ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ, ಸೋಮವಾರ ಕಠೋರ ಸತ್ಯ, ಪ್ರೇಮಿಯ ಜೊತೆ ಸುತ್ತಾಟ, ನಂಬಿಕೆಗೆ ಸ್ಥಾನ, ಗೌಪ್ಯತೆಯ ರಕ್ಷಣೆ ಇವೆಲ್ಲ ಇಂದು. ನೀವು ಬೇರೆಯವರ ವಿಷಯಗಳಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಬೇಕು. ಖರ್ಚುಗಳನ್ನು ನಿಯಂತ್ರಿಸಲು ಹೋಗಿ ಅಪಮಾನದಲ್ಲಿ ಸಿಲುಕುವಿರಿ.

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ – 06 – 44 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:42 – 17:12, ಯಮಘಂಡ ಕಾಲ 09:43 – 11:13, ಗುಳಿಕ ಕಾಲ 12:43 – 14:12.
ಮೇಷ ರಾಶಿ: ಎಷ್ಟೋ ವರ್ಷದ ಸಂಬಂಧವು ಮಾಸಿಹೋಗಿದ್ದು, ಅದರಿಂದ ಬಿಡಿಸಿಕೊಳ್ಳಲಾಗದು. ದೀರ್ಘಕಾಲದ ಅನುಮಾನಕ್ಕೆ ಇಂದು ತೆರೆ ಬೀಳಬಹುದು. ಆಧ್ಯಾತ್ಮಿಕ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ಮಕ್ಕಳ ಜವಾಬ್ದಾರಿ ಪೂರ್ಣಗೊಳ್ಳುತ್ತವೆ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ.
ವೃಷಭ ರಾಶಿ: ಅರ್ಥವಾಗದೇ ಇರುವ ಸರಳವಾದ ವಿಚಾರವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಹೊಸತನ್ನು ಕಲಿಯುವ ಬಗ್ಗೆ ಆಸಕ್ತಿಯು ಹೋಗುವುದು. ನಿಮಗೆ ಒಳ್ಳೆಯ ಸುದ್ದಿ ಸಿಗುತ್ತವೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಜಾಗೃತರಾಗಿರುವುದು ಅಗತ್ಯ. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ. ಉತ್ತಮ ಆಹಾರವನ್ನು ಪಡೆಯಲು ಯತ್ನಿಸಿ. ಅಪರಿಚಿತರಿಂದ ಎಲ್ಲವನ್ನೂ ತಿಳಿಯುವವರೆಗೂ ಮುಂದುವರಿಯುವುದು ಬೇಡ. ಯಾರೊಂದಿಗೂ ವಾದ ಮಾಡಬೇಡಿ. ಆಲಸ್ಯವನ್ನು ಬಿಡುವುದು ಇಷ್ಟವಾಗದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ.
ಮಿಥುನ ರಾಶಿ: ದುಬಾರಿಯಾದ ಹೊಸ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸುವಿರಿ. ಅನಿರೀಕ್ಷಿತವಾಗಿ ಸಂಬಂಧವೊಂದು ಗೊತ್ತಾಗದಂತೆ ಬೆಳೆಯಬಹುದು. ವೈವಾಹಿಕ ಮಾತುಕತೆಗೆ ನಿಮ್ಮ ಕಡೆಯಿಂದ ಸ್ಪಂದನೆ ಅಗತ್ಯವಾಗಿರುವುದು. ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಸಮಾನ ಮನಸ್ಕರ ಜೊತೆ ಸಖ್ಯ ಹೇಗೋ ಆಗುವುದು. ಸಾಲ ಮಾಡುವ ಬಗ್ಗೆ ಆಪ್ತರನ್ನು ಕೇಳುವಿರಿ. ಕಾನೂನು ವಿಷಯ ದೀರ್ಘಕಾಲದವರೆಗೆ ನಡೆಯುತ್ತಿದ್ದರೆ, ಅದು ಬಗೆಹರಿಯಬಹುದು. ಎಲ್ಲೋ ಸಿಲುಕಿಕೊಂಡಿರುವ ಹಣವೂ ಹಿಂತಿರುಗಬಹುದು. ಇದು ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು.
ಕರ್ಕಾಟಕ ರಾಶಿ: ಇಂದು ಸ್ವೇಚ್ಛೆಯಿಂದ ವರ್ತಿಸಿದರೆ ಯಾರಾದರೂ ತಡೆಯಬಹುದು. ಕಳಂಕವನ್ನು ತೊಡೆದುಕೊಳ್ಳುವುದು ಕಷ್ಟವಾದೀತು. ಸಂಗಾತಿಯ ಮೇಲಿನ ಮುನಿಸನ್ನು ಇನ್ನೊಬ್ಬರ ಮೇಲೆ ತೋರಿಸುವಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಮಾತನ್ನು ನೀವು ನಿಯಂತ್ರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ನಿಮ್ಮ ಮಾತು ಹಲವು ಗೊಂದಲಗಳಿಗೆ ಕಾರಣವಾದೀತು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದೇ ಹೋಗಬಹುದು. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು.
ಸಿಂಹ ರಾಶಿ: ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ನ್ಯಾಯಯುತವಾದ ಮಾರ್ಗದಲ್ಲಿ ಹೋಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ಹಳೆಯ ಉದ್ಯೋಗಕ್ಕೆ ಪುನಃ ಮರಳುವಿರಿ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೋರಂಜನೆಗೆ ಹೋದರೂ ಸರಿಯಾದ ಆಸ್ವಾದನೆ ಸಿಗದು. ಅತಿಯಾದ ಹಸಿವಾಗಬಹುದು. ಸಮಯಕ್ಕೆ ಆಹಾರವು ಸಿಗದೇ ಇರಬಹುದು. ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿಯು ಬರಬಹುದು. ನಿಮ್ಮ ವೃತ್ತಿಜೀವನದ ಬೆಳವಣಿಗೆಗೆ ಕಾರಣವಾಗುವುದು. ನೀವು ನಿಮ್ಮ ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ದಿನವು ಸರಿಯಾದ ಅವಕಾಶ ಸಿಗಲಿದೆ. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ.
ಕನ್ಯಾ ರಾಶಿ: ಯಾರದ್ದಾದರೂ ಮಾತು ನಿಮ್ಮನ್ನು ಕೆರಳಿಸಬಹುದು. ಹಿರಿಯರಲ್ಲಿ ಗೌರವದಿಂದ ಮಾತನಾಡಿ. ಅಹಂಕಾರದಿಂದ ನಿಮ್ಮ ಬಗ್ಗೆ ಸದಭಿಪ್ರಾಯವು ಹೋಗಬಹುದು. ಪ್ರೇಮ ಜೀವನ ನಡೆಸುತ್ತಿರುವ ಜನರ ನಡುವೆ ಸಂಘರ್ಷ ಉಂಟಾಗುವ ಸಾಧ್ಯತೆಯಿದೆ. ಕಳೆದುಕೊಂಡ ಮಾತ್ರಕ್ಕೆ ಪಡೆಯಲಾಗದು ಎಂಬ ಭಾವ ಬೇಡ. ಉತ್ತಮವಾದುದನ್ನು ಪಡೆಯುವ ಚಮತ್ಕಾರ ನಿಮ್ಮ ಸಂಬಂಧವನ್ನು ನೀವು ಉಳಿಸಿಕೊಳ್ಳಬೇಕು. ನೀವು ಯಾರಿಗೂ ಸಾಲ ನೀಡಬಾರದು. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ, ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ನಿದ್ರೆಯಲ್ಲಿ ದುಃಸ್ವಪ್ನಗಳು ಬೀಳಬಹುದು. ಮನೆಯ ಖರ್ಚುಗಳನ್ನು ಸ್ವಲ್ಪ ನಿಯಂತ್ರಿಸಬೇಕು. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ.
