ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ, ಭಾನುವಾರ ಗುರಿಯ ಕೇಂದ್ರ ಬದಲಾವಣೆ, ಹತ್ತಿರದವರಿಂದ ದೂರು, ಪ್ರಸಿದ್ಧಿಯ ಆಸಕ್ತಿ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಭಾನುವಾರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 55 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:19 – 18:55, ಯಮಘಂಡ ಕಾಲ 12:30 – 14:06, ಗುಳಿಕ ಕಾಲ 15:42 – 17:19
ಮೇಷ ರಾಶಿ: ನಿಕಟವರ್ತಿಗಳು ವಿನಾಕಾರಣ ದೂರಾಗಬಹುದು. ಹಲವು ದಿನಗಳ ಮನಸ್ಸಿನ ಗೊಂದಲಗಳಿಗೆ ಪರಿಹಾರ ಇರುವುದು. ಒಂದುಕಡೆ ಬಂದರೆ ಮತ್ತೊಂದು ಕಡೆಯಿಂದ ನಿರ್ಗಮನ. ನಿಮಗೆ ಇದೆಲ್ಲದರ ಮೇಲೆ ಜುಗುಪ್ಸೆ ಬರಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ದುಡುಕಿನ ನಿರ್ಧಾರಗಳನ್ನು ತಗೆದುಕೊಂಡು ಸಂಕಟಪಡಬೇಕಾದೀತು. ಸಂಗಾತಿಯೊಂದಿಗೆ ಉತ್ತಮ ಸಂವಾದ ನಡೆಯಲಿದೆ. ಪರರ ಅಸೂಯೆಗೆ ಔಷಧವಿಲ್ಲ. ಆರೋಗ್ಯವನ್ನು ಕಡೆಗಣಿಸಬೇಡಿ, ವಿಶ್ರಾಂತಿಗೆ ಒತ್ತುನೀಡಿ. ದಿನದ ಕೊನೆಗೆ ಒಂದು ಶುಭಸುದ್ದಿ ಕೇಳಲಿದ್ದೀರಿ. ಈ ದಿನ ಸಕಾರಾತ್ಮಕ ವಿಚಾರಕ್ಕೆ ಒತ್ತುಕೊಟ್ಟರೆ ಅದರತ್ತ ಸಾಗುತ್ತಿದೆ. ನಿಮ್ಮನ್ನು ನಿಂದಿಸಲು ಕೆಲವು ಹೊಂಚು ಹಾಕಿದ್ದು ತಿಳಿದು ಅದನ್ನು ಸರಿ ಮಾಡಿಕೊಳ್ಳುವಿರಿ. ಬಂಧುಗಳು ನಿಮ್ಮ ಸಂಕಟಕ್ಕೆ ಜೊತೆಯಾಗುವರು. ರಾಜಕೀಯಕ್ಷೇತ್ರವು ನಿಮಗೆ ಕೈಹಿಡಿಯಬಹುದು. ಆದಷ್ಟು ಆಲೋಚಿಸಿ ಮುಂದಡಿಯಿಡಿ. ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆ ತರುವಿರಿ.
ವೃಷಭ ರಾಶಿ: ನಿಮ್ಮಿಂದ ಆಗದೇ ಇದ್ದರೂ ಅದನ್ನು ಯಾರಿಂದಲಾದರೂ ಆಗುತ್ತದೆ ಎಂಬ ನಂಬಿಕೆ ಇರುವುದು. ಇಂದು ಸ್ತ್ರೀಯರು ವ್ಯವಹಾರದಲ್ಲಿ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ದೈವವು ಅನುಕೂಲವನ್ನು ಮಾಡಲಿದೆ. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಜಾಹೀರಾತು ಕ್ಷೇತ್ರದವರಿಗೆ ಅಪೂರ್ವ ಯೋಜನೆ ಗೊತ್ತಾಗುವುದು. ಕೋಪಗೊಳ್ಳುವ ಬದಲು ಶಾಂತಿಯುತವಾಗಿ ಪರಿಸ್ಥಿತಿಯನ್ನು ಪರಿಹರಿಸಿದರೆ ಉತ್ತಮ. ನಿಮ್ಮೊಳಗೆ ಅಹಂಕಾರದಂತಹ ಪರಿಸ್ಥಿತಿ ಬೆಳೆಯಲು ಬಿಡಬೇಡಿ. ಅನಾರೋಗ್ಯದಿಂದ ಕಿರಿಕಿರಿ ಅನುಭವಿಸಿದರೆ ಇಂದು ಸ್ವಲ್ಪ ಕಡಮೆ ಆಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಲ್ಲಿ ಬಲವಾದ ಹಿಡಿತವಿರಲಿದೆ. ವಿದ್ಯಾರ್ಥಿಗಳಿಗೆ ಕರ್ತವ್ಯವನ್ನು ನೆನಪಿಸುವಂತಾಗುತ್ತದೆ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ.
ಮಿಥುನ ರಾಶಿ: ಎಲ್ಲವನ್ನೂ ಹಾಗೆಯೇ ಮಾಡಿದರೂ ಫಲಿತಾಂಶ ಬೇರೆಯೇ ಬರಬಹುದು. ಇಂದು ಅನಗತ್ಯವಾಗಿ ಸುತ್ತಾಟವಾಗುವುದೇ ವಿನಃ ಪ್ರಯೋಜನವಾಗದು. ಇದರಿಂದ ಸಿಟ್ಟೂ ಹತಾಶೆಯೂ ಇರಲಿದೆ. ನಿಧಾನವಾಗಿ ಸಾಗುವ ಸಾಗುತ್ತಿರುವ ಕೆಲಸದಿಂದ ಬೇಸರವಾಗಲಿದೆ. ಕೆಲಸದಲ್ಲಿ ಬದಲಾವಣೆ ಸಾಧ್ಯತೆ ಇದೆ. ಆರೋಗ್ಯ ಸಮಸ್ಯೆಯಿಂದ ದೊಡ್ಡ ಕೆಲಸವನ್ನೇ ಬಿಡಬೇಕಾಗುವುದು. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯಬಹುದು. ನಿಮ್ಮ ಶಾಂತವಾದ ಸ್ವಭಾವದಿಂದ ಗೊಂದಲಗಳನ್ನು ಬಗೆಹರಿಸಲು ಸಾಧ್ಯ. ಸ್ನೇಹಿತರ ಸಹಾಯ ನಿರೀಕ್ಷೆಗೆ ಮೀರಿ ಬರಲಿದೆ. ಶಿಕ್ಷಕ ವೃತ್ತಿಯವರಿಗೆ ಮಕ್ಕಳಿಂದ ಗೌರವವು ಸಿಗಲಿವೆ. ನಿಮ್ಮನ್ನು ಪ್ರೀತಿಮಾಡಿಕೊಳ್ಳಲಿದ್ದಾರೆ. ನಿಮ್ಮವರಿಂದಲೇ ವಂಚಿತರಾಗುವಿರಿ. ವಿಶ್ವಾಸವು ಇಲ್ಲದೇ ಹೋಗಿ ಸಂಬಂಧವೂ ಒಡೆದುಹೋಗಲಿದೆ. ಉದ್ಯೋಗಿಗಳಿಗೆ ಉದ್ಯಮದಲ್ಲಿಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು. ನಿಮ್ಮ ವಸ್ತುವು ಕಳೆದುಹೋಗಬಹುದು. ಯಾವುದೇ ಉದ್ವೇಗಕ್ಕೆ ಒಳಗಾಗುವುದು ಬೇಡ.
ಕರ್ಕಾಟಕ ರಾಶಿ: ಯಾರದೋ ಮೂಲಕ ಬರುವ ತಪ್ಪು ತಿಳಿವಳಿಕೆಯನ್ನು ತಲೆಯಿಂದ ಹೊರಹಾಕಿದರೆ ಸಮಾಧಾನ ನಿಮ್ಮೊಳಗೆ ಇಳಿಯುವುದು. ಇಂದು ದುಶ್ಚಟವನ್ನು ಸ್ನೇಹಿತರ ಮೂಲಕ ಕಲಿಯುವ ಸಂಭವವಿದೆ. ಉದ್ಯೋಗದಲ್ಲಿ ಭಡ್ತಿಯು ಸಿಗಲಿದೆ. ಮಕ್ಕಳಿಂದ ಸಂತೋಷವಾರ್ತೆಯು ಇರುತ್ತದೆ. ಸ್ನೇಹಿತರಿಂದ ಉತ್ತಮ ಸುದ್ದಿ ಕೇಳಬಹುದು. ಕೆಲವು ನಿರ್ಧಾರಗಳಲ್ಲಿ ಗೊಂದಲ ಉಂಟಾಗಬಹುದು, ಹಿರಿಯರ ಸಲಹೆ ಉಪಯುಕ್ತ. ಆರೋಗ್ಯದಲ್ಲಿ ಸಣ್ಣ ಅಸ್ವಸ್ಥತೆಗಳು ಕಾಣಿಸಬಹುದು. ಬಂಧುಗಳ ಮನೆಯಲ್ಲಿ ಇಂದು ನಿಮ್ಮ ವಾಸವಿರಲಿದೆ. ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ತೋರಿಸದೇ ಇರುವುದರಿಂದ ಬೈಯ್ಯುವಿರಿ. ಆಲಸ್ಯದಿಂದ ಹೊರಬರಬೇಕಾದ ಸ್ಥಿತಿಯು ಇದೆ. ಹೊಸ ಆಲೋಚನೆಗೆ ನೀವು ತೆರೆದುಕೊಳ್ಳುವಿರಿ. ರಾಜಕೀಯವಾಗಿ ಕೆಲವು ಬದಲಾವಣೆಗಳು ಆಗುವುದು. ದೈವಭಕ್ತಿಯನ್ನು ಬೆಳೆಸಿಕೊಂಡು ಸಾಗಬೇಕಾಗುವುದು. ನೀವು ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು. ನಿಮ್ಮದಾದ ವಸ್ತುವನ್ನು ಇತರರಿಗೆ ಕೊಡಬೇಕಾಗುವುದು.
ಸಿಂಹ ರಾಶಿ: ಆ ಕ್ಷಣದ ಮನೋಭಾವವೇ ನಿಮ್ಮದಾಗಿರುವುದು. ಅದನ್ನು ಸರಿಯಾಗುವಂತೆ ನೋಡಿಕೊಳ್ಳಿ. ಇಂದು ಸಾಮಾಜಿಕವಾದ ಕೆಲಸ ಮಾಡುತ್ತಿದ್ದರೆ ನಿಮಗೆ ಠೀಕೆಗಳು ಬರಲಿದೆ. ಅದು ನಿಮ್ಮ ಪರೀಕ್ಷೆಯ ಕಾಲವೂ ಆಗಬಹುದು. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ದುರಾಸೆಯಿಂದ ಆರ್ಥಿಕ ನಷ್ಟವಾಗುವ ಸಾಧ್ಯತೆ ಇದೆ. ಸತ್ಯ ಮತ್ತು ತಾಳ್ಮೆಯಿಂದ ಮಾತ್ರ ಇಂದಿನ ದಿನ ಸುಧಾರಿಸುತ್ತದೆ. ಸಂಜೆಗೆ ಹಿಂದಿನ ನಷ್ಟಗಳನ್ನು ಸರಿದೂಗಿಸಲು ಸಾಧ್ಯವಾಗುತ್ತದೆ. ನಿರಾಶೆ ಕೊನೆಗೊಳ್ಳುತ್ತದೆ ಮತ್ತು ಆಲೋಚನೆಯಲ್ಲಿ ಸಕಾರಾತ್ಮಕತೆ ಬರುತ್ತದೆ. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ದಾಯಾದಿಗಳ ಆಗಮನ ಕಿರಿಕಿರಿ ತರಲಿದೆ. ಕೆಲವು ಕೆಲಸದ ಭರಾಟೆಯಲ್ಲಿ ಇಂದು ಸಮಯವು ನಿಮ್ಮದಾಗಿರದು. ಲಭ್ಯತೆಯನ್ನು ರೂಢಿಸಿಕೊಳ್ಳಿ. ಅಜಾಗರೂಕರಾಗಿ ಯಾರ ಜೊತೆಯೂ ವರ್ತಿಸುವುದು ಬೇಡ. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಆರೋಗ್ಯದ ವಿಷಯದಲ್ಲಿ ಇಂದು ಸ್ವಲ್ಪ ತೊಂದರೆಯಾಗಬಹುದು. ಉದ್ಯಮಕ್ಕೆ ಹೊಸ ದಿಕ್ಕನ್ನು ಕೊಡುವ ಸಾಧ್ಯತೆ ಇದೆ.
ಕನ್ಯಾ ರಾಶಿ: ನಿಮ್ಮ ಉತ್ಸಾಹಕ್ಕೆ ಯಾರಿಂದಲಾದರೂ ಭಂಗ ಬರಬಹುದು. ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ನೀವು ನಿಶ್ಚಿಂತರು. ಆತ್ಮೀಯರೊಂದಿಗೆ ಸಂತೋಷದ ಕ್ಷಣಗಳ ನಿರೀಕ್ಷೆ. ನೀವು ಆರ್ಥಿಕ, ದೈಹಿಕ ಮತ್ತು ಮಾನಸಿಕ ಶಾಂತಿಯನ್ನು ಪಡೆಯುತ್ತೀರಿ. ಜಾಣ ಮರೆವನ್ನು ತೋರಿಸುವಿರಿ. ಕುಟುಂಬದಲ್ಲಿ ಹಬ್ಬದ ವಾತಾವರಣ ನೆಲೆಸಲಿದೆ. ಕೆಲಸದ ಸ್ಥಳದಲ್ಲಿ ನಿಮಗೆ ಮೆಚ್ಚುಗೆ ಸಿಗುತ್ತದೆ. ಜೊತೆಗೆ ಲಾಭವನ್ನು ತರಬಹುದು. ಸಂಗಾತಿಯಿಂದ ಹಣದ ಸಹಾಯವು ದೊರೆಯಬಹುದು. ನಿಮಗೆ ಕುಟುಂಬವು ಬೆಂಬಲವನ್ನು ನೀಡುತ್ತದೆ. ನಿಮ್ಮ ವೃತ್ತಿಯಲ್ಲಿ ಪ್ರಸಿದ್ಧರಾಗುತ್ತೀರಿ. ಇನ್ನೊಬ್ಬರ ವಸ್ತುಗಳ ಮೇಲೆ ಬಯಕೆ ಆಗಬಹುದು. ಆಸೆಗಳನ್ನು ಹಿಡಿತದಲ್ಲಿ ಇಡಿ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ವಿರೋಧಿಗಳಿಗೆ ನೀವು ತಲೆನೋವಾಗಿ ಉಳಿಯುತ್ತೀರಿ. ನಿಮ್ಮ ನೇರ ಮಾತುಗಳು ಇಷ್ಟವಾಗದ ಕಾರಣ ನಿಮ್ಮಿಂದ ಯಾರಾದರೂ ದೂರವಿರಬಹುದು.
ತುಲಾ ರಾಶಿ: ಸಮಜಾಯಿಷಿ ಕೊಡಬೇಕಾದರೆ ಕ್ರಮವನ್ನು ಅರಿತುಕೊಳ್ಳಿ. ನಿಮ್ಮ ಆಕಸ್ಮಿಕ ಪ್ರಯಾಣದಲ್ಲಿ ತೊಡಕಾಗಬಹುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳುವುದು ನಿಮಗೆ ಅನಿವಾರ್ಯವಾದೀತು. ಹಣದ ಖರ್ಚು ನಿಯಂತ್ರಣದಲ್ಲಿ ಇರಲಿದೆ. ಆಪ್ತರೊಂದಿಗೆ ಸಣ್ಣ ವ್ಯಾಜ್ಯ ಸಾಧ್ಯವಿದೆ, ಬುದ್ದಿವಂತಿಕೆಯಿಂದ ಬಗೆಹರಿಸಿ. ಆರೋಗ್ಯ ಸುಧಾರಿತ ಸ್ಥಿತಿಯಲ್ಲಿದೆ. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲು ತುರ್ತು ನಿರ್ಣಯ ಬೇಕಾಗಬಹುದು. ಯಾರ ಅನುಭವವೂ ನಿಮ್ಮ ಗಣನೆಗೆ ಬರದು. ಆರ್ಥಿಕವಾಗಿ ಅಭಿವೃದ್ಧಿ ನೆಮ್ಮದಿ ತರಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ. ಮಕ್ಕಳ ಕಡೆಯಿಂದ ತೃಪ್ತಿದಾಯಕ ಒಳ್ಳೆಯ ಸುದ್ದಿ ಪಡೆಯುತ್ತೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಖರೀದಿಯಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಭೋಗದ ವಿಧಾನಗಳು ಹೆಚ್ಚಾಗುತ್ತವೆ. ಮಕ್ಕಳಿಂದ ಬೇಸರವಾಗುವ ಸಾಧ್ಯತೆ ಇದೆ. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ.
ವೃಶ್ಚಿಕ ರಾಶಿ: ನಿರೀಕ್ಷಿಸದೇ ಇರುವುವರಿಂದ ಕಲಹವನ್ನು ಮಾಡಬೇಕಾಗುವುದು. ನಿಮ್ಮ ಬಳಿ ಸಂಪತ್ತಿರುವುದು ತಿಳಿದು ಅದನ್ನು ಪಡೆಯಲು ನಿಮ್ಮವರು ಪ್ರಯತ್ನಿಸಬಹುದು. ಇಂದು ಸದವಕಾಶಗಳು ಸಿಗಲಿವೆ ಎಂಬ ಖುಷಿ ಇರುವುದು. ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗಬಹುದು. ಉಪಾಯದಿಂದ ಗೆಲ್ಲುವ ದಾರಿಯನ್ನು ನೋಡಿ. ಮಕ್ಕಳ ಪ್ರಯತ್ನ ಫಲ ನೀಡಬಹುದು. ದಾಂಪತ್ಯ ಜೀವನದಲ್ಲಿ ಅನ್ನೋನ್ಯತೆ ಇರುತ್ತದೆ. ಕುಟುಂಬದ ಕೀರ್ತಿಯನ್ನು ಬೆಳೆಸುವವರಿದ್ದೀರಿ. ರಕ್ಷಣೆಯ ವ್ಯವಸ್ಥೆಯಲ್ಲಿ ಇರುವವರಿಗೆ ಶುಭಸುದ್ದಿ ಇರಲಿದೆ. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಲ್ಲದಿದ್ದರೆ ನಷ್ಟವು ನಿಮ್ಮದಾಗುತ್ತದೆ.
ಧನು ರಾಶಿ: ಹಳೆಯ ಕಲಹವು ಯಾವುದೋ ಕಾರಣದಿಂದ ಪುನಃ ಬರಬಹುದು. ಇಂದು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಿನ್ನಡೆಯಾಗುವುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ನೂತನ ಗೃಹನಿರ್ಮಾಣದ ಕನಸು ಕಾಣುವಿರಿ. ಈ ಸಮಯದಲ್ಲಿ ಆದಾಯ ಹೆಚ್ಚಳ ತರುತ್ತದೆ. ನಿಮ್ಮ ಆತ್ಮವಿಶ್ವಾಸ ಬಲವಾಗಿ ಉಳಿಯುತ್ತದೆ, ವಿಶ್ವಾಸಾರ್ಹ ಜನರೊಂದಿಗೆ ಮಾತ್ರ ಸಂಪರ್ಕದಲ್ಲಿರಿ. ಇಲ್ಲವಾದರೆ ಯಾರಾದರೂ ನಿಮ್ಮನ್ನು ಗೊಂದಲಗೊಳಿಸಲು ಪ್ರಯತ್ನಿಸಬಹುದು. ಅನಾರೋಗ್ಯದಿಂದ ಕಂಗೆಡಬಹುದು. ತೈಲವ್ಯಾಪಾರಿಗಳು ಹೆಚ್ಚು ಲಾಭವನ್ನು ಪಡೆವರು. ಉದ್ಯೋಗ, ವ್ಯವಹಾರಗಳಲ್ಲಿ ಏರುಗತಿಯನ್ನು ಕಂಡು ಸಮಾಧಾನವಾಗಲಿದೆ. ನಕಾರಾತ್ಮಕ ವಿಚಾರಗಳ ಗಮನ ಕೊಟ್ಟು ನಿಮ್ಮ ಸಮಯವು ಹಾಳಾಗುವುದು. ನಿಮ್ಮಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಪಾಲಿನ ಕೆಲಸ ಕಾರ್ಯಗಳಲ್ಲಿ ಚುರುಕುತನ ಕಂಡುಬಂದು ಮುನ್ನಡೆ ಸಾಧಿಸಲಿದ್ದೀರಿ.
ಮಕರ ರಾಶಿ: ಸಾಲವನ್ನು ತೀರಿಸಲು ಮತ್ತೆಲ್ಲೋ ಸಾಲಮಾಡುವಿರಿ. ನೀವು ಹಿಂದೆ ಆಗಿಹೋದ ಘಟನೆಗಳನ್ನು ನೆನೆಸಿಕೊಂಡು ವ್ಯಥೆಪಡುವಿರಿ. ಸಹೋದರರ ಜೊತೆ ಪ್ರೀತಿಯಿಂದ ಇರಲು ಬಯಸುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಪ್ರೀತಿಗೆ ಗೆಳೆಯರ ಸಹಾಯ ಸಿಗುವುದು. ಕೆಲವು ನಿರ್ಧಾರಗಳನ್ನು ತಾಳ್ಮೆಯಿಂದ ತೆಗೆದುಕೊಳ್ಳಿ. ಹಣದ ವ್ಯವಹಾರಗಳಲ್ಲಿ ಲಾಭದ ಸೂಚನೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ. ಯಾವುದೇ ಕೌಟುಂಬಿಕ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಬಹುದು. ವಿನಂತಿಸಿಕೊಂಡರೆ ಯಾವ ಕಾರ್ಯವೂ ಆಗದೇ ಇರದು. ವಿದ್ಯಾಭ್ಯಾಸದ ಕುರಿತು ಮಕ್ಕಳಿಗೆ ಪಾಠವನ್ನು ಮನೆಯಲ್ಲಿ ಮಾಡುವರು. ನಿಮಗದು ಅಸಹ್ಯ ವಿಷಯವಾಗುವುದು. ನಿಮ್ಮ ಬೆಳವಣಿಗೆಗೆ ಸಹಕರಿಸಿದವರ ನೆನಪನ್ನು ಮಾಡಿಕೊಳ್ಳವಿರಿ. ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಅಮೂಲ್ಯವಾದದ್ದನ್ನು ಕಳೆದುಕೊಳ್ಳುವಿರಿ. ಕೌಟುಂಬಿಕ ವಿಚಾರಗಳಲ್ಲಿ ಒತ್ತಡಗಳು ದೂರವಾಗಿ ನೆಮ್ಮದಿ ಕಂಡುಬರಲಿದೆ.
ಕುಂಭ ರಾಶಿ: ನಿಮ್ಮೊಬ್ಬರ ಸಿಟ್ಟು ಇಡಿಯ ವ್ಯವಸ್ಥೆಯನ್ನು ಹಾಳುಮಾಡುವುದು. ನಿಮ್ಮ ಏಳ್ಗೆಯನ್ನು ಕಂಡು ಶತ್ರುಗಳು ಸಂಕಟಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಆರ್ಥಿಕವಾಗಿ ಸ್ವಲ್ಪ ಒತ್ತಡ ಅನುಭವಿಸಬಹುದು ಆದರೆ ಅದು ತಾತ್ಕಾಲಿಕ. ಕೆಲಸದಲ್ಲಿ ಹಿರಿಯರಿಂದ ಶ್ಲಾಘನೆ ದೊರೆಯಬಹುದು. ಮನೆತನದ ಪ್ರತಿಷ್ಠೆಗೆ ಯೋಗ್ಯರೀತಿಯಲ್ಲಿ ವರ್ತಿಸುವಿರಿ. ಸಂಬಂಧಗಳಲ್ಲಿ ಸ್ಪಷ್ಟತೆ ಇಟ್ಟರೆ ಗೊಂದಲ ತಪ್ಪಬಹುದು. ವಾಹನ, ಮನೆ ಸಂಬಂಧಿತ ಕೆಲಸಗಳಿಗೆ ಅನುಕೂಲ. ಮಕ್ಕಳ ವಿಚಾರದಲ್ಲಿ ಸಂತೋಷದ ಸುದ್ದಿ ಕೇಳಬಹುದು. ನಿಯಮಗಳನ್ನು ಮುರಿಯಬೇಕು ಎನ್ನುವ ಮನಃಸ್ಥಿತಿಯು ಇರಲಿದೆ. ಅತಿಯಾದ ಪ್ರಯಾಣವನ್ನು ನೀವು ನಿಲ್ಲಿಸುವುದು ಉತ್ತಮ. ಇಲ್ಲವಾದರೆ ಅದರ ಪರಿಣಾಮವನ್ನು ಅನುಭವಿಸಬೇಕಾಗುವುದು. ಕೆಲವು ಅಹಿತಕರ ಜನರನ್ನು ಭೇಟಿಯಾಗುವುದರಿಂದ ಅನಗತ್ಯ ತೊಂದರೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗ, ವ್ಯವಹಾರಗಳಲ್ಲಿ ಉಲ್ಲಾಸಕರ ವಾತಾವರಣವಿರಲಿದೆ.
ಮೀನ ರಾಶಿ: ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಕೊಳ್ಳುವುದು ಕಡಿಮೆಯಾಗಿದ್ದು ಗಮನಕ್ಕೆ ಬರುವುದು. ಇಂದು ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣಲಿದ್ದೀರಿ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದು ಸಾಕಾರಗೊಳ್ಳುವುದು. ಸುಮ್ಮನಿರುವುದು ಹಲವು ಕಲಹವನ್ನು ತಪ್ಪಿಸುವುದು. ಸಣ್ಣ ವಿಷಯಗಳಿಗೂ ಕೋಪಗೊಳ್ಳುವ ನಿಮ್ಮ ಅಭ್ಯಾಸವನ್ನು ಸುಧಾರಿಸಿ ಮತ್ತು ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಯತ್ನಿಸಿ. ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಳೆಯ ಅನುಭವಗಳನ್ನು ನೆನಪಿಸಿಕೊಳ್ಳಿ. ಸ್ನೇಹಿತನಿಂದ ಬೆಂಬಲ ಸಿಗಲಿದೆ. ಹಣದ ವ್ಯವಹಾರಗಳಲ್ಲಿ ಜಾಗರೂಕತೆಯಿಂದಿರಿರಿ. ನಿಮ್ಮ ನಿರ್ಧಾರಕ್ಕೆ ಹಿಂದಿನ ಅನುಭವಗಳೇ ನಿಮಗೆ ಸಹಾಯವಾಗಲಿವೆ. ಇರುವವರನ್ನು ಬಿಟ್ಟು ಇನ್ನೊಬ್ಬರ ನಂಬಿ ಮೋಸಹೋಗಬೇಡಿ. ನೀವು ಯಾವುದೇ ನಿರ್ಧಾರಕ್ಕೆ ಕಟ್ಟುಬೀಳದೇ ಸ್ವತಂತ್ರವಾಗಿ ಇರಲು ಬಯಸುವಿರಿ. ಸ್ವಂತ ವ್ಯಾಪಾರ, ವ್ಯವಹಾರ ಹಾಗೂ ಕೌಟುಂಬಿಕ ವಿಚಾರಗಳಲಿದ್ದ ಒತ್ತಡಗಳು ನಿವಾರಣೆಯಾಗಲಿವೆ. ಶುಭ ಕಾರ್ಯದ ನಿರ್ಧಾರವು ಪ್ರಯತ್ನ ಬಲದಿಂದ ಫಲ ನೀಡಲಿದೆ.
TV9 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1