
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ – 06 : 05 am, ಸೂರ್ಯಾಸ್ತ – 07 : 02 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:11 – 15:48, ಯಮಘಂಡ ಕಾಲ 06:06 – 07:43, ಗುಳಿಕ ಕಾಲ 09:20 – 10:57
ಮೇಷ ರಾಶಿ: ಕೇವಲ ಕಲ್ಪನೆಯಲ್ಲಿ ಇರುವ ನಿಮಗೆ ವಾಸ್ತವವು ಸರಿಯಾಗಿ ಅರ್ಥವಾಗಲಿದೆ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಇದಕ್ಕಾಗಿ ಅಪಮಾನೂ ಆಗಬಹುದು. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಆತ್ಮೀಯರಿಂದ ನೆರವು ಸಿಗಬಹುದು. ಮೇಲ್ನೋಟದಿಂದ ಗೊತ್ತಾಗಿದ್ದು ಅಂತರಂಗವನ್ನು ತಲುಪದು. ಇನ್ನೊಬ್ಬರ ಕಲಹದಿಂದ ನೆಮ್ಮದಿಯನ್ನು ಕಾಣುವುದು ಬೇಡ. ಸಾಮಾಜಿಕವಾಗಿ ಮನ್ನಣೆ ಸಿಗುವ ಸಾಧ್ಯತೆ ಇದೆ. ಯಾರಾದರೂ ಹೊಗಳಿದರೆ ಹಿಗ್ಗಬೇಡಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು.
ವೃಷಭ ರಾಶಿ: ಪ್ರೇಮಪಯಣದಲ್ಲಿ ತೊಂದರೆ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಹಣದ ಉಳಿತಾಯದಿಂದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು ಬೇರೆಯರಿಗಿಂತ ವಿಭಿನ್ನವನ್ನಾಗಿ ತೋರಿಸಬಹುದು. ಆದರೆ, ಪ್ರತಿಯೊಂದು ಮಾತು ಎಣಿಕೆಯಿಂದ ಮಾತಾಡಿ. ಬೇರೆವರಿಗಿಂತ ಭಿನ್ನವಾಗಿರಲು ಇಷ್ಟಪಡುವಿರಿ. ಹಣಕಾಸಿನಲ್ಲಿ ಹೊಸ ದಿಕ್ಕು ಕಂಡುಬರುವ ಸಾಧ್ಯತೆ ಇದೆ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲಬಾಧೆಯಿಂದ ಮುಕ್ತರಾಗಲು ಯೋಜನೆ ರೂಪಿಸುವಿರಿ. ಅತಿ ಬುದ್ಧಿವಂತಿಕೆಯು ಮುಳುವಾಗಬಹುದು. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.
ಮಿಥುನ ರಾಶಿ: ಮತ್ತೆ ಪಡೆಯಲು ಕಷ್ಟವಾಗುವುದನ್ನು ಉಳಿಸಿಕೊಳ್ಳಿ. ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ಏನೇ ಆದರೂ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಬಹುದು. ನಿಮ್ಮೊಳಗಿನ ಪ್ರಪಂಚ ನಿಮ್ಮನ್ನು ದೂಡಿ ಹೊರಹಾಕಬಹುದು. ಮನಸ್ಸಿನಲ್ಲಿ ಗಾಬರಿಯ ಸ್ಥಿತಿಯನ್ನು ನಿವಾರಿಸಿಕೊಳ್ಳಿ. ಮನೆಯಲ್ಲಿನ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆರೋಗ್ಯದಲ್ಲಿ ಚೇತರಿಕೆ ನಿಮ್ಮ ಶಕ್ತಿಯನ್ನು ಪ್ರಭಾವಶಾಲಿಯಾಗಿ ಬಳಸಿಕೊಳ್ಳಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಅಳುಕುವ ಅವಶ್ಯಕತೆ ಇಲ್ಲ. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮ ಸೇವೆ ಪರಿಗಣಿತವಾಗಲಿದೆ. ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಇದರಿಂದ ತುರ್ತು ಕೆಲಸಗಳನ್ನು ಮರೆಯಬಹುದು ಸಿಟ್ಟಿನಿಂದ ಎಲ್ಲವನ್ನೂ ಸರಿ ಮಾಡುತ್ತೇನೆ ಎಂಬುದನ್ನು ಬಿಡಿ. ಹೊಸದಾಗಿ ಸೇರಿದವರ ಮೇಲೆ ಹದ್ದಿನ ಕಣ್ಣಿರುವುದು. ನಿಮ್ಮ ಉತ್ಸಾಹ ಇತರರನ್ನೂ ಪ್ರೇರೇಪಿಸಬಹುದು. ಕೆಲಸಗಳಲ್ಲಿ ಹೆಚ್ಚಿನ ಗಮನ ಬೇಕಾಗಿರುತ್ತದೆ. ಆದರೆ, ಸಮಯ ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ಹಣದ ವಿಚಾರದಲ್ಲಿ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ. ಸ್ನೇಹಿತರಿಂದ ಸಹಾಯ ಅಥವಾ ಸಲಹೆ ಸಿಗಬಹುದು. ನಮ್ಮ ಬಳಿ ಇರುವ ವಸ್ತು, ವ್ಯಕ್ತಿಗಳ ಮೇಲಲ್ಲ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಯಾವುದರಿಂದಲೂ ಬಿಡುಗಡೆ ಸಿಗದೇ ನೀವು ಸ್ವತಂತ್ರರಾಗಲಾರಿರಿ. ಆತುರದ ನಿರ್ಧಾರಕ್ಕೆ ಹೋಗಬೇಡಿ. ದ್ವಿಚಕ್ರ ವಾಹನದಲ್ಲಿ ಆಯ ತಪ್ಪಬಹುದು. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.
ಸಿಂಹ ರಾಶಿ: ತಪ್ಪಿಗೆ ದಂಡನೆಯೇ ಶಿಕ್ಷೆಯಲ್ಲ, ಅದಕ್ಕಿಂತ ಪೂರ್ವದ ಕ್ರಮವನ್ನು ತೆಗೆದುಕೊಳ್ಳಿ. ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ನಿಮ್ಮ ಉತ್ಸಾಹವನ್ನು ಉಳಿಸಿಕೊಂಡು ಮುಂದೆ ಸಾಗಬೇಕು. ಹಣಕಾಸಿನ ಚಿಂತೆ ಇತ್ತು ಸಹ ಪರಿಹಾರ ದೊರೆಯಬಹುದು. ಯಾರಾದರೂ ನಿಮ್ಮ ಹೆಸರು ಬಳಸಿ ಕೆಲಸ ಮಾಡಿಸಿಕೊಳ್ಳುವರು. ಕುಟುಂಬದಿಂದ ಸಹಕಾರ ಸಿಗಲಿದೆ. ನಿಮ್ಮ ಶಕ್ತಿ ಮತ್ತು ಆಂತರಿಕ ಶಾಂತಿಯ ಮೇಲೆ ನಂಬಿಕೆ ಇಡಿ. ಮಾತುಗಳಿಂದಲೇ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಮರೆತು, ತಾಳ್ಮೆ, ಮೌನದಿಂದ ಸಾಧ್ಯ ಎಂಬುದನ್ನು ನಂಬಿ. ಅವರ ಸಲಹೆಯನ್ನು ಸ್ವೀಕರಿಸಿ ಕ್ರಮಬದ್ಧವಾಗಿ ಆಚರಿಸಿ. ಪ್ರಯಾಣದಲ್ಲಿ ಪ್ರೇಮವಾಗುವ ಸಂಭವವಿದೆ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು. ಅದಕ್ಕೆ ಏನನ್ನಾದರೂ ಹೇಳಬೇಡಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.
ಕನ್ಯಾ ರಾಶಿ: ನಿಮ್ಮ ಹಿಂದೆ ನಡೆಯುವ ವಿದ್ಯಮಾನಗಳು ತಡವಾಗಿ ಗೊತ್ತಾಗಿ, ಅಡಚಣೆಯಾಗಲಿದೆ. ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಸ್ಪಷ್ಟತೆಯ ಜೊತೆ ಮುಂದೆ ಸಾಗಿರಿ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಹಲವು ರೀತಿಯ ವಿರೋಧವನ್ನು ನೀವು ತೆಗೆದುಕೊಳ್ಳುವ ತೀರ್ಮಾನದಿಂದ ಬರಲಿದೆ. ಹಳೆಯ ಸಾಲಗಳ ಪರಿಹಾರ ಸಾಧ್ಯ. ಹಣಕಾಸಿನಲ್ಲಿ ಸುಧಾರಣೆ ಕಾಣಬಹುದು. ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯುತ್ತದೆ. ಒಟ್ಟಾರೆ ಈ ದಿನ ನಿಮಗೆ ಅನುಕೂಲಕರವಾಗಿರುತ್ತದೆ. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಇನ್ನೊಬ್ಬರ ವ್ಯವಹಾರವನ್ನು ಕೆಡಿಸಲು ಹೋಗಬೇಡಿ. ಭೂ ವ್ಯವಹಾರವು ಇತ್ಯರ್ಥ ಆಗುವುದು ಕಷ್ಟ. ಚೆನ್ನಾಗಿ ಮಾತನಾಡುತ್ತೇನೆಂದು ಬೇರೆಯವರಿಗೆ ನೋವನ್ನು ಕೊಡಬೇಡಿ. ನಗುಮುಖದಿಂದ ಇಂದು ಇದ್ದರು ನಿಮ್ಮ ಬಳಿ ಅನೇಕರು ಮಾತನಾಡಲು ಬರಬಹುದು. ವ್ಯಾಪರ ಸುಗಮವಾಗಿ ಸಾಗುವುದು. ಮನೆಯವರಿಂದ ದೂರವಿದ್ದೇನೆಂಬ ಭಾವವು ಕಾಡಬಹುದು. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ.
ತುಲಾ ರಾಶಿ: ಏಕಾಂಗಿಯಾಗಿ ಸಣ್ಣ ಉದ್ಯಮವನ್ನು ಆರಂಭಿಸುವಿರಿ. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ನಿಮ್ಮ ಪ್ರಯತ್ನಗಳು ಬದಲಾಗಲಿ. ಕುಟುಂಬದಲ್ಲಿ ಮನಸ್ತಾಪವು ಸ್ಫೋಟವಾಗಲಿದೆ. ಸಂಧಾನದ ಸಮಾಲೋಚನೆಗಳು ಫಲ ನೀಡದೇ ಹೋಗಬಹುದು. ನಿಮ್ಮ ಮಾನಸಿಕ ಹಿತಕ್ಕಾಗಿ ಕೆಲಸ ಕೆಲಸ ಮಾಡುವಿರಿ. ಕೆಲಸಗಳಲ್ಲಿ ವಿಶಿಷ್ಟ ಯಶಸ್ಸುಗಳು ಸಂಭವಿಸಬಹುದು. ಆದರೆ, ಕೆಲಸದ ಒತ್ತಡ ಜಾಸ್ತಿಯಾಗಬಹುದು. ಹಣದ ವ್ಯವಹಾರಗಳಲ್ಲಿ ನಿರ್ಣಯ ದೃಢವಾಗಿರಲಿ. ಸ್ವಭಾವವನ್ನು ತಿದ್ದಿಕೊಳ್ಳಲಾಗದೇ ಎಲ್ಲರಿಂದ ನಿಂದನೆಗೆ ಒಳಗಾಗುವಿರಿ. ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ನೀವು ನಿಮ್ಮ ನಿಲುವನ್ನು ಬದಲಾಯಿಸಬೇಡಿ. ನಿಮಗೆ ಖುಷಿ ಎನಿಸಿದ್ದನ್ನು ಬೇರೆಯವರಿಗೆ ನೋವಾಗದಂತೆ ಮಾಡಿ. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ಹೊಣೆಗಾರಿಕೆ ತಪ್ಪಬಹುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ.
