Horoscope Today 30 March: ಯುಗಾದಿ ಹಬ್ಬ, ಈ ದಿನದ ರಾಶಿ ಭವಿಷ್ಯ, ಶುಭ, ಅಶುಭ ತಿಳಿಯಿರಿ.

Horoscope Today 30 March: ಯುಗಾದಿ ಹಬ್ಬ, ಈ ದಿನದ ರಾಶಿ ಭವಿಷ್ಯ, ಶುಭ, ಅಶುಭ ತಿಳಿಯಿರಿ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ : ರೇವತಿ, ಯೋಗ: ಐಂದ್ರ, ಕರಣ: ನಾಗವಾನ್, ಸೂರ್ಯೋದಯ 06: 30 am, ಸೂರ್ಯಾಸ್ತ 06 : 43 pm, ಇಂದಿನ ಶುಭಾಶುಭಕಾಲ: ರಾಹು ಕಾಲ 17:12 – 18:43, ಯಮಘಂಡ ಕಾಲ 12:37 – 14:09, ಗುಳಿಕ ಕಾಲ 15:40 – 17:12

ವಿಶ್ವಾವಸು ಎನ್ನುವ ನೂತನ ವರ್ಷ ಆರಂಭವಾಗುತ್ತಿದೆ. ಹೊಸ ಆಲೋಚನೆ, ಉತ್ತಮ ಗುಣ, ಒಳ್ಳೆಯ ಬುದ್ಧಿಯನ್ನು ದೇವರಲ್ಲಿ ಪ್ರಾರ್ಥಿಸಿದರೆ ಇಡೀ ವರ್ಷ ನೆಮ್ಮದಿ, ಸುಖ, ಸಂಭ್ರಮದಿಂದ ಇರಲು ಸಾಧ್ಯ. ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲ, ಇಡಿಯ ಪ್ರಕೃತಿಗೇ ಹೊಸ ವರ್ಷ. ಇದನ್ನು ಸಂಭ್ರಮಿಸುತ್ತ ಸ್ವಾಗತಿಸಿ, ಅವಗುಣಗಳನ್ನು ದೂರ ಮಾಡಿಕೊಳ್ಳಬೇಕು. ಸರ್ವರಿಗೂ ಯುಗಾದಿಯ ಶುಭಾಶಯ.

ಮೇಷ ರಾಶಿ: ಯಾವುದನ್ನೂ ಸಂಕೀರ್ಣ ಮಾಡಿಕೊಳ್ಳದೇ ನಿಭಾಯಿಸಿ. ಇಂದು ನಿಮ್ಮ ಕೆಲಸದಲ್ಲಿ ಆತುರಗೊಂಡರೆ, ಅಸ್ತವ್ಯಸ್ತವೇ ಆಗಬಹುದು. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ತಮ್ಮ ಕೆಲಸಕ್ಕೆ ಆದ್ಯತೆ ನೀಡಬೇಕು. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು ಎಂದಿದ್ದರೂ ಆಗದು. ಸಂಸಾರವನ್ನು ಮುನ್ನಡೆಸುವ ಚಾತುರ್ಯವನ್ನು ನೀವು ತಿಳಿದುಕೊಳ್ಳುವಿರಿ. ಸಂಗಾತಿಯ ಜೊತೆ ಮಾತು ಮಿತಿಮೀರಬಹುದು.‌ ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ. ಕುಟುಂಬದ ಸದಸ್ಯರ ಪ್ರೀತಿಯು ಸಿಕ್ಕಿ ಹರ್ಷಿಸುವಿರಿ.

ವೃಷಭ ರಾಶಿ: ಆರ್ಥಿಕ ವೃದ್ಧಿ ಮತ್ತು ಆರೋಗ್ಯ ವೃದ್ಧಿಯ ನಡುವೆ ಗೊಂದಲ ಬಂದಾಗ ಆರೋಗ್ಯವನ್ನು ಆರಿಸಿಕೊಳ್ಳಿ. ಆರ್ಥಿಕತೆಯ ಸುಧಾರಣೆ ಮತ್ತೆಂದೋ ಆಗುವುದು.‌ ಆರೋಗ್ಯ ಹಾಗಲ್ಲ. ಸೃಜನಾತ್ಮಕ ಪ್ರಯತ್ನಗಳಿಂದ ನಿಮಗೆ ಮೊದಲಿನಂತೆ ಖುಷಿ ಸಿಗದು. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ಸಾಮಾಜಿಕ ಕಾರ್ಯವನ್ನು ಮಾಡಲು ಒತ್ತಡವು ಬರಬಹುದು. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು.

