
ನಿತ್ಯಪಂಚಾಗ, ಜೂನ್ 05: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ದಶಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 58 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:08 – 15:45, ಯಮಘಂಡ ಕಾಲ 06:04 – 07:41, ಗುಳಿಕ ಕಾಲ 09:18 – 10:54.
ಮೇಷ ರಾಶಿ: ದಿಢೀರ್ ಅತಿಥಿಗಳ ಆಗಮನದಿಂದ ಉದ್ವೇಗ. ನಿಮ್ಮ ಹಿಂದಿನ ಶ್ರಮಕ್ಕೆ ಫಲವು ಪ್ರಾಪ್ತವಾಗಿ ಖುಷಿ ಎನಿಸುವುದು. ಜೀವನದಲ್ಲಿ ನಮಗಾಗಿ ನಾವು ಬದುಕಬೇಕೇ ಹೊರತು ಬೇರೆಯವರಿಗೋಸ್ಕರವಲ್ಲ ಎಂಬ ಯೋಚನೆ ಬರುವುದು. ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.
ವೃಷಭ ರಾಶಿ: ಹಳೆಯ ಸಂಬಂಧವು ಪುನಃ ಸ್ಥಾಪನೆಯಾಗಲಿದ್ದು, ಅಂಜಿಕೆಯೂ ಜೊತೆಗೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಜನರು ಸಕ್ಕರೆಯನ್ನು ಇರುವೆಗಳು ಮುತ್ತಿದಂತೆ ಮುತ್ತುವರು. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ತಂದೆಯ ಸಲಹೆಯಿಂದ ಹಣದ ಲಾಭಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ, ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ವ್ಯಾಪಾರ ವೆಚ್ಚಗಳಿಗಾಗಿ ನೀವು ಕೆಲವು ದಿನಗಳವರೆಗೆ ಕಾಯಬೇಕಾಗುತ್ತದೆ. ಕ್ರಿಯಾಶೀಲತೆಗೆ ನಿಮಗೆ ಯಾವುದೇ ಪ್ರಶಂಸೆ ಸಿಗದಿರುವುದು ನಿಮಗೆ ಕಷ್ಟವಾದೀತು. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ.
ಮಿಥುನ ರಾಶಿ: ವೃತ್ತಿಯ ವಾತಾವರಣದಿಂದ ನಿಮಗೆ ಬೇಸರವಾಗಬಹುದು. ಇಂದು ದಾಂಪತ್ಯಜೀವನದಲ್ಲಿ ಬಹಳ ಗೊಂದಲವಾಗಬಹುದು. ಇನ್ಮೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಾವಧಾನತೆಯಿರಲಿ. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ ಮತ್ತು ಪೋಷಕರ ಸಲಹೆ ನಿಮ್ಮ ನಿರ್ಧಾರಗಳಲ್ಲಿ ಸಹಾಯ ಮಾಡುತ್ತದೆ. ಸಂಬಂಧಗಳಲ್ಲಿ ಅನುಮಾನಗಳನ್ನು ತೊಡೆದುಹಾಕಿ, ಮನಸ್ಸಿನ ವಿಷಯಗಳನ್ನು ಸ್ಪಷ್ಟವಾಗಿ ಚರ್ಚಿಸಿ. ಉದ್ಯಮಿಯು ವ್ಯವಹಾರದ ವಿಷಯಗಳಲ್ಲಿ ಚಿಂತನಶೀಲವಾಗಿ ಮುಂದುವರಿಯಬೇಕು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ನಿಮ್ಮ ಮಾತುಗಳನ್ನು ಹರಿ ಬಿಡುವುದು ಬೇಡ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.
ಕರ್ಕಾಟಕ ರಾಶಿ: ನಿಮಗೆ ಆಗಬೇಕಾದುದನ್ನು ಕೂಡಲೇ ಮಾಡಿಸಿಕೊಳ್ಳಲಾಗದು. ನೀವು ಒಪ್ಪಿಕೊಂಡ ಕಾರ್ಯವನ್ನು ಬಿಡದೆ ಮುನ್ನಡೆಸುವ ಛಾತಿ ನಿಮ್ಮ ಯಶಸ್ಸಿನ ಗುಟ್ಟುಗಳಲ್ಲೊಂದು. ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಅಭಿನಂದನೆ ನಿಮ್ಮ ಮನಸ್ಸಿಗೆ ಸಂತೋಷ ತರುತ್ತದೆ. ವಾಹನದ ಬದಲಾವಣೆಯನ್ನು ಒಮ್ಮೆಲೇ ಮಾಡಲಾರಿರಿ. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ವ್ಯಾಪಾರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಸಂಗಾತಿಯ ಬಗ್ಗೆ ಕುತೂಹಲವಿರಬಹುದು, ಅದು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.
ಸಿಂಹ ರಾಶಿ: ಅಯಾಚಿತವಾಗಿ ಬಂದ ಉದ್ಯೋಗವು ನಿಮಗೆ ಹಿಡಿಸದು. ಇಂದು ಯಾರದೋ ಜೊತೆ ವ್ಯಾಪಾರದ ಕಾರಣಕ್ಕೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ನೀವು ವಾಹನವನ್ನು ಚಾಲನೆ ಮಾಡುವುದು ಬೇಡ. ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶವಿದೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳಿರಬಹುದು. ಆದರೆ ಅವರ ಅನಗತ್ಯ ಬೇಡಿಕೆಗಳಿಗೆ ಒಪ್ಪಿಕೊಳ್ಳಬೇಡಿ. ದಿನದ ಯೋಜನೆಗಳು ಒಳ್ಳೆಯದಾಗುವುದು. ಒತ್ತಡಕ್ಕೆ ಮಣಿದು ತಾತ್ಕಾಲಿಕ ಬದಲಾವಣೆ ತರಬಹುದು. ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಧಾವಂತದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವುದು.
ಕನ್ಯಾ ರಾಶಿ: ನಿಮ್ಮ ಸಾಮಾಜಿಕ ಸೇವೆಯನ್ನು ಲೇವಡಿ ಮಾಡಬಹುದು. ಉತ್ತರದಿಂದ ಸಮಯವ್ಯರ್ಥ. ನೀವು ಹೊಸ ವಸ್ತುಗಳನ್ನು ಖರೀದಿಸುವಿರಿ. ಇದರಿಂದ ಮನೆಯಲ್ಲಿ ಕಿರಿಕಿರಿಯ ವಾತಾವರಣವೂ ನಿರ್ಮಾಣವಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಆರೋಗ್ಯಕ್ಕಾಗಿ ಮಾಡಿದ ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಹೇಳದೇ ಮಾಡಿದ ಕೆಲಸದಿಂದ ಸಂಗಾತಿಗೆ ಅಪನಂಬಿಕೆ ಸಾಧದಯತೆ. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ಇಂದು ಉಚಿತ ಸಮಯ ಸಿಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ.
ತುಲಾ ರಾಶಿ: ಅಸೂಯೆಯಿಂದ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳಲುವಿರಿ. ಇಂದು ಮಂದಗತಿಯಲ್ಲಿ ಸಾಗುತ್ತಿದ್ದ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳು ವೇಗವನ್ನು ಪಡೆಯುವುವು. ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಹಣ ಮಹತ್ವದ್ದಾದರೂ, ಸಂಬಂಧಗಳಿಗಿಂತ ಹೆಚ್ಚಿನ ಪ್ರಾಮುಖ್ಯವಾಗಬಾರದು. ಪ್ರೀತಿಪಾತ್ರರಿಂದ ವಿಶೇಷ ಆಶ್ಚರ್ಯ ಸಿಗಬಹುದು. ವಿವಾಹಕ್ಕೆ ಅಪೇಕ್ಷಿತ ರೀತಿಯ ಸಂಬಂಧ ಕೂಡಿಬರಲಿದೆ. ಇದರಿಂದ ನಿಮ್ಮ ದಿನ ಹತ್ತಿರದವರ ಸಾನ್ನಿಧ್ಯದಲ್ಲಿ ಸಂತೋಷದಿಂದ ಸಾಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.
ವೃಶ್ಚಿಕ ರಾಶಿ: ಉದ್ಯೋಗದ ಕಾರಣ ಪ್ರಯಾಣ ಮಾಡುವಿರಿ. ಓಡಾಟ ಹಾಗೂ ಆಹಾರದಿಂದ ತೊಂದರೆಯಾಗಬಹುದು. ಇಂದು ನಿಮ್ಮವರ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವತ್ತ ನಿಮ್ಮ ಗಮನವಿರಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಸಂಶಯಾಸ್ಪದ ವ್ಯವಹಾರಗಳಿಂದ ದೂರವಿರಿ. ಸಾರ್ವಜನಿಕವಾಗಿ ಹಣಸಂಗ್ರಹ ಮಾಡುವ ಅನಿವಾರ್ಯತೆ ಬರಬಹುದು. ಪ್ರೀತಿಯನ್ನು ಹೊಸ ರೀತಿಯಲ್ಲಿ ಅನುಭವಿಸಲು ಆಪ್ತರ ಭೇಟಿಯ ಅವಕಾಶ ದೊರೆಯುತ್ತದೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು. ಇಂದಿನ ನಿಮ್ಮ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.
ಧನು ರಾಶಿ: ಉತ್ತಮ ಉದ್ಯೋಗಕ್ಕೆ ಉನ್ನತ ಶ್ರಮವೇ ಮೂಲ ಎನ್ನುವುದನ್ನು ನೆನಪಿಡಿ. ಇಂದು ಬಹಳ ದಿನಗಳ ಅನಂತರ ನಿಮ್ಮ ವ್ಯಾಪಾರದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುವುದು. ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಸಮರಸದ ಸ್ವಭಾವವನ್ನು ಬೆಳೆಸಿ, ದ್ವೇಷವನ್ನು ಮೀರಿ ಶಾಂತಿ ಹೊಂದಿ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಖರ್ಚುಗಳ ಮೇಲೆ ನಿಯಂತ್ರಣ ಅಗತ್ಯ. ಪ್ರೇಮಜೀವನದಲ್ಲಿ ಹೊಸ ಉತ್ಸಾಹ ದೊರೆಯುತ್ತಿದ್ದು, ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಅನುಭವಿಸುವ ಅವಕಾಶ ಸಿಗಲಿದೆ. ಬದಲಿಗೆ ಆತ್ಮವಿಶ್ವಾಸದಿಂದ ಮುಂದುವರಿದರೆ ಯಶಸ್ಸು ನಿಮ್ಮದಾಗಲಿದೆ. ಆತ್ಮಸ್ತೈರ್ಯವನ್ನು ಕಳೆದುಕೊಳ್ಳುವುದು ಬೇಡ. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸಮಯ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ.
ಮಕರ ರಾಶಿ: ಅಪರೂಪದ ವ್ಯಕ್ತಿಗಳ ಭೇಟಿ ಅನಿರೀಕ್ಷಿತವಾಗಲಿದೆ. ನಿಮ್ಮಲ್ಲಿ ಹತಾಶೆಯ ಭಾವವು ಮೂಡುವುದು. ಅದನ್ನು ದೂರ ಮಾಡಿಕೊಳ್ಳಲು ಏನಾದರೂ ಇಷ್ಟವಾಗುವ ಚಟುವಟಿಕೆಯಲ್ಲಿ ಭಾಗವಹಿಸಿ. ಮನೆಯ ಸಣ್ಣ ವಿವಾದಗಳು ಉದ್ವೇಗ ತರಬಹುದು, ಆದರೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ ಮತ್ತು ತಜ್ಞರ ಸಲಹೆ ಪಡೆಯಿರಿ. ಉದ್ಯೋಗದ ಶತ್ರುವನ್ನು ತಂತ್ರದಿಂದ ಗೆಲ್ಲುವಿರಿ. ವ್ಯಾಪಾರಸ್ಥರು ಮುಖ್ಯವಾಗಿ ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ನಿಮ್ಮ ಹಣ ಬೇರೆಡೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಅನಗತ್ಯವಾಗಿ ದುಬಾರಿ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಿ. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ.
ಕುಂಭ ರಾಶಿ: ಮನೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕಾಗುವುದು. ಇಂದು ಯಾರ ಮೇಲೋ ದ್ವೇಷವನ್ನು ಸಾಧಿಸುತ್ತ ಕೂರಬೇಡಿ. ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಸಹಾಯ ಮಾಡುವ ಮೂಲಕ ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು ಮನೆಯ ಸುಧಾರಣೆಯ ಬಗ್ಗೆ ಯೋಚಿಸಿ. ವೈವಾಹಿಕ ಜೀವನ ಅಪೂರ್ವ ಕ್ಷಣಗಳಾಗಲಿದ್ದು, ಪ್ರೀತಿಪಾತ್ರರಿಗೆ ಅಗತ್ಯವಾದ ಸಮಯವನ್ನು ನೀಡಿ. ಕಲಾತ್ಮಕತೆಯು ನಿಮಗೆ ಇಷ್ಟವಾಗುವುದು. ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.
ಮೀನ ರಾಶಿ: ಇಂದು ನೀವು ಮಾತನಾಡಿದಲ್ಲೆಲ್ಲ ಕಲಹ ಅಥವಾ ವಿವಾದವೇ ಆಗುವುದು. ಇಂದು ನೀವು ಸುಮ್ಮನೇ ಕೆಲಸವಿಲ್ಲದೇ ಕುಳಿತಿರುವ ಬದಲು ಏನನ್ನಾದರೂ ಮಾಡಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಗಂಭೀರ ವರ್ತೆನೆಯಿಂದ ಸಹೋದ್ಯೋಗಿಗಳಿಗೆ ಆತಂಕ. ಧಾರ್ಮಿಕ ಕಾರ್ಯಗಳು ಶಾಂತಿ ತರುತ್ತವೆ. ಆದರೆ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯ. ಸ್ನೇಹಿತರ ಭೇಟಿ ಉತ್ಸಾಹಭರಿತವಾಗಿದ್ದು, ಯುವಕರು ಶೈಕ್ಷಣಿಕ ಸಲಹೆ ಪಡೆಯಬಹುದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಾಗ ಗೊಂದಲಗಳು ತಲೆದೋರುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ.
TV9 Kannada