ರಾಜ್ಯ ಸರ್ಕಾರದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಅವಧಿ ವಿಸ್ತರಣೆ,ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!

ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ.
ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ ನಿಮ್ಮ ಕುಟುಂಬದ ಕುರಿತಾದ ನಿಖರ ಮಾಹಿತಿ ನೀಡಿ. ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯೋಗದ ಭದ್ರ ಭವಿಷ್ಯಕ್ಕಾಗಿ ಸಹಕರಿಸಿ.

ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಕೂಡಲೇ 8050770004ಕ್ಕೆ ಕರೆ ಮಾಡಿ. ಸಮೀಕ್ಷೆ ಯಶಸ್ವಿಯಾಗಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

“ಸಮೀಕ್ಷೆ ನಡೆಸಿದ ಬಳಿಕ ವಿವರಗಳನ್ನು ಆಯಪ್‌ನಲ್ಲಿ ದಾಖಲಿಸಲು ಇರುವುದರಿಂದ, ಆರಂಭದಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಇಂಟರ್ನೆಟ್‌ ಸಮಸ್ಯೆಯಾಗಿತ್ತು. ಹೀಗಾಗಿ ಸಮೀಕ್ಷೆ ಸ್ವಲ್ಪ ನಿಧಾನಗತಿಯಲ್ಲಿತ್ತು. ಬೆಂಗಳೂರು ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಹೆಚ್ಚಾಗಿ ಬಳಸದೆ, ಸರ್ಕಾರಿ ನೌಕರರಿಗೆ ಸಮೀಕ್ಷೆಯ ಜವಾಬ್ದಾರಿಯನ್ನು ನೀಡಿದ್ದೆವು. ದೀಪಾವಳಿ ಸಂದರ್ಭದಲ್ಲಿ ಅವರಿಗೆ ರಜೆ ಇರುವ ಕಾರಣ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.”

Views: 22

Leave a Reply

Your email address will not be published. Required fields are marked *