ಮಿಥುನ ರಾಶಿ: ನಿಮ್ಮ ಸಣ್ಣ ದೈಹಿಕ ಸಮಸ್ಯೆಗಳನ್ನೂ ಇಂದು ನಿರ್ಲಕ್ಷಿಸಬೇಡಿ. ಅದು ಅನಂತರ ದೊಡ್ಡ ಸಮಸ್ಯೆಯಾಗಿ ಬದಲಾಗಬಹುದು. ನೀವು ಕೆಲಸದ ನಿಮಿತ್ತ ಪ್ರವಾಸಕ್ಕೆ ಹೋಗಬಹುದು. ಜೀವನದ ಗುರಿಯೊಂದನ್ನು ಸಾಧನೆಯಾಗಲಿದೆ. ಹಳೆಯ ಕೆಲಸಗಳು ಅತಿ ವೇಗವಾಗಿ ನೆರವೇರಲಿವೆ. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ನಿಮ್ಮ ಆದಾಯ ಹೆಚ್ಚಾದಂತೆ ನಿಮ್ಮ ಸಂತೋಷಕ್ಕೆ ಮಿತಿಯಿಲ್ಲ, ಆದರೆ ನೀವು ಭವಿಷ್ಯಕ್ಕಾಗಿ ಸ್ವಲ್ಪ ಹಣವನ್ನು ಉಳಿಸಿದರೆ ಅದು ನಿಮಗೆ ಉತ್ತಮ. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು. ಸಂಗಾತಿಯು ನಿಮಗೆ ಬೇಕಾದ ಹಣವನ್ನು ನೀಡುವರು. ಸಂಶೋಧನೆಯು ನಿಮಗೆ ಖುಷಿ ಕೊಡುವುದು.

ಕರ್ಕಾಟಕ ರಾಶಿ: ನೀವು ಅಪರಿಚಿತರ ಜೊತೆ ಬಾಂಧವ್ಯವನ್ನು ಹೆಚ್ಚುಮಾಡಿಕೊಳ್ಳುವಿರಿ. ಉದ್ಯಮಕ್ಕೆ ಸಹಕಾರಿ. ನೀವು ಸಾಮಾಜಿಕ ಚಟುವಟಿಯಲ್ಲಿ ಭಾಗವಹಿಸಲಾರಿರಿ. ಧಾರ್ಮಿಕ ಕಾರ್ಯಗಳಿಗೆ ಶ್ರದ್ಧೆಯು ಕಡಿಮೆ ಆದಂತೆ ತೋರುವುದು. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗುವುದು. ಕೆಲವು ಪ್ರಮುಖ ಚರ್ಚೆಯಲ್ಲಿ ಭಾಗವಹಿಸಬಹುದು. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸಿ, ವಿರೋಧಿಸುವಿರಿ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು. ಇದ್ದ ನಿಮ್ಮ ಸ್ವಭಾವದಲ್ಲಿ ಪರಿವರ್ತನೆ ಕಾಣಿಸಿಕೊಳ್ಳುವುದು. ನಿಮ್ಮ ವಸ್ತುಗಳ ಉಪಯೋಗವನ್ನು ನೀವು ಬಹಳ ನಿರ್ಲಕ್ಷ್ಯದಿಂದ ಮಾಡುವಿರಿ.

ಸಿಂಹ ರಾಶಿ: ನಿಮ್ಮ ಒಳ ಮನಸ್ಸನ್ನು ಅರ್ಥಮಾಡಿಕೊಂಡವರ ಜೊತೆ ಸ್ನೇಹ ಬೆಳೆಯುವುದು. ನಿಮ್ಮ ಸೌಕರ್ಯಗಳಿಗೆ ನೀವು ಸಂಪೂರ್ಣ ಒತ್ತು ನೀಡುತ್ತೀರಿ. ನಿರುದ್ಯೋಗಿಗಳು ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕಾಣಲಿವೆ ಹಾಗೂ ಆದಾಯ ವೃದ್ಧಿಸಲಿವೆ. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ವಿರೋಧಿಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸುತ್ತಾರೆ. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಗೃಹೋದ್ಯಮದಲ್ಲಿ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳಿಗೆ ಕಾರಣವಾಗುವುದು. ಯಾರ ಮೇಲಾದರೂ ಮುನಿಸು ತಾತ್ಕಾಲಿಕವಾಗಿ ಇರುವುದು. ಸ್ತ್ರೀಯರಿಂದ ನಿಮಗೆ ಸಂತೋಷವು ಸಿಗುವುದು.

