ನಿತ್ಯ ಭವಿಷ್ಯ 18 ಜನವರಿ 2026: ಇಂದು ಈ ರಾಶಿಯವರ ಆದಾಯದ ಮೂಲ ಹೆಚ್ಚಾಗಲಿದೆ.

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಭಾನುವಾರ ಗುರಿ ಬದಲಾವಣೆ, ಧಾರ್ಮಿಕ ಕಾರ್ಯ, ವಿವಾದ, ಆಪ್ತರ ಭೇಟಿ, ಅನವಶ್ಯಕ ಖರೀದಿ ಇವೆಲ್ಲ ಇಂದಿನ ವಿಶೇಷ.

ಜನವರಿ 18,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಉತ್ತರಾಷಾಢ ಯೋಗ : ಹರ್ಷಣ, ಕರಣ : ನಾಗವಾನ್, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16-50 – 18:16, ಯಮಗಂಡ ಕಾಲ 12:35 – 14:00, ಗುಳಿಕ ಕಾಲ 15:25 – 16:50

ಮೇಷ ರಾಶಿ:

ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡೂ ಸಂತೋಷದಿಂದ ಇರುವುದು ಗೊತ್ತು. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು.

ವೃಷಭ ರಾಶಿ:

ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು‌ ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ಮಾಡುವಿರಿ.

ಮಿಥುನ ರಾಶಿ:

ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದು. ನಿಮ್ಮ ನಿರ್ಧಾರಕ್ಕೆ ಮನೆಯಿಂದ ನಿಮಗೆ ಬೆಂಬಲವಿರುವುದು. ಸೋಲಿಗೆ ದುಃಖ ಪಡುವುದಕ್ಕಿಂತ ಕಾರಣ ಹುಡುಕಿದರೆ ನೆಮ್ಮದಿ ಹೆಚ್ಚು‌. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಉತ್ಸಾಹಕ್ಕೆ ಭಂಗ.

ಕರ್ಕಾಟಕ ರಾಶಿ:

ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ.

ಸಿಂಹ ರಾಶಿ:

ನೀವು ಪೂರ್ವಿಕರ ಆಸ್ತಿಯಿಂದಲೂ ಲಾಭ ಪಡೆಯಬಹುದು. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು. ಇಂದು ನಿಮ್ಮ‌ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ.

ಕನ್ಯಾ ರಾಶಿ:

ಇಂದು ನಿಮ್ಮ ಆದಾಯದ ಮೂಲ ಹೆಚ್ಚಾಗಲಿದೆ. ತಂದೆ ಮತ್ತು ಮಕ್ಕಳ ನಡುವೆ ಪ್ರೀತಿ ಇರುತ್ತದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹೂಡಿಕೆಯನ್ನು ಬೇರೆಯವರ ಹೆಸರಿನಲ್ಲಿ ಮಾಡುವಿರಿ. ನಿಮ್ಮ ಕಾಳಜಿಯನ್ನು ವಹಿಸಿಕೊಂಡವರಿಗೆ ಬೇಸರ ಮಾಡದಂತೆ ನಿಮ್ಮನ್ನು ತೋರಿಸಿಕೊಳ್ಳಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ.

ತುಲಾ ರಾಶಿ:

ಮತ್ತೊಬ್ಬರ ಜೊತೆ ಮಾತನಾಡುವಾಗ ಪದಗಳ ಮೇಲೆ ಎಚ್ಚರ ಇರಲಿ. ಶ್ರಮ ಹಾಗೂ ಆರ್ಥಿಕ ವೆಚ್ಚಗಳು ಹೆಚ್ಚಾಗಬಹುದು. ಆದಾಯ ಮತ್ತು ವೆಚ್ಚಗಳ ನಡುವೆ ತುಲನೆ ಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು. ತಪ್ಪನ್ನು ಒಪ್ಪಿಕೊಳ್ಳದೇ ಅಹಂಕಾರವನ್ನು ತೋರಿಸುವಿರಿ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ.

ವೃಶ್ಚಿಕ ರಾಶಿ:

ವ್ಯಾಪಾರಿಗಳಿಗೆ ಇಂದು ಸುಲಭವಾ ಲಾಭವಾಗಲಿದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ‌ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ‌ ಅಂತಸ್ಸಾಕ್ಷಿಗೆ ಸತ್ಯವನ್ನು ಹೇಳುವ ಧೈರ್ಯ ಬರುವುದು. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ.

ಧನು ರಾಶಿ:

ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ‌ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ‌ ಮನಸ್ಸಿನಿಂದ ಮಾತನಾಡುವಿರಿ.‌ ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ.

ಮಕರ ರಾಶಿ:

ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ನೀವು ಸ್ನೇಹಿತರಿಂದ ಬೆಂಬಲ ಪಡೆಯಬಹುದು. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ.

ಕುಂಭ ರಾಶಿ:

ನಿಮ್ಮ ಪ್ರೀತಿಪಾತ್ರರಿಂದ ನೀವು ಬೆಂಬಲ ಪಡೆಯುತ್ತೀರಿ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ‌ ಜೊತೆ ಸಂಘರ್ಷ ಬೇಡ. ಆತುರದಲ್ಲಿ ವಾಹನ ಚಾಲನೆಯಿಂದ ತೊಂದರೆಯಾದೀತು. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು.

ಮೀನ ರಾಶಿ:

ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದರೆ ಕೆಲಸದ ಸ್ಥಳದಲ್ಲಿ ಬದಲಾವಣೆಯಾಗಬಹುದು. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ.

Views: 117

Leave a Reply

Your email address will not be published. Required fields are marked *