ವೃಶ್ಚಿಕ ರಾಶಿ: ಎಲ್ಲವೂ ಸಮಯಕ್ಕೆ ಸರಿಯಾಗಿ ಆಗುತ್ತಿದೆ ಎಂದರೆ ಎಲ್ಲಿಯೋ ಅಪಘಾತದ ಸೂಚನೆ. ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ. ಸೌಂದರ್ಯದ ಸಾಧನಗಳನ್ನು ಸ್ತ್ರೀಯರು ಹೆಚ್ಚು ಬಳಸುವರು. ಮಕ್ಕಳ ಕಡೆ ಗಮನ ಹೆಚ್ಚು ಬೇಕಾಗುವುದು. ನಿರುತ್ಸಾಹದ ಮಾತಿಗೆ ಕಿವಿಯಾಗದೇ ಇದ್ದರೆ ಒಳ್ಳೆಯದು. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ಯೋಜನೆಯಂತೆ ಕೆಲಸವು ಯಶಸ್ವಿಯಾಗುತ್ತದೆ. ಸಹೋದರರಿಂದ ಬೆಂಬಲ ಸಿಗುತ್ತದೆ. ನಿಮ್ಮ ವಿರೋಧಿಗಳ ಮೇಲೆ ನೀವು ವಿಜಯಶಾಲಿಯಾಗುತ್ತೀರಿ. ಇಂದು ಕೆಲಸ ಪಟ್ಟಿಯು ಮುಗಿಯದಂತೆ ಕಾಣದು. ಕಾರ್ಯದಲ್ಲಿ ವೇಗವಿಲ್ಲದೇ ನಿಧನಾವಾಗುವುದು. ಬಂಧುಗಳ ಸಹವಾಸದಿಂದ ನಿಮಗೆ ಉತ್ತಮ ಮಾರ್ಗವು ಸಿಗಲಿದೆ. ದಂಪತಿಗಳ ನಡುವೆ ಸಾಮರಸ್ಯವಿರುವುದು. ಬೇಸರವಾಗಿ ಎಲ್ಲವೂ ಅಶಾಶ್ವತ ಎಂದೆನಿಸಬಹುದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು. ಅವರವರ ಸಾಮರ್ಥ್ಯವನ್ನು ನೀವು ತಿಳಿದಿಲ್ಲ. ನಿಮ್ಮ ನೌಕರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ.
