
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಚತುರ್ಥೀ ನಿತ್ಯನಕ್ಷತ್ರ: ಮೃಹಶಿರಾ, ಯೋಗ: ಅತಿಗಂಡ ಕರಣ: ಗರಜ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:04 – 15:39, ಯಮಘಂಡ ಕಾಲ 06:11 – 07:46, ಗುಳಿಕ ಕಾಲ 09:21 – 10:55
ಮೇಷ ರಾಶಿ: ನಿಮ್ಮನ್ನು ಸಾಮಾಜಿಕ ಕಾರ್ಯಕ್ಕೆ ನಾಯಕರನ್ನಾಗಿ ಮಾಡಬಹುಸಿ. ನೀವು ಪ್ರಶಂಸಿಸುವುದರಲ್ಲಿ ಅರ್ಥವಿಲ್ಲ. ಉಪಯೋಗಕ್ಕೆ ಬಾರದ ಕೆಲಸವನ್ನು ಬಿಟ್ಟುಬಿಡುವುದು ಒಳ್ಳೆಯದು. ಮಂಗಲಕರವಾದ ಕಾರ್ಯಗಳನ್ನು ಮಾಡಲಿದ್ದೀರಿ. ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಅನಾರೋಗ್ಯ ಕಾರಣಕ್ಕೆ ವೈದ್ಯಾಲಯಕ್ಕೆ ಓಡಾಡ ಮಾಡುವಿರಿ. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ.
ವೃಷಭ ರಾಶಿ: ಮಕ್ಕಳಿಗೆ ಜವಾಬ್ದಾರಿ ಕೊಡಲು ಮನಸ್ಸಾಗುವುದು. ಇಂದು ಕಳೆದುಕೊಂಡ ಸಂಪತ್ತು ನಿಮಗೆ ಸಿಗುವುದು ನಿಮ್ಮ ಸಂತೋಷಕ್ಕೆ ಕಾರಣವಾಗುತ್ತದೆ. ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು ಸಂಪತ್ತಿಗೆ ಅನುಸಾರವಾಗಿ ಯೋಚನೆ ಹಾಗೂ ಯೋಜನೆಗಳು ಇರಲಿ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಕಾರ್ಯಕ್ಕೆ ತೊಂದರೆಯಾದರೂ ತೋರಿಸಿಕೊಳ್ಳಲು ಹೋಗದೇ ಸಂತೋಷದಿಂದ ಇರುವಿರಿ. ಬಂಧುಗಳ ಮನೆಗೆ ಹೋಗಲು ನೆಪ ಸಿಗುವುದಿ. ನಿಮ್ಮ ಆಸ್ತಿಕತೆಯನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಬಳಿ ಯಾರೂ ವಾದಮಾಡಬಾರದು ಎನ್ನಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆರಳಿಸುವ ಸ್ವಭಾವವನ್ನು ಬಿಡುವುದು ಉತ್ತಮ.
ಮಿಥುನ ರಾಶಿ: ಮಾರಾಟದ ವಿಭಾಗ ನಿಮ್ಮ ಜವಾಬ್ದಾರಿಗೆ ಬರಬಹುದು. ನಿಮ್ಮ ಪಕ್ಷಪಾತದ ಧೋರಣೆಯನ್ನು ನೀವು ಸಹಿಸಲಾರಿರಿ. ನಿಮಗೆ ಬೇಕಾದ ಸಲಹೆ ಸಹಕಾರಗಳು ಸಿಗಲಿವೆ. ಬಂಧುಗಳ ಮಾತು ಕಹಿ ಎನಿಸಬಹುದು. ನಿಮ್ಮ ಮನಸ್ಸನ್ನು ಕುಗ್ಗಿಸಬಹುದು. ಆಪ್ತರ ಮಾತುಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಏನನ್ನಾದರೂ ಸಾಧಿಸಬೇಕು ಎನ್ನುವ ಛಲವು ನಿಮ್ಮ ನಿತ್ಯಮಂತ್ರವಾಗಲಿ. ವಿದ್ಯುತ್ ಯಂತ್ರ ದುರಸ್ತಿಗೆ ಖರ್ಚು ಹೆಚ್ಚು. ಆರ್ಥಿಕ ವ್ಯವಹಾರ ಶುದ್ಧರಾಗಿರಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟು ಮಾಡುವುದು ಸರಿಯಾಗದು. ತಿದ್ದಿಕೊಳ್ಳುವ ಅಂಶಗಳನ್ನು ಗಮನಿಸುವುದು ಮುಖ್ಯವಾದೀತು. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.
