ಅಕ್ಟೋಬರ್ 06: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಆಶ್ವಯುಜ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ರೇವತೀ, ಯೋಗ : ಅತಿಗಂಡ, ಕರಣ : ಭದ್ರ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:40 – 09:09, ಗುಳಿಕ ಕಾಲ 13:37 – 15:06, ಯಮಗಂಡ ಕಾಲ 10:38 – 12:08
ಮೇಷ ರಾಶಿ: ಧಾರ್ಮಿಕ ವಿಚಾರದಲ್ಲಿ ಹಣಕಾಸಿನ ಬಗ್ಗೆ ಎಚ್ವರಿಕೆ ಇರಲಿ. ಇಂದಿನ ವ್ಯವಹಾರವನ್ನು ತಾಳ್ಮೆಯಿಂದ ನಿರ್ವಹಿಸಬೇಕು. ಆಸ್ತಿಯ ಬಗ್ಗೆ ಕಾನೂನಾತ್ಮಕವಾಗಿ ಇರಬೇಕಾಗುವುದು. ನಿಮ್ಮ ಮಾತುಗಳೇ ನಿಮಗೆ ತಿರುಗುಬಾಣವಾಗಿ ಬರಬಹುದು. ನೀವು ಇಂದು ವಾಹನಕ್ಕೆ ಸಂಬಂಧಿಸಿದಂತೆ ಹಣವನ್ನು ವ್ಯಯಿಸಬೇಕಾಗಬಹುದು. ನಿಮ್ಮ ಮೇಲೆ ಕೆಟ್ಟ ದೃಷ್ಟಿ ಬೀಳುವ ಸಾಧ್ಯತೆ ಇದೆ. ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿಮ್ಮ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸರಿಯಾದ ದೃಷ್ಟಿಯನ್ನು ಇಟ್ಟುಕೊಳ್ಳುವರಿದ್ದಾರೆ. ಹಲವು ದಿನಗಳ ಅನಂತರ ಕರ್ತವ್ಯಕ್ಕೆ ಹಾಜರಾಗಿ ಮೊದಲಿನ ಸ್ಥಿತಿಗೆ ಎಲ್ಲವನ್ನೂ ತಂದುಕೊಳ್ಳುವಿರಿ. ನಿಮಗೆ ಇಂದು ಬಹಳ ಕಾರ್ಯದ ಒತ್ತಡ ಇದ್ದರೂ ನೀವು ನಿಮ್ಮವರಿಗೆ ಸಮಯವನ್ನು ಕೊಡುವಿರಿ. ಯಾರಿಗೋ ಸಹಕರಿಸಲು ನೀವು ಒದ್ದಾಟ ಮಾಡಬೇಕಾಗುವುದು. ಯಾರ ಸಹಕಾರವನ್ನು ಅತಿಯಾಗಿ ತೆಗದುಕೊಳ್ಳುವುದು ಬೇಡ.
ವೃಷಭ ರಾಶಿ: ನಿಮ್ಮನ್ನು ನೀವು ಅತಿಮಾನುಷರಾಗಿ ಅಂದುಕೊಳ್ಳುವುದು ಬೇಡ. ಉದ್ಯೋಗದ ಅಸ್ಪಷ್ಟ ಮಾಹಿತಿಗಳು ನಿಮ್ಮ ದಿಕ್ಕು ತಪ್ಪಿಸಬಹುದು. ಸಂತೋಷ ಪಡಲು ನೀವು ನಿಮ್ಮದೇ ಮಾರ್ಗವನ್ನು ಕಂಡುಕೊಳ್ಳುವಿರಿ. ನೋವನ್ನು ಸ್ವಲ್ಪ ಕಾಲ ಮರೆಯುವಿರಿ. ಅನವಶ್ಯಕ ವಿಚಾರಕ್ಕೆ ನೀವು ಸಮಯವನ್ನು ಕೊಡುವಿರಿ. ಎಲ್ಲವೂ ಸರಿಯಿದ್ದರೂ ತಂದೆಯಿಂದ ನಿಂದನೆಯನ್ನು ಪಡೆಯಬೇಕಾಗುವುದು. ಆಶೀರ್ವಾದವೆಂದು ಭಾವಿಸಿ. ಹೆಚ್ಚು ಆಯಾಸವಾಗುವ ಕೆಲಸವನ್ನು ನೀವು ಮಾಡುವಿರಿ. ಅವಿವಾಹಿತರಿಗೆ ವಿವಾಹದ ಮಾತುಕತೆ ಬರಲಿದೆ. ಹಿರಿಯರ ಆಸೆಗಳನ್ನು ಪೂರ್ಣ ಮಾಡುವ ಮನಸ್ಸು ಬರಬಹುದು. ತುಂಬ ದಿನದ ಆಸ್ತಿಯ ವಿವಾದವು ಇಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿಯು ಮಧ್ಯಗತಿಯಲ್ಲಿ ಇರಲಿದೆ. ನಿಮ್ಮನ್ನು ಕಂಡು ಅವಮಾನಿಸುವವರಿಗೆ ತಕ್ಕ ಉತ್ತರವನ್ನು ಕೊಡುವಿರಿ. ಆಶ್ರಯ ಕೊಟ್ಟವರನ್ನು ಗೌರವಿಸಿ.
ಮಿಥುನ ರಾಶಿ: ಒತ್ತಡಗಳು ಹಲವಿದ್ದರೂ ಅದನ್ನು ತೋರಿಸದೇ ಇರುವುದು ನಿಮ್ಮ ಸ್ಥಾನದ ಗುಣ. ನಿಮ್ಮ ಕರ್ತವ್ಯದಲ್ಲಿ ಯಾವುದೇ ಲೋಪವನ್ನು ಮಾಡುವುದು ಬೇಡ. ಇನ್ನೊಬ್ಬರ ಮಾತನ್ನು ಪೂರ್ಣವಾಗಿ ನಂಬಿ ನಿಮ್ಮವರನ್ನು ಕಳೆದುಕೊಳ್ಳಲಿದ್ದೀರಿ. ನಿಮಗೆ ಇಂದು ಮಕ್ಕಳ ಕಡೆಯಿಂದ ಸಮಸ್ಯೆಗಳು ಬರುವ ಸಾಧ್ಯತೆ ಇದೆ. ಬೇಸರದಿಂದ ದುಶ್ಚಟಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಸ್ವಾವಲಂಬನೆಯ ಕಡೆಯೇ ನಿಮ್ಮ ಆಲೋಚನೆಗಳು ಇರಲಿವೆ. ನಿಮ್ಮ ಒಳ್ಳೆಯ ಭಾವವು ದುರುಪಯೋಗವಾಗಬಹುದು. ಸಣ್ಣ ಆದಾಯವನ್ನು ನೀವು ಇಂದು ಪಡೆಯಬಹುದು. ಪ್ರವಾಸ ಮಾಡುವ ಮನಸ್ಸಾಗಲಿದೆ. ಲಾಭವಿದೆ ಎಂದು ಗೊತ್ತಿಲ್ಲದ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳುವಿರಿ. ಸಾವಧಾನತೆ ನಿಮಗೆ ವರದಾನವಾಗಿದೆ. ನಿಮ್ಮ ಬಗ್ಗೆ ಅಸೂಯೆ ಬಂದರೆ ಅದಕ್ಕಾಗಿ ಚಿಂತೆ ಬೇಡ. ಉಪಕರಣವನ್ನು ನೀವು ಸದುಪಯೋಗ ಮಾಡಿಕೊಳ್ಳುವಿರಿ. ಸಣ್ಣತನವನ್ನು ಬಿಡಿವುದು ಸೂಕ್ತ. ಯಾರು ಏನೇ ಮಾಡಿದರೂ ನಿಮ್ಮ ನಿರ್ಧಾರ ಬದಲಾಗದು.
ಕರ್ಕಾಟಕ ರಾಶಿ: ಒಮ್ಮೆ ಅಧ್ಯಯನದಿಂದ ದೂರಾದರೆ, ಮತ್ತೆ ಮರಳುವುದು ಸುಲಭವಲ್ಲ. ಹಿರಿಯರ ಮಾತನ್ನು ಧಿಕ್ಕರಿಸಿ ಮುನ್ನಡೆಯುವುದು ಬೇಡ. ಅದೇ ಮನಸ್ಸಿನಲ್ಲಿ ಕೊರೆಯಿತ್ತಲೇ ಇರುವುದು. ನೀವು ಬದಲಿಸಿಕೊಂಡ ಜೀವನಶೈಲಿಯ ಬಗ್ಗೆ ಕೆಲಸವರು ಆಡಿಕೊಳ್ಳಬಹುದು. ದಾಂಪತ್ಯದಲ್ಲಿ ವಿರಸದ ಮನೋಭಾವವು ಮುಂದುವರಿಯಬಹುದು. ಹಾಳಾದ ವಸ್ತುವನ್ನು ದುರಸ್ತಿ ಮಾಡಿಕೊಳ್ಳುವಿರಿ. ಇಂದು ನೀವು ಶುಭ ವಾರ್ತೆಯನ್ನು ನಿರೀಕ್ಷಿಸಬಹುದು. ಇಂದು ನಿಮ್ಮ ಮನಸ್ಸು ಬಹಳ ಸಂತೋಷದಿಂದ ಇರಲಿದೆ. ನಿಮ್ಮ ಸಹಾಯಕ್ಕೆ ಯಾರಾದರೂ ಬರುತ್ತಾರೆ ಎಂದು ಕಯುವುದು ಬೇಡ. ನಿಮ್ಮಷ್ಟಕ್ಕೆ ಕೈಲಾದಷ್ಟು ಮಾಡಿ. ಸಹೋದರಿಯು ನಿಮಗೆ ಧನಸಹಾಯವನ್ನು ಮಾಡುವರು. ಆರೋಗ್ಯದ ಸಮಸ್ಯೆಗಳನ್ನು ಸರಿಯಾದ ವೈದ್ಯರ ಮೂಲಕ ಸರಿಮಾಡಿಕೊಳ್ಳುವುದು ಉತ್ತಮ. ತಮಾಷೆಯ ಮಾತುಗಳಿಂದ ನಿಮಗೆ ಕಷ್ಟವಾದೀತು. ಆದರೆ ದುಂದು ವೆಚ್ಚಗಳನ್ನು ಮಾಡಿಕೊಳ್ಳುವುದು ಬೇಡ. ನಿಮ್ಮ ವರ್ತನೆಯು ಬಹಳ ಅಚ್ಚರಿ ಎನಿಸೀತು. ಅಪರಿಚಿತರ ನಂಬಿ ವ್ಯವಹಾರವನ್ನು ಮಾಡಲು ಯೋಚಿಸುವುದು ಬೇಡ. ವಿವಾದಕ್ಕಾಗಿಯೇ ಮಾತನಾಡುವುದನ್ನು ನಿಲ್ಲಿಸಿ.
ಸಿಂಹ ರಾಶಿ: ಆಲಸ್ಯವನ್ನು ಬಿಡಲು ಕ್ರಿಯಾತ್ಮಕ ಚಟುವಟಿಕೆಗಳನ್ನು ನೀವಾಗಿಯೇ ಜೋಡಿಸಿ. ಇಂದು ನಿಮ್ಮ ಹಿತ್ತಾಳೆ ಕಿವಿಯಿಂದ ಸಂಬಂಧವು ಹಾಳಾಗುವುದು. ಕೆಲಸಗಳಲ್ಲಿ ಹಿನ್ನಡೆಯಾಗಿ ಮೇಲಧಿಕಾರಿಗಳಿಂದ ಸೂಚನೆ ಬರಬಹುದು. ಒರಟು ಮಾತುಗಳಿಂದ ಸುಮ್ಮನಾಗಿ. ಕಛೇರಿಯ ಕೆಲಸದಲ್ಲಿ ವ್ಯತ್ಯಾಸವಾದ ಕಾರಣ ಕಿರಿಕಿರಿಯಿಂದ ಕೋಪ ಉಂಟಾಗಬಹುದು. ನಿಮ್ಮ ಮೇಲೆ ಸಹೋದ್ಯೋಗಿಗಳು ಸಲ್ಲದ ಅಪವಾದವನ್ನು ಮಾಡಿಯಾರು. ಅಕ್ರಮದ ಹಣದ ವ್ಯವಹಾರಕ್ಕೆ ಅಡ್ಡಿ ಬಂದು ಅಲ್ಪ ಹಣವನ್ನು ಕಳೆದುಕೊಳ್ಳಬೇಕಾಗುವುದು. ರಾಜಕೀಯಕ್ಕೆ ಹೋಗಲು ನಿಮಗೆ ಬೆಂಬಲವು ಸಿಗಲಿದೆ. ಅನಿವಾರ್ಯವಾಗಿ ಕಛೇರಿಯ ಕೆಲಸವನ್ನು ಮಾಡಬೇಕಾಗುವುದು. ನೀವೂ ಬಹಳ ಉತ್ಸುಕರಾಗಿರುವಿರಿ. ವ್ಯಾಪಾರವು ನಿಮಗೆ ಲಾಭಾಂಶವನ್ನು ಕಡಿಮೆ ಮಾಡೀತು. ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಆಲೋಚನೆಯನ್ನು ಮಾಡುವಿರಿ. ನಿಮಗೆ ಕುಟುಂಬದ ಬೆಂಬಲವಿದ್ದು, ಧೈರ್ಯವಾಗಿ ಮುನ್ನಡೆಯುವಿರಿ. ಆದಾಯದ ಮೂಲವನ್ನು ನೀವು ಬದಲಿಸಿಕೊಳ್ಳುವಿರಿ.
ಕನ್ಯಾ ರಾಶಿ: ದೇಹದ ಭಾರವು ಅಪಹಾಸ್ಯಕ್ಕೆ ಕಾರಣ. ಹಿತಶತ್ರುಗಳನ್ನು ಆಪ್ತತೆಯಿಂದ ನಿಮ್ಮವರನ್ನಾಗಿ ಮಾಡಿಕೊಳ್ಳುವಿರಿ. ಎಲ್ಲವನ್ನು ನೀವು ಕಲ್ಪಿಸಿಕೊಂಡು ಅನಂತರ ಸಂಕಟಪಡುವಿರಿ. ಆರೋಗ್ಯವನ್ನು ಚೆನ್ನಾಗಿಟ್ಡುಕೊಳ್ಳಲು ವ್ಯಾಯಾಮಗಳನ್ನು ಆರಂಭಿಸಬಹುದು. ವೇಗವಾಗಿ ಸಾಲವನ್ನು ಮುಗಿಸಲು ನೀವು ಪ್ರಯತ್ನಿಸಬೇಕಾದೀತು. ಆಲಸ್ಯದಿಂದ ಹೊರಬಂದು ಆ ಕುರಿತು ಆಲೋಚಿಸಿ. ನಿರ್ಜನ ಪ್ರದೇಶದಲ್ಲಿ ಓಡಾಡುವ ಸ್ಥಿತಿ ಬಂದಿದ್ದು, ಅಭ್ಯಾಸವಿಲ್ಲದ ನಿಮಗೆ ಭಯಾಧಿಕ್ಯ. ಅದೃಷ್ಟವನ್ನು ನಂಬಿ ಕುಳಿತುಕೊಳ್ಳುವುದು ಬೇಡ. ನಿಮ್ಮ ಪ್ರಯತ್ನವೂ ಇರಲಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಂಭವವಿದೆ. ಉದ್ಯೋಗದ ಕಾರಣದಿಂದ ನೀವು ಪ್ರಯಾಣವನ್ನು ಮಾಡಬೇಕಾಗಿಬರಬಹುದು. ತುಂಬಾ ದಿನಗಳಿಂದ ನಡೆಯುತ್ತಿರುವ ಕುಟುಂಬದ ಶೀತಲ ಕಲಹವು ನಿಮಗೆ ಬೇಸರ ತರುತ್ತದೆ. ಇಂದು ನೀವು ಯಾವುದೇ ವೈಯಕ್ತಿಕ ಲಾಭವನ್ನು ನಿರೀಕ್ಷಿಸದೇ ಕೆಲಸವನ್ನು ಮಾಡುವಿರಿ. ಹಿರಿಯರು ನಿಮ್ಮ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು.
ತುಲಾ ರಾಶಿ: ಮನೆಯವರಿಂದ ಕೆಟ್ಟ ನಾರನ್ನು ಸಹಿಸಲಾರಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಭೂಮಿ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯವು ಆಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ದಾಂಪತ್ಯದಲ್ಲಿ ಬಿರುಕು ಬರುವ ಸಾಧ್ಯತೆ ಇದೆ. ಇದು ಮಕ್ಕಳ ಮೇಲೆ ಬೇರೆ ಪರಿಣಾಮವನ್ನು ಬೀರಬಹುದು.
ದೈವದ ಬಗ್ಗೆ ಆಸಕ್ತಿ, ಶ್ರದ್ಧೆ, ಭಕ್ತಿಗಳ ಕೊರತೆ ಇರಲಿದೆ. ಸಂಬಂಧವನ್ನು ಉಳಿಸಿಕೊಳ್ಳಲು ನೀವು ಹಣವನ್ನು ವ್ಯಯಿಸಬೇಕಾಗಬಹುದು. ಹದಗೊಳಿಸಿ ಹೊಡೆದರೆ, ಕಬ್ಬಿಣದ ಸರಳೂ ಬಾಗುವುದು. ಸ್ವ ಉದ್ಯೋಗವನ್ನು ನಡೆಸುತ್ತಿದ್ದರೆ, ಕೆಲಸಕ್ಕೆ ಕೆಲವರನ್ನು ತೆಗೆದುಕೊಳ್ಳುವಿರಿ. ಪಶ್ಚಾತ್ತಾಪವು ನಿಮ್ಮನ್ನು ಶುದ್ಧ ಮಾಡುವುದು. ಗಾಯಕ್ಕೆ ಮನೆಯ ಮದ್ದನ್ನೇ ಮಾಡುವಿರಿ. ಸ್ನೇಹಿತರು ನಿಮ್ಮ ಜೊತೆ ಎಂದಿನಂತೆ ಇಲ್ಲವೆಂದು ಬುದ್ಧಿಯು ಊಹಿಸುತ್ತದೆ. ನೆಮ್ಮದಿ ಬೇಕಾದ ಎಲ್ಲ ಸಂಗತಿಗಳು ಇದ್ದರೂ ಚಿಂತೆ ಕಾಡಿಸಬಹುದು. ಸಕಾರಾತ್ಮಕ ಆಲೋಚನೆ ಇರಲಿ. ಸಮಾರಂಭಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗಿ. ಕಾನೂನಾತ್ಮಕವಾಗಿ ಎದುರಿಸುವ ದಾರಿಯೂ ಇದೆ.
ವೃಶ್ಚಿಕ ರಾಶಿ: ಅತಿಯಾದ ಆಹಾರದ ಅಜೀರ್ಣದಿಂದ ಉದರಬಾಧೆ. ಇಂದು ನೀವು ಬಹಳ ಸೌಮ್ಯತೆಯಿಂದ ವ್ಯವಹರಿಸಬೇಕು. ಉದ್ಯೋಗದಿಂದ ಹೊರಬಂದು ಮನೆಯ ಬಗ್ಗೆ ಗಮನ ಹೆಚ್ಚಾಗುವುದು. ಸಂತರಿಗೆ ಸಮಾನವಾದ ವ್ಯಕ್ತಿಗಳಿಂದ ನಿಮಗೆ ಸಾಂತ್ವನ ಸಿಗಲಿದೆ. ನಿಮಗೆ ಸೌಕರ್ಯಗಳು ಅಧಿಕವಾಗಿ ಬೇಕು ಎನಿಸಬಹುದು. ಉದ್ಯಮದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಸ್ಥಾನಭ್ರಷ್ಟವಾಗುವ ಭಯವು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಕೆಲವು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಇಂದು ಯಾರದ್ದಾದರೂ ಸೆಳೆತಕ್ಕೆ ಬೇಗ ಸಿಕ್ಕಿಬೀಳುವಿರಿ. ಕಳೆದುಕೊಂಡದ್ದರ ಬಗ್ಗೆ ಪಶ್ಚಾತ್ತಾಪ ಮೂಡಬಹುದು. ಯಾರನ್ನೂ ಅಲ್ಪವೆಂದು ಭಾವಿಸಿ, ಅವರ ಬಗ್ಗೆ ಹಗುರಾಗಿ ಮಾತನಾಡುವುದು ಬೇಡ. ವಿವಾಹದ ವಿಳಂಬಕ್ಕೆ ದೈವಜ್ಞರ ಬಳಿ ಹೋಗಿ ವಿಚಾರಿಸಿ. ರಮಣೀಯ ಪ್ರದೇಶದಲ್ಲಿ ನೀವು ಹೆಚ್ಚು ಸಮಯವನ್ನು ಕಳೆಯುವಿರಿ. ಯಾರನ್ನೋ ಅಪರಿಚಿತರನ್ನು ಆಹಾರಕ್ಕೆ ಅವಲಂಬಿಸುವುದು ನಿಮಗೆ ಕಷ್ಟ.