ಧನು ರಾಶಿ: ಕ್ಷಮೆ ಕೇಳುವ ಮೂಲಕ ವಿಶ್ವಾಸ ಸಂಪಾದನೆ ಮಾಡುವಿರಿ. ಇಂದು ದುಸ್ಸಾಧ್ಯವಾದ ಕಾರ್ಯವನ್ನೇ ಮಾಡಲು ಮುಂದಾಗುವಿರಿ. ಮನೆಗೆ ಖರ್ಚು ಮಾಡುವಾಗ ನಿಮ್ಮ ಆರ್ಥಿಕಸ್ಥಿತಿಯನ್ನೂ ಗಮನಿಸಿ. ಇಂದು ನಿಮ್ಮ ಪರೀಕ್ಷೆಗೆಂದು ಕೆಲವು ಘಟನೆಗಳು ನಡೆಯಬಹುದು. ಇಂದಿನ ಯೋಜನೆಗಳು ಕೊನೆಯ ಕ್ಷಣದಲ್ಲಿ ಬದಲಾಗಬಹುದು. ನಿಮ್ಮ ಕಾರ್ಯಕ್ಷಮತೆ ಇತರರನ್ನು ಪ್ರಭಾವಿತ ಮಾಡುತ್ತದೆ. ಹಿರಿಯರಿಂದ ಮೆಚ್ಚುಗೆ ಸಿಗಬಹುದು. ಹಣಕಾಸಿನ ಪರಿಸ್ಥಿತಿ ಸಮೃದ್ಧವಾಗಬಹುದು. ವಾಹನ ಚಾಲನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು ಉತ್ತಮ. ನಿಮ್ಮ ನಿರ್ಧಾರಗಳು ನಿಮ್ಮ ಭವಿಷ್ಯ ರೂಪಿಸುತ್ತದೆ. ಮಕ್ಕಳು ನಿಮಗೆ ಸಂತೋಷವನ್ನು ಕೊಡುವರು. ಅವರ ಜೊತೆ ಸಮಯವನ್ನು ಕಳೆಯಿರಿ. ಅತಿಯಾದ ಆಸೆಬುರುಕುತನ ಒಳ್ಳೆಯದಲ್ಲ. ಮನಸ್ಸು ಹೇಳಿದಂತೆ ಕೇಳಬೇಡಿ, ಸಮಾಧಾನದಿಂದ ಇರಿ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಖರ್ಚಿನ ಬಗ್ಗೆ ಅಂದಾಜು ಇಲ್ಲದೇ ಕಾರ್ಯವನ್ನು ಒಪ್ಪಿಕೊಳ್ಳುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು.
ಮಕರ ರಾಶಿ: ಒತ್ತಡವನ್ನು ನಿಭಾಯಿಸುವ ಪ್ರಯತ್ನ ಪೂರ್ಣ ಸಫಲವಾಗದು. ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಇನ್ನೊಬ್ಬರನ್ನು ನಿಂದಿಸುವುದು ಬೇಡ. ಅವರೇ ಕರ್ಮದ ಫಲವನ್ನು ಉಣ್ಣುವರು. ನೀವಾಡುವ ಮಾತುಗಳು ನಿಮಗೆ ಖುಷಿ ಕೊಡಬಹುದು. ಇಂದು ನಿಮಗೆ ಸಿಗುವ ಬೆಂಬಲ ಇಲ್ಲವಾಗುವುದು. ಕೆಲಸದಲ್ಲಿ ಬದಲಾವಣೆ ಅಥವಾ ಹೊಸ ಅವಕಾಶ ಸಿಗಬಹುದು. ಹಣಕಾಸಿನ ವಿಷಯಗಳಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಪ್ರಯಾಣ ಯೋಚನೆ ಇದ್ದರೆ ಮುಂದೂಡುವುದು ಉತ್ತಮ. ಸಂಬಂಧಗಳಲ್ಲಿ ಸ್ಪಷ್ಟತೆ ಇರಲಿ. ದೇವರ ಸ್ತೋತ್ರಾದಿಗಳನ್ನು ಮಾಡಿ. ವಿದೇಶಕ್ಕೆ ಹೋಗುವ ಅವಕಾಶವು ತಪ್ಪಿಹೋಗುವುಸು. ಅಗತ್ಯವಿದ್ದಷ್ಟೇ ಖರ್ಚು ಮಾಡಿ. ಎಲ್ಲವೂ ಬೇಕೆನಿಸಬಹುದು. ಮನಸ್ಸನ್ನು ಕಡಿಮಾಣ ಹಾಕಿ ನಿಲ್ಲಿಸುವುದು ಉತ್ತಮ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ.
