
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ ಕಾಲ 10:58 – 12:35
ಮೇಷ ರಾಶಿ: ನಯವಾದ ಮಾತುಗಳು ವ್ಯಾಪಾರದಲ್ಲಿ ಸಹಜ. ಇಂದು ನಿಮಗೆ ಗೊತ್ತಿಲ್ಲದೇ ಸುಕೃತವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ಸೇರಿಸುವುದು. ಕೆಲವೇ ಕೆಲವು ಮಿತ್ರರ ಬಳಗವನ್ನು ಹೊಂದಿರುವಿರಿ. ನಿಮಗೆ ಎಂದು ಯಾರ ಬಳಿಯೂ ಏನನ್ನೂ ಹೇಳಬೇಕು ಎಂದು ಅನ್ನಿಸದಿರಬಹುದು. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ. ಸಂಗಾತಿಯ ಮಾತನ್ನು ಉಳಿಸಿಕೊಳ್ಳುವಿರಿ. ಕೆಲಸ ಹಾಗೂ ವೈಯಕ್ತಿಕ ಜೀವನದಲ್ಲಿ ಸಮತೋಲನವನ್ನು ಕಾಪಾಡುವುದು ಉತ್ತಮ. ವೈಯಕ್ತಿಕ ಜೀವನವನ್ನು ಕೆಲವರು ಅನುಸರಿಸಲು ಇಷ್ಟಪಡಬಹುದು. ನೀವಂದಕೊಂಡಿದ್ದೇ ಸತ್ಯ ಎಂಬುದನ್ನು ಬಿಟ್ಟು ಸಂತೋಷದದಿಂದ ಮಾತನಾಡಿ. ನಗುಮುಖವು ನಿಮ್ಮನ್ನು ಮತ್ತಷ್ಟು ಆಪ್ತವಾಗಿಸೀತು. ಪ್ರಾಮಾಣಿಕವಾದ ಪ್ರಯತ್ನವು ಇರಲಿ. ಸುಲಭವಾದ ಕಾರ್ಯವನ್ನು ಮೊದಲು ಮಾಡಿ ಮುಗಿಸಿ. ಫಲವೂ ಉತ್ತಮವಾದುದೇ ಸಿಗುವುದು. ಹೆಚ್ಚಿನ ನೀರಿಕ್ಷೆಯನ್ನು ಮಾಡಿ ಕೊರಗಬೇಡಿ ಆನಂತರದ ಜೀವನದಲ್ಲಿ.
ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ.
ವೃಷಭ ರಾಶಿ: ಕಾಲಕ್ಕೆ ತಕ್ಕಂತೆ ಯೋಗ್ಯವಾದ ಪರಿವರ್ತನೆ ಅವಶ್ಯಕ. ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಅತಿಯಾದ ಪ್ರಯಾಣದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಎಲ್ಲ ಹಾದಿಗಳೂ ನಿಮ್ಮದೇ ಆಗಿದ್ದರೂ ಒಂದು ಹಾದಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು ಮನೆಯ ಸುಧಾರಣೆಯ ಬಗ್ಗೆ ಯೋಚಿಸಿ. ವೈವಾಹಿಕ ಜೀವನದಲ್ಲಿ ಅಸಾಧಾರಣ ಕ್ಷಣಗಳಾಗಲಿದ್ದು, ಪ್ರೀತಿಪಾತ್ರರಿಗೆ ಅಗತ್ಯವಾದ ಸಮಯವನ್ನು ನೀಡಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಬಂಧುಗಳ ನಡುವೆ ಭಿನ್ನಾಭಿಪ್ರಾಯವು ಬರಲಿದೆ. ಬರುವ ಹಣದ ನಿರೀಕ್ಷೆಯಲ್ಲಿ ಇರುವುದು ಬೇಡ. ನಿಮ್ಮವರ ಆರೋಗ್ಯದ ಬಗ್ಗೆ ಗಮನಕೊಡುವಿರಿ. ರಾಜಕೀಯಕ್ಕೆ ಪ್ರವೇಶಿಸಬೇಕು ಎನ್ನುವ ಹಂಬಲ ಪೂರ್ಣವಾಗದೇ ಇರಬಹುದು. ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ.
ಮಿಥುನ ರಾಶಿ: ರಪ್ತಿನ ಮಾತುಕತೆಗಳು ಕೈಗೂಡಲಿದ್ದು, ಉದ್ಯೋಗವು ವಿಸ್ತೃತವಾಗಲಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸದ ಕಡೆ ಗಮನವಿಡಿ. ಅದೇ ಉತ್ತರವಾಗಲಿದೆ. ನಿಮ್ಮ ಎಂದಿನ ನಿಚ್ಚಲ ಮನಸ್ಸಿನಿಂದ ವಿಚಲಿತರಾಗಬೇಡಿ. ನಿಮಗೆ ಯಾರಿಂದಲಾದರೂ ಕೆಲಸವಾಗಬೇಕಿದ್ದರೆ ಪ್ರೀತಿಯಿಂದ ಹೇಳಿ, ಅನಾಯಾಸವಾಗಿ ಆಗುವುದು. ಸ್ನೇಹಿತರ ಭೇಟಿ ಉತ್ಸಾಹಭರಿತವಾಗಿದ್ದು, ಯುವಕರು ಶೈಕ್ಷಣಿಕ ಸಲಹೆ ಪಡೆಯಬಹುದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಾಗ ಗೊಂದಲಗಳು ತಲೆದೋರುವ ಸಾಧ್ಯತೆ ಇದೆ. ನೀವಿಂದು ನಿಮ್ಮ ಗುರುಗಳನ್ನು ಕಾಣಬೇಕೆನಿಸಿ ಅವರನ್ನು ಭೇಟಿಯಾಗಲು ಇಚ್ಛಿಸುವಿರಿ. ಕೆಲಸಗಳನ್ನು ನಿರಾಸಕ್ತಿಯಿಂದ ಮಾಡಬೇಡಿ. ಪಾಲುದಾರಿಕೆ ನಿಮಗೆ ಸರಿಯಾಗದು. ಸಮಾಜದ ಬಗ್ಗೆ ಚಿಂತಕರಾಗಿದ್ದರೆ ಅತಿಥಿಯಾಗಿ ನೀವು ಇರುವಿರಿ. ಒತ್ತಾಯಕ್ಕೆ ನೀವು ಕಾರ್ಯವನ್ನು ಮಾಡಬೇಕಾಗುವುದು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ.
ಕರ್ಕಾಟಕ ರಾಶಿ: ಸಂಗಾತಿಯ ಮಾತು ಭಿನ್ನಮತವೆನಿಸಿದರೂ ಸತ್ಯವೆಂದು ಅನಂತರ ಗೊತ್ತಾಗುವುದು. ಇಂದು ನೀವು ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ದೂರದ ಊರಿಗೆ ಪ್ರಯಾಣ ಮಾಡುವಿರಿ. ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿಹರೊಯವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಸಂಬಂಧಗಳಿಗಿಂತ ಹೆಚ್ಚಿನ ಪ್ರಾಶಸ್ತ್ರ ನೀಡಬಾರದು. ಪ್ರೀತಿಪಾತ್ರರಿಂದ ವಿಶೇಷ ಆಶ್ಚರ್ಯ ಸಿಗಬಹುದು. ಇದರಿಂದ ನಿಮ್ಮ ದಿನ ಹತ್ತಿರದವರ ಸಮ್ಮುಖದಲ್ಲಿ ಸಂತೋಷವಿರಲಿದೆ. ಯಾರದೋ ಕಾರ್ಯವನ್ನು ನಿಮ್ಮದೆಂದು ಬಿಂಬಿಸುವುದು ಬೇಡ. ಸರ್ಕಾರದಿಂದ ಲಾಭವನ್ನು ಪಡೆಯದೇ ಸ್ವಂತವಾಗಿ ಉದ್ಯೋಗವನ್ನು ನಡೆಸುತ್ತೇನೆಂಬ ನಿರ್ಧಾರ ಮಾಡಲಿದ್ದೀರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ, ಹಣವನ್ನು ಖಾಲಿ ಮಾಡುವಿರಿ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.
ಸಿಂಹ ರಾಶಿ: ಇನ್ನೊಬ್ಬರಿಗಾಗಿ ಸಾಲವನ್ನು ಒಡೆಯುವಿರಿ. ಇಂದು ಸಿಕ್ಕಿದ್ದರಲ್ಲಿ ಸಂತೃಪ್ತಿಯಿಂದ ಅನುಭವಿಸುವುದು ಅವಶ್ಯಕ. ಇನ್ನೊಬ್ಬರನ್ನು ಗೌರವಿಸುವ ಅಭ್ಯಾಸದಿಂದ ನಿಮಗೆ ಶ್ರೇಷ್ಠವಾದ ಮಾರ್ಗವು ತೆರೆದುಕೊಳ್ಳಬಹುದು. ಸಂಶಯಾಸ್ಪದ ವ್ಯಕ್ತಿಗಳಿಂದ ದೂರವಿರಿ. ಪ್ರಾಣಿಗಳ ಜೊತೆ ಒಡನಾಟ ಜಾಸ್ತಿಯಾಗಿರುವುದು. ಪ್ರೀತಿಯನ್ನು ಹೊಸ ರೀತಿಯಲ್ಲಿ ಅನುಭವಿಸಲು ಆಪ್ತರ ಭೇಟಿಯ ಅವಕಾಶ ದೊರೆಯುತ್ತದೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು. ವಾಹನ ಚಾಲನೆ ವೇಳೆ ಆತುರ ಬೇಡ. ಖರ್ಚು ಸಾಮಾಜಿಕ ಜೀವನದಲ್ಲಿ ಮತ್ತು ಭಾವನಾತ್ಮಕ ಪ್ರಪಂಚದಲ್ಲಿ ಹೆಚ್ಚು ಪ್ರಗತಿ ಕಾಣುವಿರಿ. ಇಂದು ನಿಮ್ಮ ದೃಷ್ಟಿಯಲ್ಲಿ ಎಲ್ಲರೂ ತಪ್ಪಿತಸ್ಥರೇ. ನಿಮ್ಮ ವಿದ್ಯಾಭ್ಯಾಸ ಮಟ್ಟ ಬಹಳ ಕೆಳಗಿದೆ ಎಂದು ಮನವರಿಕೆ ಆಗುವುದು. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ.
ಕನ್ಯಾ ರಾಶಿ: ಪರಸ್ಪರ ಅಪವಾದದಿಂದ ಕಲಹ. ಮನಸ್ತಾಪದಿಂದ ಸರ್ವ ಕಾರ್ಯವೂ ನಾಶ. ಇಂದು ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಬೇಕು ಎಂದು ಅನ್ನಿಸಬಹುದು. ಮನೆಯಲ್ಲಿ ಸಣ್ಣ ಸಣ್ಣ ಖರ್ಚುಗಳಿಗೆ ಧನವನ್ನು ಖರ್ಚು ಮಾಡಬೇಕಾಗಬಹುದು. ಆರ್ಥಿಕ ಸ್ಥಿತಿ ಸುಧಾರಿಸಿದರೂ ಖರ್ಚುಗಳ ಮೇಲೆ ನಿಯಂತ್ರಣ ಅಗತ್ಯ. ಪ್ರೇಮಜೀವನದಲ್ಲಿ ಹೊಸ ಉತ್ಸಾಹ ದೊರೆಯುತ್ತಿದ್ದು, ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಅನುಭವಿಸುವ ಅವಕಾಶ ಸಿಗಲಿದೆ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದರೂ ಖರ್ಚು ಅದನ್ನು ಮೀರಿರುತ್ತದೆ. ನಿಮ್ಮನ್ನು ಅರ್ಥಮಾಡಿಕೊಳ್ಳಲು ಇತರರು ಸೋಲಬಹುದು. ಕೃಷಿಯಲ್ಲಿ ಬದಲಾವಣೆಯನ್ನು ಮಾಡಲು ಆಲೋಚಿಸುವಿರಿ. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಸಾಹಿತ್ಯಕ್ಷೇತ್ರದವರು ಸಾಧಿಸಲು ಮಾರ್ಗಗಳು ಗೊತ್ತಾಗಲಿವೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು.
ತುಲಾ ರಾಶಿ: ಹೊಸ ಉದ್ಯಮದ ಜೊತೆ ಹೊಸ ಅಧಿಕಾರ ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ನಿಮ್ಮ ನಡೆ ಹಾಗು ನುಡಿಗಳು ಕೆಲವರಿಗೆ ವಿರೋಧದಂತೆ ಭಾಸವಾಗಬಹುದು. ಮನಸ್ಸು ಶಕ್ತಿಯನ್ನು ಕಳೆದುಕೊಳ್ಳಬಹುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ಅದರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ, ಸಂತೋಷದ ಕ್ಷಣಗಳು ನಿಮ್ಮ ದಿನವನ್ನು ಅಲಂಕರಿಸಬಹುದು. ಸಾಲ ಮಾಡಿಯಾದರೂ ಏನನ್ನಾದರೂ ಸಾಧಿಸಬೇಕು ಎಂಬ ಆತುರವಿರುವುದು. ದುಷ್ಕೃತ್ಯಕ್ಕೆ ಹಣದ ಸಹಾಯವನ್ನು ಮಾಡಿದರೆ ನಿಮಗೆ ಮುಂಬರುವ ದಿನಗಳ ತೊಂದರೆಗಳು ಬರಬಹುದು. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ದೂರದ ಊರಿಗೆ ಹೋಗಬೇಕಾಗುವುದು. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ.