ಧನು ರಾಶಿ: ದ್ರವಾಹರವನ್ನೇ ಅತಿಯಾಗಿ ಸೇವಿಸುವ ಅನಿವಾರ್ಯತೆ ಇದ್ದು, ಅನಂತರ ಕಷ್ಟವಾಗುವುದು. ಸ್ನೇಹಿತರ ಜೊತೆ ನೀವು ಈ ದಿನವನ್ನು ಆನಂದದಿಂದ ಕಳೆಯುವಿರಿ. ಆದಾಯದಲ್ಲಿ ಹಿನ್ನಡೆ ಆಗುವುದು. ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ದಿನ ನಿತ್ಯದ ಜೀವನವು ಏರುಪೇರಾಗಬಹುದು. ಇದು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ವೃತ್ತಿಯ ಬಗ್ಗೆ ಗೌರವ ಇರಲಿ. ನಿಮ್ಮ ವಾದವು ಸರಿ ಇದ್ದರೂ ವ್ಯಕ್ತಪಡಿಸುವ ರೀತಿಯಿಂದ ಅದು ಭಿನ್ನವೆನಿಸಬಹುದು. ಹಳೆಯ ಸ್ನೇಹಿತರಿಂದ ನಿಮಗೆ ಸಹಾಯವು ಸಿಗುವುದು. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಸುದ್ದಿಯು ಬರಬಹುದು. ಸುಮ್ಮನಿರುವ ಶತ್ರುಗಳನ್ನು ಏನನ್ನಾದರೂ ಹೇಳಿ ಎಬ್ಬಿಸಬೇಡಿ. ನಿಮ್ಮ ಕೆಲಸವನ್ನು ಪೂರ್ತಿ ಮಾಡಿಕೊಳ್ಳಲು ಆದ್ಯತೆ ನೀಡಿ. ತಂದೆಯಿಂದ ನಿಮಗೆ ಸಹಕಾರ ಸಿಗಲಿದೆ. ಸಹೋದರರ ಮಾತಿಗೆ ಪೂರ್ಣ ವಿರೋಧ ಬೇಡ. ಆದರೆ ತಿಳಿಸುವ ಕ್ರಮದಲ್ಲಿ ತಿಳಿಸಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು.
ಮಕರ ರಾಶಿ: ಆಹಾರದ ಪಥ್ಯವನ್ನು ಸರಿಯಾಗಿ ಮಾಡಿಕೊಳ್ಳಿ. ನೌಕರರಿಗಾಗಿ ಉದ್ಯಮವನ್ನು ಸಡಿಲಮಾಡುವುದು ಬೇಡ. ನಿರುದ್ಯೋಗದ ಕಾರಣಕ್ಕೆ ಎಲ್ಲರೂ ನಿಮ್ಮನ್ನು ತಮಾಷೆ ಮಾಡಬಹುದು. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಇಬ್ಬರಿಗೂ ಸಂತೋಷವಾಗಲಿದೆ. ನೀವಂದುಕೊಂಡಿದ್ದೇ ಸತ್ಯ ಎನ್ನುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಂಡಿದ್ದರೆ ಅದರಿಂದ ಹೊರಬರುವುದು ಒಳ್ಳೆಯದು. ಯಾವುದೇ ಉಪಕರಣಗಳನ್ನು ಮರುಬಳಕೆಗೆ ಯೋಚಿಸುವಿರಿ. ಇಲ್ಲವಾದರೆ ಎಲ್ಲ ಕಡೆಯೂ ಇದೇ ಸ್ಥಿತಿ ಎದುರಾಗಿ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗಬಹುದು. ಅನ್ಯ ಪ್ರದೇಶದಿಂದ ಮನೆಗೆ ಸಮೀಪವಾಗುವ ಕಡೆ ವೃತ್ತಿಯನ್ನು ನಿಋವಹಿಸುವಿರಿ. ಬಹಳ ಪ್ರಯತ್ನಪೂರ್ವಕವಾಗಿ ಮಾಡಿದ ಕೆಲಸವು ವ್ಯರ್ಥವಾಗುವ ಸಂಭವವಿದೆ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿಯ ಸಂಗತಿಯಾಗಿದೆ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಹಳೆಯ ಬಟ್ಟೆಗಳನ್ನು ನೀವು ಇಂದು ಧರಿಸಬಹುದು.
ಕುಂಭ ರಾಶಿ: ಸಮಾಜಕ್ಕೆ ಉಪಯೋಗವಾಗುವ ಕೊಡುಗೆಯನ್ನು ಸಣ್ಣದಾದರೂ ನೀಡಿ. ಇನ್ನೊಬ್ಬರ ಭಾವನೆಗೆ ಬೆಲೆ ಕೊಟ್ಟಾಗ ನಿಮಗೂ ಅದು ಸಿಗುವುದು. ನಿಮ್ಮ ವೃತ್ತಿಯ ಆದಾಯಕ್ಕಿಂತ ಬೇರೆ ಕಡೆಯಿಂದ ಆದಾಯ ಸಿಗಲಿದೆ. ಮನೋರಂಜನೆಗೆ ಅಧಿಕ ಸಮಯವನ್ನು ನೀವು ನೋಡುವಿರಿ. ನಿಮ್ಮ ಕಠಿಣ ಪರಿಶ್ರಮದಿಂದ ಚಿಂತಿತಕಾರ್ಯವು ಸಾಧ್ಯವಾಗಬಹುದು. ವಿದೇಶದಲ್ಲಿ ಇದ್ದವರಿಗೆ ಕೆಲವು ಆತಂಕದ ಸನ್ನಿವೇಶವು ಬರಬಹುದು. ನಿಮ್ಮ ಯಶಸ್ಸನ್ನು ಸಹಿಸಲಾಗದೇ ನೊಂದುಕೊಳ್ಳುವರು. ಅದನ್ನು ಲೆಕ್ಕಿಸದೇ ಮುಂದುವರಿಯಿರಿ. ಮಾತಿನಿಂದ ಯಾರನ್ನೂ ನೀವು ಹಿಗ್ಗಿಸಲಾಗದು. ದಾಂಪತ್ಯದಲ್ಲಿ ವಿವಾದವಾಗಬಹುದು. ಬೆಳಗಿನ ಉತ್ಸಾಹವು ಸಂಜೆಯವರೆಗೂ ಇರಲಿದೆ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯವನ್ನು ನಷ್ಟ ಮಾಡಿಕೊಳ್ಳುವುದು ಬೇಡ. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನಿಮ್ಮ ಕನಸಿಗೆ ಆಕಾರ ಸಿಕ್ಕಿದ್ದು ಖುಷಿಕೊಡುವುದು. ಸಂಗಾತಿಯ ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಡುವಿರಿ.
ಮೀನ ರಾಶಿ: ಕುಲದೇವರ ಆರಾಧನೆಯಿಂದ ಮಾನಸಿಕ ನೆಮ್ಮದಿ, ಆರ್ಥಿಕತೆಯ ಸುಧಾರಣೆ. ನಿಮ್ಮ ವಿರುದ್ಧದ ಸಂಚನ್ನು ನೀವು ಬಯಲು ಮಾಡುವಿರಿ. ಪರರ ಭಾಗ್ಯವನ್ನು ನೆನೆದು ಕೊರಗುವುದಕ್ಕಿಂತ ನಿಮ್ಮ ಇರುವ ಭಾಗ್ಯವನ್ನು ನೆನೆದು ಸಂತೋಷಪಡಿ. ತಿಳಿವಳಿಕೆ ಇಲ್ಲದವರಿಗೆ ನಿಮ್ಮ ವ್ಯವಹಾರಗಳನ್ನು ಹೇಳಬೇಡಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ನಿಮಗೆ ನಷ್ಟವಾಗಬಹುದು. ಆಪ್ತರಿಗಾಗಿ ನೀವು ರಾಜಕೀಯಕ್ಕೆ ಸೇರುವ ಪ್ರಯತ್ನವನ್ನು ಮಾಡುವಿರಿ. ಇಂದು ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ನೀಡಿದರೆ ಒಳ್ಳೆಯದು. ಅಭ್ಯಾಸಕ್ಕೆ ಏಕಾಂತದ ನಿರೀಕ್ಷೆ. ಆಗಬೇಕಾಗಿರುವ ಕೆಲಸದ ಬಗ್ಗೆ ಗಮನ ಹರಿಸಿ ಮುಗಿಸುವುದು ಒಳ್ಳೆಯದು. ಸಂಬಂಧಗಳನ್ನು ಸರಿಯಾಗಿ ಹಾಳು ಮಾಡಿಕೊಳ್ಳುವುದು ಬೇಡಿ. ಔದ್ಯೋಗಿಕ ಕ್ಷೇತ್ರಕ್ಕೆ ಸೇರಲು ನಿಮ್ಮ ತರಬೇತಿ ಇರುವುದು. ನಿಮ್ಮನ್ನು ನೆಚ್ಚುವವರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ.
Views: 61