ಕನ್ಯಾ ರಾಶಿ: ಆದಾಯ ಹಾಗೂ ಖರ್ಚನ್ನು ಸರಿದೂಗಿಸುವ ಪ್ರಯತ್ನವು ವಿಫಲವಾಗುವುದು. ಇಂದು ನಿಮ್ಮ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಸ್ವಲ್ಪ ಚಿಂತಿತರಾಗಿರುವಿರಿ. ಅಧ್ಯಾತ್ಮದ ಕಡೆಗೆ ನಿಮ್ಮ‌ ಸೆಳೆತ ಇರುವುದು. ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸಿದ್ದರೆ, ನಿಮ್ಮ ಆಸೆಯೂ ಈಡೇರಬಹುದು. ನಿಮ್ಮ ಮಗುವಿಗೆ ನೀವು ಹೊಸ ವಾಹನವನ್ನು ಮನೆಗೆ ತರಬಹುದು. ನೀವು ಸ್ನೇಹಿತನ ಜೊತೆ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆಯು ಕಡಿಮೆ ಆಗುವುದು. ಆಗಿಹೋದ ವಿಚಾರಕ್ಕೆ ಸಂಗಾತಿಯ ಜೊತೆ ಪುನಃ ಜಗಳವಾಡುವಿರಿ. ಆದಷ್ಟು ಒಬ್ಬರಾದರೂ ಸುಮ್ಮನಿದ್ದರೆ ಕಲಹವು ಶಾಂತವಾಗುವುದು. ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. ಉತ್ತಮ ವಸ್ತುಗಳು ಸಿಕ್ಕರೂ ಅದನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ.

ತುಲಾ ರಾಶಿ: ಇಂದು ನೀವು ಹೊಸ ಉದ್ಯಮಕ್ಕೆ ಬೇಕಾದ ಸ್ಥಳದ ಅನ್ವೇಷಣೆಯಲ್ಲಿ ತೊಡಗುವಿರಿ. ದಾನ ಧರ್ಮದ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ಕೋಪದ ನಿರ್ಣಯಗಳಿಂದ ಅನಂತರ ಬೇಸರ. ಸಂಯಮ ಕಳೆದುದರ ಫಲವು ತಿಳಿಯುವುದು. ಯಾವುದೇ ವ್ಯತಿರೇಕ ಸನ್ನಿವೇಶಗಳನ್ನು ನಿಭಾಯಿಸಲು ಪ್ರಯತ್ನಿಸಬೇಕಾಗುತ್ತದೆ. ಮನೆಯ ಅಲಂಕಾರದ ಬಗ್ಗೆಯೂ ನೀವು ಸಂಪೂರ್ಣ ಗಮನ ಹರಿಸುವಿರಿ. ಕುಟುಂಬದ ಸದಸ್ಯರಿಂದ ನೀವು ಆಚ್ಚರಿಯ ಉಡುಗೊರೆಯನ್ನು ಪಡೆಯಬಹುದು. ಹೆತ್ತವರ ಆಶೀರ್ವಾದವು ನಿಮಗೆ ಉತ್ಸಾಹವನ್ನು ಕೊಡಬಹುದು. ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ನಿಮಗೆ ನಿರೀಕ್ಷೆಗೆ ತಕ್ಕ ಗೌರವ ಸಿಗದೇ ಬೇಸರವಾಗುವುದು. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ನಿಮ್ಮ ನಿರ್ಧಾರವನ್ನು ಮತ್ತೋಬ್ಬರಿಗೆ ಹೇರುವುದು ಬೇಡ. ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆಯುವಿರಿ. ಆದಷ್ಟು ಸಮಾಧಾನದಿಂದ ಶತ್ರುಗಳನ್ನು ಗೆಲ್ಲಲು ಪ್ರಯತ್ನಿಸಿ.

ವೃಶ್ಚಿಕ ರಾಶಿ: ನೀವು ಯಾವುದೇ ಕೆಲಸವನ್ನು ಕೈಗೊಂಡರೂ, ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ. ಆದರೆ ನಿಮಗೆ ಆಗದವರಿಂದ ಅಪಕೀರ್ತಿ ಹರಡುವುದು. ವೈಯಕ್ತಿಕವಾಗಿ ಆರೋಗ್ಯ ಕುಂದುಬುದು, ಜಾಗರೂಕತೆ ಬೇಕು. ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ. ನೀವು ಕುಟುಂಬದ ಜೊತೆ ಹೊರಗೆ ಹೋಗಲು ಯೋಜಿಸಬಹುದು. ಆದರೆ ಕುಟುಂಬದ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲೂ ನೀವು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದು ನಿಮ್ಮ ಸಂಬಂಧಗಳಲ್ಲಿ ಬಿರುಕು ಉಂಟುಮಾಡಬಹುದು. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಆಯ ಕಡಿಮೆ ವ್ಯಯ ಅಧಿಕ ಆಗಬಹುದು. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ. ಆರ್ಥಿಕ ಬಲವನ್ನು ನೋಡಿ ಖರ್ಚಿನ ನಿರ್ಧಾರವನ್ನು ಮಾಡಿ. ಸ್ನೇಹಿತರು ನಿಮ್ಮ ಬಳಿ ಆರ್ಥಿಕ ಸಹಾಯವನ್ನು ಕೇಳುವರು.

