ಚಿತ್ರದುರ್ಗ,ಆ.20
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ದ್ವೀತಿಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಯುವತಿಯನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆಗೆ
ಸಂಬಂಧಪಟ್ಟಂತೆ ಪೂರ್ಣವಾದ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಉಗ್ರವಾದ ಶಿಕ್ಷೆಯನ್ನು ನೀಡಬೇಕು ಇಲ್ಲವಾದಲ್ಲಿ
ಬಿಜೆಪಿವತಿಯಿಂದ ಹೋರಾಟವನ್ನು ನಡೆಸಲಾಗುವುದೆಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಶ್ಯಾಮಲಾ ಶಿವಪ್ರಕಾಶ
ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮಜ್ಯೋತಿ ತಿಪ್ಪೇಸ್ವಾಮಿ ಅವರ
ಮಗಳು ವರ್ಷಿತಾ ಅವರು ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ದ್ವೀತಿಯ ವ್ಯಾಸಾಂಗ ಮಾಡುತ್ತಿದ್ದು, ನಗರದಲ್ಲಿನ
ಎಸ್ಸಿ,ಎಸ್ಟಿ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ತಂಗಿದ್ದರು. ಕಳೆದ ಆಗಸ್ಟ್ 14 ರಂದು ಊರಿಗೆ ಹೋಗುವ ಸಂಬಂಧ ಹಾಸ್ಟೆಲ್
ವಾರ್ಡನ್ ಗೆ ರಜೆ ಕೋರಿ ಲಿವ್ ಲೆಟರ್ ನೀಡಿ ಹೋಗಿದ್ದ ವರ್ಷಿತಾ ಗೋನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರ ಬಳಿ
ಬೆಂಕಿಯಿಂದ ಅರೆಬೆಂದ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂಥ ಮಳೆಗಾಲದಲ್ಲೂ ವಿದ್ಯಾರ್ಥಿನಿಯ ದೇಹ ಸುಟ್ಟು
ಹಾಕಿದ್ದಾರೆ. ಇದೊಂದು ಪೂರ್ವನಿಯೋಜಿತ ಕೃತ್ಯ ಎಂದೆನಿಸುತ್ತದೆ. ಪೊಲೀಸರು ಪ್ರಕರಣ ಬೇಧಿಸಿ ಆರೋಪಿಗಳನ್ನು ಪತ್ತೆ
ಹಚ್ಚಬೇಕು, ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಸೇರಿದಂತೆ ನರಹತ್ಯೆ ಹಾಗೂ ಕಾನೂನು
ಸುವ್ಯವಸ್ಥೆ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷ ಏಳು ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 43,053
ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವುದು ಸರಿಯಷ್ಟೇಈ ದೌರ್ಜನ್ಯ ಪ್ರಕರಣಗಳಲ್ಲಿ
ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಪೆÇೀಕ್ಸೋ ಕಾಯ್ದೆ ಸೇರಿದಂತೆ ಅತ್ಯಾಚಾರ ಪ್ರಕರಣಗಳು ಕೂಡ ಇಡೀ
ನಾಗರಿಕ ಸಮಾಜವೇ ತಲೆತಗ್ಗಿಸುವಷ್ಟರ ಮಟ್ಟಿಗೆ ಹೆಚ್ಚಿಗೆ ಇದೆ, ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು
ಯಾರೆಂಬುದು ತಿಳಿದು ಬಂದಿಲ್ಲ. ಆದರೆ ಕಾಲೇಜು ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ಬೇರೆ ಬೇರೆ
ಕಾರಣಕ್ಕೆ ಸರಣಿ ಜೀವ ಕಳೆದುಕೊಳ್ಳುತ್ತಿರುವುದು, ವಿದ್ಯಾರ್ಥಿನಿಯ ಆತ್ಮಹತ್ಯೆ ಸೇರಿದಂತೆ ಹಲವಾರು ಪ್ರಕರಣಗಳು ಜರುಗಿದರು
ಸಹ ಘನ ಸರ್ಕಾರದ ಕಣ್ಣು ತೆರೆಯದಿರುವುದು ದುರಾದೃಷ್ಟವೇ ಸರಿ ಎಂದು ದೂರಿದ್ದಾರೆ.
ಇತ್ತೀಚಿನ ದಿನಮಾನದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಕಾಮುಕರು ಅತ್ಯಾಚಾರ ಮಾಡಿ ಸಾಕ್ಷಿ
ಸಿಗಬಾರದೆಂದು ಆವರು ಸಾಯಿಸುತ್ತಿದ್ದಾರೆ, ಇದರ ಬಗ್ಗೆ ಪೋಲಿಸ್ ಇಲಾಖೆ ಎಚ್ಚತ್ತೆಕೊಳ್ಳಬೇಕಿದೆ. ಚಿತ್ರದುರ್ಗದ ಈ ಘಟನೆಯನ್ನು
ಸರ್ಕಾರ ಹಾಗೂ ಪೆÇಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಿನ ಅನ್ವಯ ಸೂಕ್ತ ಕಠಿಣ ಶಿಕ್ಷೆಗೆ
ಗುರಿಪಡಿಸಬೇಕು ಎಂದು ಸರ್ಕಾರವನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಶ್ಯಾಮಲಾ ಶಿವಪ್ರಕಾಶ ಆಗ್ರಹಿಸಿದ್ದಾರೆ.
Views: 110