ವೃಶ್ಚಿಕ ರಾಶಿ: ಆಯುಧ ಭೀತಿಯು ಇರಲಿದೆ. ಮಕ್ಕಳ ಪ್ರೀತಿಯಲ್ಲಿ ನೀವು ಕಳೆದುಹೋಗುವಿರಿ. ಕ್ರೀಡೆಯಲ್ಲಿ ಹೆಚ್ಚು ಮನಸ್ಸುಳ್ಳವರಾಗುವಿರಿ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು. ಆಸ್ತಿಯ ವಿಚಾರದಲ್ಲಿ ಕಾನೂನಿನ ತೊಂದರೆಗಳು ಇದ್ದು ಅದನ್ನು ಸರಿಪಡಿಸಿಕೊಳ್ಳಲು ಓಡಾಟಗಳಾಗಬಹುದು. ಬೇಸರದಿಂದ ಏಕಾಂತವಾಗಬೇಕಾಗುವುದು. ಆರ್ಥಿಕವಾಗಿ ಸುಧಾರಣೆ ಕಾಣುವ ದಿನವಾಗಿದ್ದು, ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶವಿದೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳಿರಬಹುದು, ಆದರೆ ಅವರ ಅನಗತ್ಯ ಬೇಡಿಕೆಗಳಿಗೆ ಒಪ್ಪಿಕೊಳ್ಳಬೇಡಿ. ದಿನದ ಯೋಜನೆಗಳು ಒಳ್ಳೆಯದಾಗುವುದು. ಸಂಪೂರ್ಣವಾಗಿ ತಿಳಿದುಕೊಂಡು ಒಪ್ಪಿಕೊಳ್ಳಿ. ಭಾರವಾದ ವಸ್ತುಗಳನ್ನು ಎತ್ತಲು ಹೋಗುವುದು ಬೇಡ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಉನ್ನತ ವ್ಯಾಸಂಗಕ್ಕೆ ತೆರಳುವ ಮನಸ್ಸು ಮಾಡುವಿರಿ. ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ. ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಂತೋಷಗೊಳಿಸುವಿರಿ.
ಧನು ರಾಶಿ: ನಿಮ್ಮ ಗಳಿಕೆ ಸಾಲವೆಂದೆನಿಸುವುದು. ಇಂದು ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಕೆಲಸದ ಹಣವನ್ನು ಪಡೆಯಲು ಬಾಕಿ ಇರುವುದು. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ಇಂದು ಉಚಿತ ಸಮಯ ಸಿಗುವ ಸಾಧ್ಯತೆ ಇದೆ. ಸ್ತ್ರೀಯರ ಜೊತೆಗಿನ ಸಂಬಂಧ ಹಾಳಾಗುವುದು. ಮನೆಯಲ್ಲಿ ನಡೆದ ಕಲಹದಿಂದ ಕಛೇರಿಯಲ್ಲಿ ಕೆಲಸ ಮಾಡಲು ಅಸಾಧ್ಯವಾದೀತು. ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು. ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿರುವುದು ಹಿಂಸೆಯಾದೀತು. ಆತುರಾತುರದಿಂದ ನೀವು ಮಾಡುವ ನಿರ್ಧಾರಗಳು ಮುಜುಗರ ಉಂಟುಮಾಡಲಿದೆ. ನಿಮಗೆ ಪ್ರಶಂಸೆಯು ಬಲವನ್ನು ಕೊಡುವುದು.
ಮಕರ ರಾಶಿ: ಕುಟುಂಬದ ವ್ಯವಹಾರವು ಬಯಲಾಗಲಿದೆ. ಇಂದು ನಿಮಗೆ ಸೇವೆಯಲ್ಲಿ ಸಂತೋಷ ಸಿಗಲಿದೆ. ನೀವು ತೊಂದರೆಗೆ ಸಿಲುಕದಂತೆ ದಾಟಲು ನಿಮಗೆ ಯಾರಿಂದಲಾದರೂ ಸೂಚನೆ ಬರಬಹುದು. ಸಹೋದರ ಒಡನಾಟ ದೂರವಾಗುವುದು. ಸಂಗಾತಿಯ ಮಾತುಗಳನ್ನು ಕೇಳಿ ನೀವು ತಾಳ್ಮೆಯಿಂದ ಇದ್ದರೆ ನಿಜವಾಗಿಯೂ ದೊಡ್ಡವರೇ. ಮಾತನಾಡುವಾಗ ಪದಗಳನ್ನು ಸರಿಯಾಗಿ ಬಳಸುವುದು ಉತ್ತಮ. ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಕೊಡಿ. ಬರಬೇಕಾದ ಹಣವು ಮಧ್ಯವರ್ತಿಗಳ ಕೈಯ್ಯಲ್ಲಿರುತ್ತದೆ. ಕೆಲವನ್ನು ಕೇಳಿ ಪಡೆಯಬೇಕಾಗುವುದು. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಮಕ್ಕಳು ನಿಮ್ಮನ್ನು ವಿಧವಿಧವಾಗಿ ಪ್ರಶ್ನಿಸಬಹುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ.
ಕುಂಭ ರಾಶಿ: ಶತ್ರುಗಳಿಂದ ನಿಮ್ಮ ಚಟುವಟಿಕೆಗಳ ವೀಕ್ಷಣೆ ನಡೆಯಲಿದೆ. ಆತುರದಲ್ಲಿ ಏನಾದರೂ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಪ್ರತ್ಯಕ್ಷವಾಗಿ ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ನೀವು ಅರಿತುಕೊಳ್ಳಬೇಕು. ಕುಟುಂಬದ ಬೆಂಬಲದಿಂದ ಉತ್ತಮ ಫಲಿತಾಂಶ ಸಿಗುತ್ತವೆ. ತಂದೆಯ ಸಲಹೆಯಿಂದ ಹಣದ ಲಾಭವನ್ನು ಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ. ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ಹತ್ತಿರದ ವ್ಯಕ್ತಿಗಳು ಕಾರಣಾಂತರಗಳಿಂದ ದೂರಾಗಬಹುದು. ಸ್ವಂತ ವ್ಯವಹಾರಗಳಿಗೆ ಮಧ್ಯವರ್ತಿಗಳನ್ನು ಬಳಸಿಕೊಳ್ಳಬೇಡಿ. ನಿಮ್ಮ ಮೇಲಿನ ನಂಬಿಕೆಯಿಂದ ಸುಳ್ಳನ್ನೂ ನಂಬುವ ಸಾಧ್ಯತೆ ಇದೆ. ಒತ್ತಡವುಂಟು ಮಾಡುವ ಕೆಲಸಗಳನ್ನು ಕೈಬಿಡಿ. ಸಮಯ ಸಂದರ್ಭಗಳನ್ನು ನೋಡಿಕೊಂಡು ಮಾತನಾಡಿ. ಅಪಹಾಸ್ಯಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆಬಿದೆ. ನಿಮಗೆ ಸಿಗುವ ಸೂಚನೆಗಳನ್ನು ಗಮನಿಸಿಕೊಂಡು ವ್ಯವಹಾರಾದಿಗಳನ್ನು ಮಾಡಿ. ಸ್ನೇಹವು ಬೇರೆಯಾಗಲಿದೆ.
ಮೀನ ರಾಶಿ: ಉದ್ಯೋಗದ ಸ್ಥಾನ ಬದಲಾವಣೆಯಿಂದ ಮಾನಸಿಕ ನೆಮ್ಮದಿ. ಇಂದು ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣದ ಸಂಪಾದನೆಯಾಗಲಿದೆ. ಇದು ನಿಮ್ಮ ಮನಸ್ಸಿಗೆ ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ದ್ವೇಷವನ್ನು ದೂರ ಮಾಡಿಕೊಳ್ಳಲಾಗದು. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ. ಪೋಷಕರ ಸಲಹೆಗಳು ನಿಮ್ಮ ನಿರ್ಧಾರವನ್ನು ಬದಲಿಸುತ್ತಸದೆ. ಸಂಬಂಧಗಳಲ್ಲಿ ಅನುಮಾನಗಳನ್ನು ತೊಡೆದುಹಾಕಿ, ಮನಸ್ಸಿನ ವಿಷಯಗಳನ್ನು ಸ್ಪಷ್ಟವಾಗಿ ಚರ್ಚಿಸುವುದು ಉತ್ತಮ. ಸಂಬಂಧದಲ್ಲಿ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕಿದೆ. ಸಿಟ್ಟನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಆಪ್ತರ ನಡುವಿನ ಸಂಬಂಧವು ಹಾಳಾಗಲಿದೆ. ಸಂಗಾತಿಯ ಆದಾಯವು ಹೆಚ್ಚಾಗಲಿದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಪ್ರಯಾಣ ಮಾಡಲಿರುವಿರಿ. ವಸ್ತುಗಳು ಕಾಣೆಯಾಗಬಹುದು. ಎಲ್ಲವನ್ನೂ ನಿಮ್ಮ ಮೇಲೆ ಹೇರಬಹುದು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ.