ಚಿತ್ರದುರ್ಗ : ಕೀರ್ತಿ ಆಸ್ಪತ್ರೆಯಲ್ಲಿ ಬಸವೇಶ್ವರರ ಪ್ರತಿಮೆ ಅನಾವರಣ

ಚಿತ್ರದುರ್ಗ, (ಮೇ.24) : ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ ಅವರ ಕಾಯಕವೇ ಕೈಲಾಸ ತತ್ವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಡಾ. ಮಲ್ಲಿಕಾರ್ಜುನ ಕೀರ್ತಿ ಹೇಳಿದರು.

ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ 12 ನೇ ಶತಮಾನದ ಕವಿ ಬಸವಣ್ಣನವರ ಪ್ರತಿಮೆಯನ್ನು ಆಸ್ಪತ್ರೆಯಲ್ಲಿ ಅವರು ಬಸವಣ್ಣನವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಆಸ್ಪತ್ರೆಯಲ್ಲಿ ಇಂದು ಹಬ್ಬದ ವಾತಾವರಣ ಮನೆ ಮಾಡಿತ್ತು. ಆಡಳಿತ ಮಂಡಳಿಯವರು, ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರತಿಮೆ ಅನಾವರದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಮಾಡಿದರು.

ಈ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಕೀರ್ತಿ ಅವರ ಕುಟುಂಬ ಸೇರಿದಂತೆ, ಬಿಜೆಪಿ ಮುಖಂಡ ಅನಿತ್ ಕುಮಾರ್ ಮತ್ತವರ ಕುಟುಂಬವರ್ಗದವರು, ಬಸವೇಶ್ವರ ಆಸ್ಪತ್ರೆಯ ಡಾ.ಪಾಲಾಕ್ಷ, ಡಾ.ಗೀತಾ, ಡಾ. ಅರುಣಾ ಸೇರಿದಂತೆ ಅಪಾರ ಸಂಖ್ಯೆಯ ವೈದ್ಯವೃಂದದವರು ಹಾಜರಿದ್ದರು.

The post ಚಿತ್ರದುರ್ಗ : ಕೀರ್ತಿ ಆಸ್ಪತ್ರೆಯಲ್ಲಿ ಬಸವೇಶ್ವರರ ಪ್ರತಿಮೆ ಅನಾವರಣ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/zeUAi2I
via IFTTT

Leave a Reply

Your email address will not be published. Required fields are marked *