ಧನು ರಾಶಿ: ನಿಮ್ಮ ಮಾತಿನಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಿ. ನೀವು ಯಾರಿಗಾದರೂ ಭರವಸೆ ನೀಡಿದ್ದರೆ, ಅದನ್ನು ಪೂರೈಸಲು ಪ್ರಯತ್ನಿಸುವಿರಿ. ನಿಮ್ಮ ತಾಳ್ಮೆಗೆ ಇಂದು ಸಕಾಲದ ದಿನ. ನಿಮ್ಮ ವರ್ತನೆಯೇ ನಿಮ್ಮನ್ನು ಎತ್ತರಿಸುವುದು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಕೆಲಸದಲ್ಲಿ ನೀವು ಅನಿರೀಕ್ಷಿತ ಭಡ್ತಿಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಹಿರಿಯರು ವಿಚಾರಿಸುವರು. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಇನ್ನೂ ಉತ್ತಮವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು.

ಮಕರ ರಾಶಿ: ಇಂದು ನೀವು ಕೆಲವು ಹೊಸಬರನ್ನು ಭೇಟಿ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ಇಂದು ಮುಖ್ಯವಾಗಿ ಯಾವುದೇ ಕಾರ್ಯಕ್ಕೆ ಆರ್ಥಿಕ ಮುಗ್ಗಟ್ಟು ಬಂದು ಅರ್ಧಕ್ಕೆ ನಿಲ್ಲಿಸುವ ಸಾಧ್ಯತೆ ಇದೆ. ಆದರೆ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಕೈಲಾದಷ್ಟು ಪ್ರಯತ್ನಿಸುತ್ತೀರಿ. ನಿಮ್ಮ ಸಹೋದರನ ಜೊತೆ ನಿಮ್ಮ ಆಪ್ತತೆಯು ಹೆಚ್ಚಾಗುತ್ತದೆ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳಬಹುದು. ನಿಮ್ಮ ತಂದೆಯು ಕಣ್ಣಿಗೆ ಸಂಬಂಧಿಸಿದ ತೊಂದರೆಯಿಂದ ಓಡಾಟ ಮಾಡಬೇಕು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಒಮ್ಮನಸ್ಸು ಬರುವುದು ಕಷ್ಟವಾಗುವುದು.

ಕುಂಭ ರಾಶಿ: ಇಂದು ನೀವು ಅಗತ್ಯವಿರುವ ವಸ್ತುಗಳಿಗೆ ಸಾಕಷ್ಟು ಖರ್ಚು ಮಾಡುತ್ತೀರಿ. ಆದರೆ ನೀವು ನಿಮ್ಮ ಹಿರಿಯರ ಸಲಹೆಯನ್ನು ಪಾಲಿಸಿ ಉತ್ತಮವಾದುದನ್ನು ಪಡೆಯುವಿರಿ. ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಯಾರ ಹೊಗಳಿಕೆಗೂ ಮರುಳಾಗದಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನೀವು ವೈಯಕ್ತಿಕ ವಿಷಯಗಳ ಮೇಲೆ ಸಂಪೂರ್ಣ ಗಮನವನ್ನು ಹೊಂದಿದ್ದರೆ ನಿಮಗೆ ಒಳ್ಳೆಯದು. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಸಡಿಲಬಿಡುವುದು ಬೇಡ. ನಿಮ್ಮ ವಿರೋಧಿಗಳು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ. ಬಂಧುಗಳಿಂದ ಕೆಲಸವು ಹಾಳಾಗಬಹುದು. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳದಿರಿ. ಸಂಗಾತಿಯ ಮಾತುಗಳು ನಿಮಗೆ ಬೇಸರ ತರಿಸಬಹುದು.

ಮೀನ ರಾಶಿ: ಸ್ನೇಹಿತರ ಒತ್ತಾಯಕ್ಕೆ ಅವರ ಜೊತೆ ನೀವು ಮನೋರಂಜನೆಯ ಕಾರ್ಯಕ್ರಮಗಳಿಗೆ ತೆರಳುವಿರಿ. ಇಂದು ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸಬಹುದು. ನೀವು ಇಂದು ಹೊರಗಿನವರಿಗೆ ಯಾವುದೇ ನಿಮ್ಮ ಆಂತರಿಕ ಮಾಹಿತಿಯನ್ನು ಬಹಿರಂಗಪಡಿಸಬಾರದು. ರಕ್ತ ಸಂಬಂಧಿಗಳು ಮೊದಲಿಗಿಂತ ಉತ್ತಮವಾಗಿರುತ್ತಾರೆ. ನಿಮ್ಮ ಯೋಜನೆಗಳನ್ನು ನೀವು ವೇಗವಾಗಕಸುವಿರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ.

Source : TV 9 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *