Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • Ajinkya Rahane: ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಅಜಿಂಕ್ಯಾ ರಹಾನೆ ಹೇಳಿದ್ದೇನು ನೋಡಿ
Sports

Ajinkya Rahane: ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಅಜಿಂಕ್ಯಾ ರಹಾನೆ ಹೇಳಿದ್ದೇನು ನೋಡಿ

April 24, 2023
samagrasuddi

ಭಾನುವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2023ರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 49 ರನ್​ಗಳ ಅಮೋಘ ಗೆಲುವು ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಸಿಎಸ್​ಕೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 235 ರನ್ಸ್. ಅದರಲ್ಲೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಹಾನೆ ಕೇವಲ 29 ಎಸೆತಗಳಲ್ಲಿ 6 ಫೋರ್, 5 ಸಿಕ್ಸರ್ ಸಿಡಿಸಿ ಅಜೇಯ 71 ರನ್ ಚಚ್ಚಿದರು.ಈ ಅದ್ಭುತ ಪ್ರದರ್ಶನಕ್ಕಾಗಿ ರಹಾನೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು. ವಿಶೇಷ ಎಂದರೆ ಏಳು ಐಪಿಎಲ್ ಸೀಸನ್​ಗಳ ಬಳಿಕ ರಹಾನೆ ಮೊದಲ ಬಾರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.ಈ ಸಂದರ್ಭ ಮಾತನಾಡಿದ ರಹಾನೆ, ನಾನು ಸ್ಪಷ್ಟ ಮನಸ್ಥಿತಿಯನ್ನು ಹೊಂದಿದ್ದೆ. ನೀವು ಕೇಳುವ ವಿಷಯ ಚೆನ್ನಾಗಿದ್ದರೆ, ನಿಮ್ಮ ಮನಸ್ಸು ಸರಿಯಾಗಿದ್ದರೆ ಎಲ್ಲವೂ ಅದ್ಭುತವಾಗಿರುತ್ತದೆ. ನಾನು ಆನಂದಿಸುತ್ತಾ ನನ್ನ ಆಟವನ್ನು ಆಡಿದೆ ಎಂದು ರಹಾನೆ ಹೇಳಿದ್ದಾರೆ.ಈ ವಿಕೆಟ್ ಸ್ವಲ್ಪ ಜಿಗುಟಾಗಿತ್ತು. ಆದರೆ, ಲಯಕಂಡುಕೊಂಡರೆ ರನ್ ಗಳಿಸಲು ಇಲ್ಲಿ ಉತ್ತಮ ಅವಕಾಶವಿದೆ. ನಮ್ಮ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಬಳಿಕ ನಾನು ನನ್ನ ಆಟವನ್ನು ಶುರು ಮಾಡಿದೆ, ಅದೇ ವೇಗವನ್ನು ಕಾಯ್ದುಕೊಳ್ಳುವುದು ನನ್ನ ಗುರಿಯಾಗಿತ್ತು - ಅಜಿಂಕ್ಯಾ ರಹಾನೆ.ನಾನು ನನ್ನ ಎಲ್ಲ ಅರ್ಧಶತಕವನ್ನು ಇಷ್ಟಪಡುತ್ತೇನೆ. ನನಗನಿಸುವ ಪ್ರಕಾರ ನನ್ನ ಅದ್ಭುತ ಎನ್ನುವ ಅರ್ಧಶತಕ ಇನ್ನಷ್ಟೆ ಬರಬೇಕಿದೆ. ಇಲ್ಲಿ ಕಲಿಯಲು ಸಾಕಷ್ಟು ಅವಕಾಶವಿದೆ. ನಾನು ಧೋನಿ ನಾಯಕತ್ವದಡಿಯಲ್ಲಿ ಅನೇಕ ಪಂದ್ಯಗಳನ್ನು ಭಾರತ ಪರ ಆಡಿದ್ದೇನೆ. ಈಗ ಸಿಎಸ್​ಕೆ ತಂಡದ ಪರವಾಗಿಯು ಆಡುತ್ತಿದ್ದೇನೆ ಎಂಬುದು ರಹಾನೆ ಮಾತು.ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ರಹಾನೆ ಅವರ ಅಜೇಯ 71 ರನ್, ಶಿವಂ ದುಬೆ 21 ಎಸೆತಗಳಲ್ಲಿ 50 ಮತ್ತು ಡೆವೊನ್ ಕಾನ್ವೇ 40 ಎಸೆತಗಳಲ್ಲಿ 56 ರನ್​ಗಳನ್ನ ಸಿಡಿಸುವ ಮೂಲಕ ಎದುರಾಳಿಗೆ 236 ರನ್​ಗಳ ಕಠಿಣ ಟಾರ್ಗೆಟ್ ನೀಡಿತು.ಬೃಹತ್​ ಮೊತ್ತ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಜೇಸನ್ ರಾಯ್ 61 ರನ್ ಮತ್ತು ರಿಂಕು ಸಿಂಗ್ ಅಜೇಯ 53ರನ್ ಗಳನ್ನು ಬಾರಿಸಿ ಗೆಲುವಿಗಾಗಿ ಕೊನೆವರೆಗೂ ಹೋರಾಟ ನಡೆಸಿದರಾದರೂ ಸಾಧ್ಯವಾಗಲಿಲ್ಲ.

source https://tv9kannada.com/photo-gallery/cricket-photos/ajinkya-rahane-in-post-match-presentation-he-said-im-just-trying-to-enjoy-my-game-kkr-vs-csk-ipl-2023-vb-au48-562440.html

Post navigation

Virat Kohli: ಆ ಆಟಗಾರ ಬರುತ್ತಿದ್ದಾನೆ: ಪಂದ್ಯ ಮುಗಿದ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ
ವಿಕೆಟ್ ಮುರಿದ ಪ್ರಕರಣದಲ್ಲಿ ಬಿಸಿಸಿಐಗೆ ಎಷ್ಟು ಲಕ್ಷ ನಷ್ಟವಾಯ್ತು ಗೊತ್ತಾ? ಅಂಥಾದ್ದೇನಿರುತ್ತೆ ವಿಕೆಟ್​​​ನಲ್ಲಿ? ಈ ಹಿಂದೆ ಮುರಿದುಬಿದ್ದ ವಿಕೆಟ್​​​​ಗಳತ್ತ ಒಂದು ನೋಟ!

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನರೇನಹಾಳ್ ಗ್ರಾಮದಲ್ಲಿ ಭಾರತೀಯ ಯೋಗ ಶಿಕ್ಷಣ ಬಾಲಗೋಕುಲ ಕಾರ್ಯಕ್ರಮ:
  • “IND vs ENG”: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
  • “Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?
  • “Horoscope Today 06 July”: ಇಂದು ಈ ರಾಶಿಯವರಿಗೆ ಪುಣ್ಯ ಕರ್ಮಗಳನ್ನು ಮಾಡಲು ಅನಿರೀಕ್ಷಿತ ಅವಕಾಶ.
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress