
ಹಂಗಾಮಿ ನಾಯಕ ಜಿತೇಶ್ ಶರ್ಮಾ ಸಿಡಿಸಿದ ಅಜೇಯ 85 ರನ್ಗಳ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಆರ್ಸಿಬಿ ಲಖನೌ ನೀಡಿದ್ದ 228ರನ್ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳಿರುವಂತೆ ಚೇಸ್ ಮಾಡಿ ಗೆದ್ದು, ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನವನ್ನ ಗಿಟ್ಟಿಸಿಕೊಂಡಿದೆ.
ಟಾಪ್ 2 ನಿರ್ಧರಿಸುವ ನಿರ್ಣಾಯಕ ಹಾಗೂ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು RCB) ತಂಡ ಅಮೋಘ ಆಟವಾಡಿ 6 ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ. ಲಖನೌ ಸೂಪರ್ ಜೈಂಟ್ಸ್ (LSG) ನೀಡಿದ 228 ರನ್ಗಳ ಬೃಹತ್ ಗುರಿಯನ್ನ ಬೆನ್ನಟ್ಟಿದ ಆರ್ಸಿಬಿ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ತಲುಪಿತು. ಹಂಗಾಮಿ ನಾಯಕ ಜಿತೇಶ್ ಶರ್ಮಾ (ಅಜೇಯ 85), ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರೆ, ಮಯಾಂಕ್ ಅಗರ್ವಾಲ್ ಅಜೇಯ 41 ರನ್ಗಳಿಸಿ ಆರ್ಸಿಬಿಗೆ 6 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಆರ್ಸಿಬಿ ಲೀಗ್ನಲ್ಲಿ 9ನೇ ಗೆಲುವು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿತು. 2016ರ ಬಳಿಕ ಇದೇ ಮೊದಲ ಬಾರಿಗೆ ಆರ್ಸಿಬಿ ಟಾಪ್ 2ರಲ್ಲಿ ಸ್ಥಾನಪಡೆದುಕೊಂಡಿದೆ.
ಅಬ್ಬರಿಸಿದ ಓಪನರ್ಸ್, ಕೈಕೊಟ್ಟ ಮಿಡಲ್ ಆರ್ಡರ್
ಗೆಲುವು ಅನಿವಾರ್ಯವಾಗಿದ್ದ ಪಂದ್ಯದಲ್ಲಿ 228 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಮೊದಲ ವಿಕೆಟ್ಗೆ 61 ರನ್ಗಳ ಜೊತೆಯಾಟ ನೀಡಿತು. ಫಿಲ್ ಸಾಲ್ಟ್ 19 ಎಸೆತಗಳಲ್ಲಿ 6 ಬೌಂಡರಿಗಳ ಸಹಿತ 30 ರನ್ಗಳಿಸಿ ಔಟ್ ಆದರು ಆಕಾಶ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ರಜತ್ ಪಾಟೀದಾರ್ 7 ಎಸೆತಗಳಲ್ಲಿ ತಲಾ 1 ಬೌಂಡರಿ, 1 ಸಿಕ್ಸರ್ ಸಹಿತ 14 ರನ್ಗಳಿಸಿ ಓರೂರ್ಕ್ ಬೌಲಿಂಗ್ನಲ್ಲಿ ಸಮದ್ಗೆ ಕ್ಯಾಚ್ ನೀಡಿ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು. ಅದೇ ಓವರ್ನ ನಂತರದ ಎಸೆತದಲ್ಲೇ ಬಹಳ ದಿನಗಳ ಬಳಿಕ ತಂಡದಲ್ಲಿ ಸ್ಥಾನ ಪಡೆದಿದ್ದ ಲಿಯಾಮ್ ಲಿವಿಂಗ್ಸ್ಟೋನ್ (0) ಗೋಲ್ಡನ್ ಡಕ್ ಆಗಿ ತಮ್ಮ ದಯನೀಯ ವೈಫಲ್ಯವನ್ನು ಮುಂದುವರಿಸಿದರು.
ಪಂದ್ಯ ಮುಗಿಸಿದ ಜಿತೇಶ್- ಮಯಾಂಕ್
90ಕ್ಕೆ 3 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಕ್ರೀಸ್ಗೆ ಬಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಕೊಹ್ಲಿ ಜೊತೆ ಸೇರಿ 33 ರನ್ ಸೇರಿಸಿದರು. 30 ಎಸೆತಗಳಲ್ಲಿ 10 ಬೌಂಡರಿ ಸಹಿತ 54 ರನ್ಗಳಿಸಿದ್ದ ಕೊಹ್ಲಿ ಆವೇಶ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆದರೆ 5ನೇ ವಿಕೆಟ್ಗೆ ಒಂದಾದ ಮಯಾಂಕ್ ಹಾಗೂ ನಾಯಕ ಜಿತೇಶ್ ಶರ್ಮಾ ಪಂದ್ಯದ ಗತಿಯನ್ನೇ ಬದಲಿಸಿದರು. ಇವರಿಬ್ಬರು ಕೇವಲ 45 ಎಸೆತಗಳಲ್ಲಿ ಅಜೇಯ 107 ರನ್ಗಳಿಸಿ ತಂಡವನ್ನ ಇನ್ನು 8 ಎಸೆತಗಳಿರುವಂತೆ ಗೆಲುವಿನ ಗಡಿ ದಾಟಿಸಿದರು.
ಜಿತೇಶ್ ಶರ್ಮಾ 33 ಎಸೆತಗಳಲ್ಲಿ 8 ಬೌಂಡರಿ, 6 ಭರ್ಜರಿ ಸಿಕ್ಸರ್ಗಳ ಸಹಿತ ಅಜೇಯ 85 ರನ್ಗಳಿಸಿದರೆ, ಕನ್ನಡಿಗ ಮಯಾಂಕ್ ಅಗರ್ವಾಲ್ 23 ಎಸೆತಗಳಲ್ಲಿ 5 ಬೌಂಡರಿ ಸಹಿತ ಅಜೇಯ 41 ರನ್ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಲಖನೌ ಸೂಪರ್ ಜೈಂಟ್ಸ್ ತಂಡದ ಪರ ವಿಲಿಯಂ ಓ ರೋರ್ಕ್ 74ಕ್ಕೆ2, ಆಕಾಶ್ ಸಿಂಗ್ 40ಕ್ಕೆ1, ಆವೇಶ್ ಖಾನ್ 32ಕ್ಕೆ1 ವಿಕೆಟ್ ಪಡೆದರು.
ಲಖನೌ ಸೂಪರ್ ಜೈಂಟ್ಸ್ ಇನ್ನಿಂಗ್ಸ್
ಪ್ಲೇ ಆಫ್ ರೇಸ್ನಿಂದ ಈಗಾಗಲೇ ಹೊರಬಿದ್ದಿರುವ ಲಖನೌ ತಂಡ ಕೇವಲ ಗೆಲುವಿನೊಂದಿಗೆ ಅಭಿಯಾನ ಅಂತ್ಯಗೊಳಿಸುವ ಪಂದ್ಯದಲ್ಲಿ ಅಕ್ಷರಃ ಅಬ್ಬರಿಸಿತು. ಇನ್ನಿಂಗ್ಸ್ ಆರಂಭಿಸಿದ 3ನೇ ಓವರ್ನಲ್ಲೇ ಮ್ಯಾಥ್ಯೂ ಬ್ರೀಡ್ಜ್ಕ್ (14) ವಿಕೆಟ್ ಕಳೆದುಕೊಂಡಿತು. ಆದರೆ 2ನೇ ವಿಕೆಟ್ ಜೊತೆಯಾಟದಲ್ಲಿ ಪಂತ್ ಮತ್ತು ಮಾರ್ಷ್ 78 ಎಸೆತಗಳಲ್ಲಿ 152 ರನ್ಗಳ ಜೊತೆಯಾಟ ನೀಡಿದರು.
ಆರ್ಸಿಬಿಗೆ ಪಂಜಾಬ್ ಎದುರಾಳಿ
ಈ ಗೆಲುವಿನೊಂದಿಗೆ ಆರ್ಸಿಬಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಇದೀಗ ಕ್ವಾಲಿಫೈಯರ್ 1ರಲ್ಲಿ ಅಗ್ರಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಕ್ವಾಲಿಫೈಯರ್ ಪಂದ್ಯ ಮೇ 29ರಂದು ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1