ಚಿತ್ರದುರ್ಗ ತಾಲ್ಲೂಕಿನ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಸೆ. 17 : ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘ(ರಿ)ದವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು
ಹಮ್ಮಿಕೊಂಡಿರುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದವತಿಯಿಂದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವು
ಸೆ.22 ರಂದು ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಪ್ರತಿಶತ
80%ಕ್ಕೂ ಹೆಚ್ಚಿನ ಅಂಕ ಪಡೆದ ಮಕ್ಕಳಿಂದ ಚಿತ್ರದುರ್ಗ ತಾಲ್ಲೂಕಿನ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರ
ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 20 ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ತಮ್ಮ ಸ್ವ-ವಿವರದೊಂದಿಗೆ ಅಂಕಪಟ್ಟಿ ಮತ್ತು
ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ, 2 ಪಾಸ್‍ಪೋರ್ಟ್ ಸೈಜ್ ಪೋಟೊದೊಂದಿಗೆ ಅರ್ಜಿಯನ್ನು ಸಲ್ಲಿಸಲು
ಜಿಲ್ಲಾಧ್ಯಕ್ಷರಾದ ಡಿ.ಟಿ.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿಎಂ. ತಿಪ್ಪೇಸ್ವಾಮಿ ಪತ್ರಿಕಾ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ,: 9535561879 ತಾ, ಕಾರ್ಯದರ್ಶಿ ಟಿ.ಶ್ರೀನಿವಾಸಮೂರ್ತಿ,:
9900915346 ಅಧ್ಯಕ್ಷರು,ಬಿ.ಹೆಚ್.ಶಿವಪ್ರಕಾಶ್ 9535384938 ಸಹ ಕಾರ್ಯದರ್ಶಿ,ಸಿದ್ದೇಶ್ವರ್ ಕೆ.9972446430 ,ದೇವರಾಜ್ ಹೆಚ್.
9663159396 ಇವರನ್ನು ಮೊಬೈಲ್ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ

Leave a Reply

Your email address will not be published. Required fields are marked *