ಕರ್ಕಾಟಕ ರಾಶಿ: ಸಣ್ಣ ವಿಚಾರಕ್ಕೆ ದೊಡ್ಡ ಒತ್ತಡ ಇರಲಿದೆ. ಎಲ್ಲವನ್ನೂ ಆರ್ಥಿಕ ದೃಷ್ಟಿಯಿಂದ ನಿರ್ಣಯಿಸುವುದು ಕಷ್ಟವೇ ಆದೀತು. ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ. ಭೂಮಿಯ ವ್ಯವಹಾರದ ಕಾರಣಕ್ಕೆ ಹೆಚ್ಚು ಓಡಾಟವನ್ನು ಮಾಡಬೇಕಾಗಿ ಬರಬಹುದು. ನಿಮ್ಮ ಪ್ರಭಾವವು ಜೊತೆಗಾರರಿಗೆ ಗೊತ್ತಾಗಲಿದೆ. ನಿಮ್ಮ ಸಹಾಯಕ್ಕೆ ಬರುವವರನ್ನು ಗೌರವಿಸಿ. ಸರಿಯಾದ ಸ್ಥಾನವನ್ನೂ ಕೊಡಬೇಕಾಗುವುದು. ಅನಿವಾರ್ಯತೆಯಿಂದ ಹಣವನ್ನು ಖರ್ಚುಮಾಡಬೇಕಾಗಿ ಬರುವುದು ಸ್ವಲ್ಪಮಟ್ಟಿಗೆ ಅಳುಕಿರುವುದು. ಅದನ್ನು ಗಮನಿಸಿಕೊಂಡು ಮಾಡಬೇಕಾದ ಕೆಲಸದಕಡೆ ಗಮನ ಹರಿಸಿ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದಿರಬಹುದು.
ಸಿಂಹ ರಾಶಿ: ಹೊಸ ನಿರೀಕ್ಷೆಯಲ್ಲಿ ಇರುವುದು ಬೇಡ. ಮನೆಯ ನಿರ್ಮಾಣದ ಕಾರ್ಯಕ್ಕೆ ಯಾರಿಂದಲಾದರೂ ತೊಂದರೆ ಬರಬಹುದು. ಯಾರಾದರೂ ನಿಮ್ಮ ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೇ ತೊಂದರೆಗಳನ್ನು ಕೊಡಬಹುದು. ಅದಕ್ಕೆ ಬೇಕಾದ ಕಾನೂನಿನ ಹಾದಿಯನ್ನು ಅನುಸರಿಸಿ ಸರಿಮಾಡಿಕೊಳ್ಳಿ. ನಿಮ್ಮಿಂದಾಗದ ಕಾರ್ಯವನ್ನು ಬೇರೆಯವರು ಮಾಡಿ ತೋರಿಸುವುದು ನಿಮಗೆ ಅಪಮಾನಕರವೆನಿಸವುದು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ವಿದೇಶ ವ್ಯವಹಾರದಲ್ಲಿ ಆತಂಕ ಎದುರಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.
ಕನ್ಯಾ ರಾಶಿ: ನಿಮ್ಮ ಮೃದುಸ್ವಭಾವದಿಂದ ಆಪತ್ತು. ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ. ನ್ಯಾಯಾಲಯದ ಕಲಹವು ಬಗೆಹರಿಯಲಿದೆ. ಸಂಗಾತಿಯಿಂದ ಅಪಮಾನವೂ ಆಗಬಹುದು. ಬೇಕಾದುದನ್ನು ಯಾರದೋ ಮೂಲಕ ಪಡೆಯುವುದು ಅನಿವಾರ್ಯವಾಗಬಹುದು. ಕಾಲಾನಂತರ ನಿಮಗೆ ಉತ್ತಮವಾದ ಫಲವನ್ನೇ ನೀಡುವುದು. ತಿಳಿದುಕೊಳ್ಳುವ ಕುತೂಹಲವು ನಿಮ್ಮಲಿಂದು ಅಧಿಕವಾಗಿರುವುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ವ್ಯಾಪಾರದಲ್ಲಿ ಮುನ್ನಡೆಯಲು ಅವಸರದ ಹೆಜ್ಜೆ ಬೇಡ. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ನೀವು ಇರುವಿರಿ. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಕೋಪದಿಂದ ಎಲ್ಲವನ್ನೂ ಸಾಧಿಸಲಾಗದು. ಅದರ ಅರಿವಿರಲಿ. ವಿದ್ಯುತ್ ಗೆ ಸಂಬಂಧಿಸಿದ ಕಾರ್ಯದಲ್ಲಿ ಲಾಭವಿರಲಿದೆ.
ತುಲಾ ರಾಶಿ: ಉದ್ಯೋಗ ಬದಲಾವಣೆಗೆ ಕರೆ ಬರಲಿದೆ. ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ನಿಮ್ಮನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ಹೆಜ್ಜೆಯನ್ನು ಇಡುವಾಗ ಜಾಗರೂಕರಾಗಿರಿ. ಕೃಷಿಯಲ್ಲಿ ಹೊಸ ಯೋಜನೆ ಮಾಡಲಿದೆ. ಸೋಲಬಾರದು ಎಂಬ ಛಲವು ಇದ್ದು ಕಾರ್ಯವನ್ನು ಮಾಡುವಿರಿ. ಮಾನಸಿಕ ಸ್ಥಿತಿಯು ಶಾಂತವಾಗುವ ತನಕ ವಿರಾಮವನ್ನೂ ಪಡೆದು ಸ್ವಲ್ಪ ಆರಾಮದಾಯಕವಾದ ಸ್ಥಳಕ್ಕೆ ಹೋಗಿ ಬನ್ನಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.
ವೃಶ್ಚಿಕ ರಾಶಿ: ಭೂ ವ್ಯವಹಾರದಲ್ಲಿ ಬಂಧುಗಳಿಂದ ಬೇಸರ. ನೀವಿಂದು ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ನಿಮ್ಮೊಳಗೆ ಇಂದು ವಿಚಿತ್ರವಾದ ಕೆಲವು ಆಲೋಚನೆಗಳು ಬರಲಿದ್ದು, ನಿಮಗೇ ಆಶ್ಚರ್ಯವೆನಿಸುವಂತೆ ಮಾಡುವುದು. ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ತಂದೆ ಮತ್ತು ತಾಯಿಯರು ನಿಮಗೆ ಹಿತವಚನವನ್ನು ಹೇಳುವರು. ಆಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಿ. ರಕ್ಷಣೆಗೆ ಸಂಬಂಧಿಸಿದ ಯಾವುದಾದರೂ ಉದ್ಯೋಗವು ಸಿಗಬಹುದು. ವ್ಯವಹಾರವನ್ನು ಬಂಧುಗಳ ಜೊತೆ ಮಾಡಬೇಡಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ನಿಮ್ಮ ನೆಮ್ಮದಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ. ಅಶ್ರದ್ಧೆಯನ್ನು ತೋರಿಸುವುದು ಬೇಡ.
ಧನು ರಾಶಿ: ನಿಮ್ಮ ಯೋಜನೆಗಳು ಮೇಲಧಿಕಾರಿಗಳ ವಿರುದ್ಧ ಇರಲಿದೆ. ನಿಮಗೆ ಅನ್ನಿಸಿದ್ದನ್ನು ಹೇಳುವ ಮೊದಲು ಯೋಚಿಸಿ. ಇಂದು ಹಣದ ಅಗತ್ಯತೆಗಳು ತುಂಬಾ ಇರಲಿವೆ. ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ಬಂಧುಗಳಿಂದ ನಿಮಗೆ ಬೇಕಾದುದು ಸಿಗದೇಹೋಗಬಹುದು. ಅದಕ್ಕೋಸ್ಕರ ಸಿಟ್ಟಾಗುವುದು ಬೇಡ. ಅನಗತ್ಯವಾದ ಖರ್ಚು ಅಗತ್ಯದ ವಸ್ತುಗಳನ್ನು ತೆಗೆದುಕೊಳ್ಳಲು ಬಿಡುವುದಿಲ್ಲ. ಬಂಧುಗಳು ನಿಮ್ಮ ನಡೆತೆಯಿಂದ ದೂರವೂ ಹೋಗಬಹುದು ಅಥವಾ ನಿಮ್ಮಿಬ್ಬರ ನಡುವೆ ಕಲಹವೂ ಆಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು.
ಮಕರ ರಾಶಿ: ಭವಿಷ್ಯದ ಆಸೆಗಾದರೂ ನಿಮ್ಮನ್ನು ದೃಢವಾಗಿ ಉಳಿಸಿಕೊಳ್ಳುವ ಅವಶ್ಯಕತೆ ಇದೆ. ಇಂದಿನ ನಿಮ್ಮ ದುಡಿಮೆಯನ್ನು ಸರಿಯಾದ ಕ್ರಮದಲ್ಲಿ ವಿನಿಯೋಗಿಸುವಿರಿ. ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ಸ್ವಾವಲಂಬಿಯಾಗಲು ನಿಮ್ಮವರೇ ಬಿಡಲಾರರು. ಕುಟುಂಬವು ಯಾವತ್ತೂ ಇರುವಂತೆ ನಿಮ್ಮ ಬೆಂಬಲಕ್ಕೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಪ್ರತ್ಯುತ್ತರವನ್ನೂ ಬಯಸದೇ ಮಾತನಾಡುವ ನಿಮ್ಮ ವಾಚಾಳಿತನವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿಕೊಳ್ಳಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ.
ಕುಂಭ ರಾಶಿ: ರಚನಾತ್ಮಕ ಕ್ರಿಯೆಯನ್ನು ಬಹಳ ಅಚ್ಚುಕಟ್ಟಾಗಿ ನೆರವೇರಿಸುವಿರಿ. ಕಷ್ಟಗಳು ನಮ್ಮ ಕರ್ಮದ್ದು ಎನ್ನುವ ವಿಚಾರ ನೆನಪಿರಲಿ. ಅದನ್ನು ಸಹಿಸುವ ಎದುರಿಸುವ ಶಕ್ತಿಯನ್ನು ಕೊಡು ಎಂದು ಕೇಳಿಕೊಳ್ಳಿ. ಅಶುಭದ ಸೂಚನೆಯನ್ನು ನಿರ್ಲಕ್ಷಿಸುವುದು ಬೇಡ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರುತ್ತದೆ. ದುಡುಕಿ ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳಬೇಡಿ. ನಿಮಗೆ ಕೊಡುವ ಭರವಸೆಯು ನಿಮ್ಮಲ್ಲಿ ಬಲವನ್ನು ತರುವುದು. ಸಹೋದರರು ನಿಮಗೆ ಬೇಕಾದ ಸಲಹೆಗಳನ್ನು ಕೊಡುವರು. ಇಷ್ಟವಿಲ್ಲದಿದ್ದರೂ ಅನಿವಾರ್ಯವಾಗಿ ಕೇಳಬೇಕಾದೀತು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ನಿಮ್ಮ ಅನನುಕೂಲತೆಯನ್ನು ಹೇಳಬೇಡಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.
ಮೀನ ರಾಶಿ: ನಿಮ್ಮ ಪ್ರಯತ್ನಕ್ಕೆ ದೈವಬಲಕ್ಕೂ ಬೇಕಾಗಿದ್ದು, ಅದನ್ನು ಬುದ್ಧಿಪೂರ್ವಕ ಅದನ್ನು ಮಾಡಿಕೊಳ್ಳಿಬೇಕು. ನಿಮ್ಮದಾದುದನ್ನು ಸಂಪಾದಿಸಬೇಕು ಎನ್ನುವ ನಿಮ್ಮ ತೀವ್ರತರವಾದ ಪ್ರಯತ್ನಕ್ಕೆ ಇಂದು ಕೆಲವು ಅಡ್ಡಿಗಳು ಇರಲಿವೆ. ಇರುವುದರಲ್ಲಿ ಖುಷಿಪಡುವುದು ಉತ್ತಮ. ಭೂಮಿಯ ಕ್ರಯ ಹಾಗೂ ವಿಕ್ರಯದ ವಿಚಾರದಲ್ಲಿ ನಿಮಗೆ ಲಾಭವಂತೂ ಸಿಗಲಿದೆ. ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು. ಸಂಗಾತಿಯ ಜೊತೆ ಖುಷಿಯಿಂದ ಇರಲಿದ್ದೀರಿ. ಯಾರೋ ಬಂದು ನಿಮ್ಮ ದಾಂಪತ್ಯದಲ್ಲಿ ಹುಳಿಯನ್ನು ಹಿಂಡುವ ಸಾಧ್ಯತೆ ಇದೆ. ನಂಬಿಕೆಯು ಶುದ್ಧವಾಗಿರಲಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು.
Source TV9