲಾಭವಿದೆ. ಭೂಮಿ ಅಥವಾ ವಾಹನದ ನಿರ್ವಹಣೆಗೆ ಹಣವನ್ನು ಖರ್ಚು ಮಾಡಲಾಗುವುದು. ವಿದೇಶದಲ್ಲಿ ಓದುವ ಆಸೆಯು ನಿಮ್ಮೊಳಗೆ ಆರಂಭವಾಗುವುದು. ನಿಮ್ಮನ್ನು ಕೈಬಿಟ್ಟ ಸಂಸ್ಥೆಯು ಪುನಃ ಆಮಂತ್ರಣ ನೀಡುವ ಸಾಧ್ಯತೆ ಇದೆ. ಉತ್ತಮ ವಿಶ್ವಾಸಿಗಳನ್ನು ಕಳೆದುಕೊಳ್ಳುವಿರಿ. ಭೂಮಿಯ ವ್ಯವಹಾರದಲ್ಲಿ ಪಾಲುದಾರರಾಗಿ ಸೇರಿಕೊಳ್ಳುವ ಮನಸ್ಸು ಮಾಡುವಿರಿ. ಸಂಗಾತಿಯ ಜೊತೆ ಬಹಳ ಸಂಯೋಷದ ಕ್ಷಣವನ್ನು ಕಳೆಯುವಿರಿ. ಉದ್ಯೋಗದ ಸ್ಥಳದಲ್ಲಿ ಉಂಟಾದ ಪಕ್ಷಪಾತದಿಂದ ದ್ವೇಷಭಾವವು ಉಂಟಾಗಬಹುದು
ಕುಂಭ ರಾಶಿ: ಇಂದು ನಿಮ್ಮ ಬಗ್ಗೆ ಆಡುವ ಮಾತಿನಿಂದ ಉತ್ಸಾಹವು ಅಧಿಕವಾಗಿ ಇರುವುದು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಶ್ರಮದ ಫಲವೇ ಕಾಣುವರು. ನಿಮ್ಮ ಆಪ್ತ ಸ್ನೇಹಿತರ ಅನಿರೀಕ್ಷಿತ ಭೇಟಿಯಾಗುವುದು. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ವೃತ್ತಿ ಜೀವನದಲ್ಲಿ ಪ್ರಮುಖ ಸಾಧನೆಗಳನ್ನು ಸಾಧಿಸಲಾಗುವುದು. ಜೀವನದಲ್ಲಿ ಧನಾತ್ಮಕ ಶಕ್ತಿಯ ಒಳಹರಿವು ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ಸಮಾಜಸೇವೆಯಲ್ಲಿ ಆಸಕ್ತಿ ಹೆಚ್ಚಲಿದೆ. ವಾಹನ ಖರೀದಿಗೆ ಬಂಧುಗಳಿಂದ ಒತ್ತಡವು ಬರಬಹುದು. ಬಹಳ ಶ್ರಮದಿಂದ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶಪ್ರಯಾಣವನ್ನು ಮಾಡಬೇಕಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಪೂರ್ವಯೋಜಿತ ಕಾರ್ಯಗಳನ್ನು ನೀವು ಬದಲಾಯಿಸುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲು ಮನೆಯಿಂದ ಒಪ್ಪಿಗೆಯನ್ನು ನಿರಾಕರಿಸಬಹುದು.
ಮೀನ ರಾಶಿ: ಇಂದು ನಿಮ್ಮ ಅದೃಷ್ಟದ ದಿನವಾಗಿದ್ದು ಆಗಬೇಕಾದ ಕೆಲಸಗಳು ಸರಾಗವಾಗಿ ಆಗುವುದು. ಇಂದು ನಿಮ್ಮ ಕಾರ್ಯಕ್ಷಮತೂ ಉತ್ತಮವಾಗಿರುವುದು. ನಿಮಗೆ ಮಾತನಾಡುವ ಕಲೆಯು ಕರಗತವಾಗಲಿದೆ. ನಿಮ್ಮನ್ನು ಇಂದು ಮಾತಿನಿಂದ ಸೋಲಿಸುವುದು ಕಷ್ಟವಾದೀತು. ಕೆಲವರು ಆಸ್ತಿಯಲ್ಲಿ ಹೂಡಿಕೆ ಮಾಡಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ಉದ್ಯೋಗದಲ್ಲಿನ ಒತ್ತಡವು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಉಂಟುಮಾಡಬಹುದು. ಮೊದಲೇ ಸಮಯವನ್ನು ಸರಿಯಾಗಿ ನಿರ್ಧರಿಸಿಕೊಂಡು ಕಾರ್ಯವನ್ನು ಆರಂಭಿಸಿದರೆ ಸಕಾಲಕ್ಕೆ ಮುಗಿಯುವುದು.