ತುಲಾ ರಾಶಿ: ಉಪಕಾರಕ್ಕೆ ಯೋಗ್ಯವಾದ ಪ್ರತ್ಯುಪಕಾರವಿರಲಿದೆ. ಹಿರಿಯರ ಸೇವೆಯನ್ನು ಮಾಡುವ ಆಸಕ್ತಿಯನ್ನು ಬೆಳೆಸಿಕೊಳ್ಳುವಿರಿ. ನೌಕರರನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯವಾಗುವುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ಸಮ್ಮಾನಗಳಿಂದ ಸಮಾಧಾನ ಇರದು. ಬೇರೆ ಯೋಚನೇಯೇ ನಿಮ್ಮದು. ನಿಮ್ಮ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಖರ್ಚು ಹೆಚ್ಚಾಗುತ್ತದೆ. ನಿಮ್ಮ ಮನಸ್ಸು ತೊಂದರೆಗೀಡಾಗಿಯೇ ಇರುತ್ತದೆ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅನಪೇಕ್ಷೆಯ ಬಗ್ಗೆ ಬೇಸರವಾಗಲಿದೆ. ಹಣಕಾಸಿನ ಉದ್ಯೋಗದಲ್ಲಿ ಇರುವವರಿಗೆ ಉತ್ತಮ ಅವಕಾಶವು ಸಿಗುವುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು. ದುಃಖವನ್ನು ಸಹಿಸುವುದು ಅನಿವಾರ್ಯವಾದೀತು. ಅನಪೇಕ್ಷಿತ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ.
ವೃಶ್ಚಿಕ ರಾಶಿ: ಉತ್ತಮವಾದುದನ್ನೂ ಅಜ್ಞಾನದಿಂದ ದೂರ ಮಾಡಿಕೊಳ್ಳಬೇಕಾಗುವುದು. ಪುಣ್ಯಕ್ಷೇತ್ರದಲ್ಲಿ ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾಗುವುದು. ನಿಮ್ಮ ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸಬೇಡಿ. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಕೆಲವು ಹಳೆಯ ಒಪ್ಪಂದಗಳು ಸಮಯಕ್ಕೆ ಸರಿಯಾಗಿ ಅಂತಿಮಗೊಳ್ಳದ ಕಾರಣ ನೀವು ನಷ್ಟ ಅನುಭವಿಸಬಹುದು. ನಿಶ್ಚಿಂತೆಯಿಂದ ಇರುವಷ್ಟು ಸಮಯವೂ ಇರದಂತಾಗುವುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ. ಭವಿಷ್ಯವು ಅಸ್ಪಷ್ಟವಾಗಿ ಇರುವುದು ನಿಮಗೆ ಆತಂಕವಾಗಬಹುದು. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ನಿಮಗೆ ಕಷ್ಟವಾದೀತು. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಸಿದ್ಧತೆಯನ್ನು ನಡೆಸುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು.
ಧನು ರಾಶಿ: ನಿಮ್ಮ ಬಲದ ಬಗ್ಗೆ ಅಭಿಮಾನ ಇರಲಿ. ಉನ್ನತ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳುವ ಪ್ರಯತ್ನವು ಸಾಗುವುದು. ಮಾತನ್ನು ಉಳಿಸಿಕೊಳ್ಳಲು ನೀವು ಸೋಲಬಹುದು. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಬೇಡವೆಂದುಕೊಂಡ ವಿಷಯವೂ ನಿಮ್ಮ ಬಳಿ ಸುತ್ತಿ ಬರುವುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸಬಹುದು. ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆಯುತ್ತೀರಿ. ಕೆಲವು ಸಮಸ್ಯೆಗಳು ಸಹ ಬಗೆಹರಿಯುತ್ತವೆ. ನಿಮ್ಮ ಕೆಲಸದ ಬಗ್ಗೆ ನೀವು ಸ್ವಲ್ಪ ಜಾಗರೂಕರಾಗಿರಬೇಕು. ನೂತನ ನಿರ್ಮಾಣಗಳಿಗೆ ತಡೆಯಾಗುವುದು. ನಿಮ್ಮ ಎದುರಾಳಿ ನಿಮ್ಮನ್ನು ಸೋಲಿಸಬಹುದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ.
ಮಕರ ರಾಶಿ: ಮಹತ್ಕಾರ್ಯ ಮಾಡಬೇಕು ಎಂಬುದು ಮನಸ್ಸಿನಿಂದ ಬಂದರೆ ಯಾವುದೂ ಸಾಧ್ಯ. ವಿದ್ಯಾಭ್ಯಾಸವನ್ನು ಬಯಸಿ ಎಲ್ಲಿಗಾದರೂ ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ನಿಮಗೆ ಶತ್ರುಗಳ ಚಿಂತೆಯೇ ಅಧಿಕವಾಗಿರುವುದು. ನಿಮ್ಮ ವ್ಯವಹಾರ ಮೊದಲಿಗಿಂತ ಉತ್ತಮವಾಗಿ ನಡೆಯಲಿದೆ. ಗುಣದಲ್ಲಿ ಮತ್ಸರ ಬಿಟ್ಟು ಒಳ್ಳೆಯದರ ಕಡೆಗೆ ಹೊರಟುಬಿಡಿ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲದಿಂದ ನಿಮ್ಮ ಬಗ್ಗೆ ಬೇಡದ ಅಭಿಪ್ರಾಯಗಳು ಬರಬಹುದು. ನಿಮ್ಮ ಸಹೋದರರೊಬ್ಬರಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಇಂದು ಬೇಕಾದುದನ್ನು ಮಾಡುವ ಸ್ವಾತಂತ್ರ್ಯವು ನಿಮಗೆ ಇರದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಹತ್ತಿರದ ಬಂಧುಗಳಿಂದ ವಿಶ್ವಾಸಕ್ಕೆ ತೊಂದರೆಯಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ.
ಕುಂಭ ರಾಶಿ: ನಿಂದೆಯನ್ನು ಸಕಾರಾತ್ಮಕವಾಗಿ ತೆಗೆದುಕೊಂಡಾಗ ಗೆಲವಾಗಬಹುದು. ನಿಮ್ಮ ವ್ಯವಹಾರದ ಬಗ್ಗೆ ತಂದೆಯವರು ವಿಚಾರಿಸಬಹುದು. ಸಂಗಾತಿಯ ಜೊತೆಗಿನ ಕೆಲವು ಸಂದರ್ಭಗಳನ್ನು ಎದುರಿಸುವುದು ಕಷ್ಟವಾದೀತು. ನೀವು ಕೆಲವು ಹೊಸ ಯೋಜನೆಯಲ್ಲಿ ಕೆಲಸ ಮಾಡಬಹುದು. ಕುಟುಂಬದ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ಒತ್ತಡ ಹೆಚ್ಚಾಗುತ್ತದೆ. ಇಂದಿನ ಸಮಯವನ್ನು ಸದ್ವಿನಿಯೋಗ ಮಾಡಿಕೊಳ್ಳುವಿರಿ. ಆರಂಭಿಸಿದ ಕಾರ್ಯವನ್ನು ಮೊಟುಕುಗೊಳಿಸುವಿರಿ. ನಿಮ್ಮ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಅನ್ಯಾಯದ ವಿರುದ್ಧ ಧ್ವನಿ ಎತ್ತಲಾಗದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ.
ಮೀನ ರಾಶಿ: ಇಂದು ವ್ಯಾಪಾರದಲ್ಲಿ ಜಾಣ್ಮೆಯಿದ್ದರೂ ಬೇಕಾದ ಸಮಯಕ್ಕೆ ಉಪಯೋಗಕ್ಕೆ ಬಾರದೀ ಇರಬಹುದು. ಮಿತಿಯಲ್ಲಿ ನಿಮ್ಮ ಮಾತು ನಿಮ್ಮನ್ನು ಎತ್ತರಕ್ಕೆ ಏರಿಸೀತು. ದೂರದ ಊರಿಗೆ ಪ್ರಯಾಣವನ್ನು ಕುಟಂಬದ ಜೊತೆ ಮಾಡುವಿರಿ. ನೀವು ಬೇರೆಯವರ ವಿಷಯಗಳಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಬೇಕು. ಖರ್ಚುಗಳನ್ನು ನಿಯಂತ್ರಿಸಲು ಹೋಗಿ ಅಪಮಾನದಲ್ಲಿ ಸಿಲುಕುವಿರಿ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಹಿರಿಯರ ಸಹಾಯಕ್ಕೆ ಕೃತಜ್ಞತೆ ಇರಲಿ. ನಿಮಗೆ ಬೇಕಾದ ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ. ಪುಣ್ಯದ ಫಲವು ಇಂದು ಸಿಗುವುದು.