“ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ—ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಗರಾಜ್ ಬೇದ್ರೇ ತೀವ್ರ ಟೀಕೆ”

ಚಿತ್ರದುರ್ಗ ನ. 20

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಇದರಿಂದ ರಾಜ್ಯದಲ್ಲಿ ದರೋಡೆ, ಹಲ್ಲೆ, ಕೋಮುಗಲಭೆ ನಡೆಯುತ್ತಿವೆ ಎಂದು ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮೇಲೆ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈಚೆಗೆ ಶಿವಮೊಗ್ಗದಲ್ಲಿ ಹಿಂದೂ ಯುವಕನನ್ನು ಅನ್ಯ ಕೋಮಿನವರು ಅಟ್ಟಾಡಿಸಿ ಮನ ಬಂದಂತೆ ಥಳಿಸಿದ್ದಾರೆ. ದೂರು ನೀಡಲು ಹೋದರೆ ಪೊಲೀಸರು ತೆಗೆದುಕೊಂಡಿಲ್ಲ. ಇಂತಹ ಕೃತ್ಯಗಳು ನಡೆಯುತ್ತಲೇ ಇವೆ. ಈ ಹಿಂದೆ ನಡೆದ ಅನೇಕ ಘಟನೆಗಳಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿದೆ, ಇದು ಸರಿಯಾದ ಕ್ರಮವಲ್ಲ ಎಂದರು.

ಬುಧವಾರ ಬೆಂಗಳೂರಿನ ಫೈ ಓವರ್ ಒಂದರಲ್ಲಿ ಹಗಲು ದರೋಡೆ ನಡೆದು 7 ಕೋಟಿ ರೂ. ವನ್ನು ಹಗಲು ದರೋಡೆ ಮಾಡಿದ್ದಾರೆ. ಇದನ್ನು ನೋಡಿದರೆ ಈ ಸರ್ಕಾರದಲ್ಲಿ ಜನರಿಗೆ ಭದ್ರತೆಯೂ ಇಲ್ಲ ನೆಮ್ಮದಿಯೂ ಇಲ್ಲದಂತಾಗಿದೆ. ವಿಪರ್ಯಾಸವೆಂದರೆ ಇಂತಹ ಘಟನೆಗಳು ನಡೆದಿರುವ ಕುರಿತು ಗೃಹಸಚಿವರಿಗೆ ಮಾಹಿತಿಯೇ ಇರುವುದಿಲ್ಲ ಎಂದ ಅವರು. ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ಗುಂಗಿನಲ್ಲೇ ಸಚಿವರು, ಶಾಸಕರು ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.

Views: 19

Leave a Reply

Your email address will not be published. Required fields are marked *