ಕುಂಭ ರಾಶಿ: ಯಾರೇ ಒತ್ತಡ ಹಾಕಿದರೂ ನಿಮ್ಮ ದಾರಿಯಲ್ಲಿ ಇರುವಿರಿ. ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ನಿಮ್ಮಲ್ಲಿ ದೃಢತೆ ಇದ್ದರೆ ಅದು ಸಾಧ್ಯವಿಲ್ಲ. ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಸ್ನೇಹಿತರಿಂದ ನೆರವು ಸಿಗಬಹುದು. ಏನೇ ಮಾಡಿದರೂ ವಿರೋಧಿಗಳ ಮೀರಿಸುವ ಸಾಮರ್ಥ್ಯ ಬರದು. ಭವಿಷ್ಯದ ಬಗ್ಗೆ ಚಿಂತೆ ಮಾಡದಿರಿ, ಕಾಲ ಸರಿದಂತೆ ಪರಿಹಾರ ಸಿಗುತ್ತದೆ. ಕೆಲವು ಸಮಯದಲ್ಲಿ ಮನಸ್ಸಿಗೆ ನೆಮ್ಮದಿ ಸಿಗಬಹುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನಲ್ಲಿಯೇ ಸಂಕಟಪಡುವ ಬದಲು ಅದನ್ನು ಆಪ್ತರಿಗೆ ಹೇಳಿ ಹಗುರಾಗಿ. ಕೃಷಿಕರಿಗೆ ಲಾಭವಾಗುವ ಸಾಧ್ಯತೆ ಇದೆ. ಇಂದು ಸಹಾಯವನ್ನು ಕೇಳಿದವರಿಗೆ ಇಲ್ಲವೆನ್ನದೇ ಮಾಡಿ. ಆಯಾಸವಾದರೆ ವಿಶ್ರಾಂತಿಯ ಜೊತೆ ಕೆಲಸವನ್ನು ಮಾಡಿ. ಗುರಿಯೆಡಗೆ ಪ್ರಯತ್ನವು ನಿರಂತರವಾಗಿರಲಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ.
ಮೀನ ರಾಶಿ: ದಾಂಪತ್ಯದ ಅನಿರೀಕ್ಷಿತ ಬೆಳವಣಿಗೆಗೆ ಕುಗ್ಗುವಿರಿ. ಚಿಂತಿಸಿದ ಕೆಲಸವನ್ನು ಪೂರ್ಣಗೊಳಿಸುವ ಸಂತೋಷವು ನಿಮ್ಮದಾಗಲಿದೆ. ಅನ್ಯರಿಗೆ ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಕೆಲವರು ನಿಮ್ಮ ಪ್ರತಿಭೆಯನ್ನು ಗುರುತಿಸುತ್ತಾರೆ. ಇನ್ನೊಬ್ಬರ ಬಗ್ಗೆ ಅಂದುಕೊಂಡಿದ್ದು ಸತ್ಯವಾಗಲಿದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಕುಟುಂಬದ ವಿಚಾರಗಳಲ್ಲಿ ಸಮಾಧಾನಕರ ದಿನ. ಮಿತವಾಗಿ ಮಾತನಾಡಿ, ಬೇರೆಯವರಿಗೆ ವಿಷಯಗಳು ತಪ್ಪಾಗಿ ಅರ್ಥವಾಗಬಹುದು. ಯಾವುದನ್ನೂ ಹಠದ ಮೂಲಕ ಪಡೆದುಕೊಳ್ಳುವುದು ಬೇಡ. ಹೊಸದಾಗಿ ಸೇರಿದ ಕೆಲಸದಲ್ಲಿ ಗೊಂದಲಗಳಿದ್ದು ಅದನ್ನು ಸರಿಮಾಡಿಕೊಳ್ಳುವಿರಿ. ಇಂದು ನಿಮ್ಮ ಮಹತ್ತ್ವದ ಕಾರ್ಯವು ಕೈಗೂಡಬಹುದು. ಹಳೆಯ ಸಮಾಚಾರವನ್ನು ಪುನಃ ನೆನಪಿಸಿಕೊಳ್ಳುವಿರಿ. ಮಾತನ್ನು ಕಡಿಮೆ ಮಾಡಿ. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ.