ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ: ಸ್ಥಳದಲ್ಲೇ ಇಬ್ಬರು ಅಪ್ಪಚ್ಚಿ.

ಹಾವೇರಿ, ಜುಲೈ 22: ಬೃಹತ್​ ಬೇವಿನಮರ ಬಿದ್ದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಹಿರೇಕೆರೂರು-ಮಾಸೂರು ಮಾರ್ಗಮಧ್ಯೆ ನಡೆದಿದೆ. ಹಿರೇಕೇರೂರು ತಾಲೂಕು ಯತ್ತಿನಹಳ್ಳಿ ಗ್ರಾಮದ ನಿವಾಸಿ ಹನುಮಂತ (28) ಮತ್ತು ಚಿನ್ನಮುಳಗುಂದ ಗ್ರಾಮದ ನಿವಾಸಿ ಮಂಜುನಾಥ್ (29) ಮೃತರು. ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Source : https://tv9kannada.com/karnataka/haveri-huge-neem-tree-fell-on-bikers-two-death-on-the-spot-karnataka-news-in-kannada-ggs-870409.html

Leave a Reply

Your email address will not be published. Required fields are marked *