ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು.

ಚಿಕ್ಕೋಡಿ, ನ.12: ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (Sri Allamaprabhu Swamiji) (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಾಸ್ವಾಮೀಜಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದ ಶೋಕಸಾಗರದಲ್ಲಿ ಮುಳುಗಿದೆ.
ಗಡಿ ಭಾಗದಲ್ಲಿ ಕನ್ನಡದ ಮಠ, ಕನ್ನಡದ ಸ್ವಾಮೀಜಿ ಎಂದೇ ಚಿಂಚಣಿ ಶ್ರೀಗಳು ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಕೆಲ ದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಯಿಂದ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.
ಇಂದೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಸಿಕ್ಕಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1