ಎಲ್ಲವನ್ನೂ ಸರಿದೂಗಿಸಿದ, ಆತ್ಮ ನಿರ್ಭರ ಭಾರತಕ್ಕೆ ಒತ್ತು ನೀಡಿದ ಬಜೆಟ್ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಪ್ರತಿಕ್ರಿಯೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 01 : ಬಡವರು, ಮಧ್ಯಮ ವರ್ಗದವರಿಗೆ ಅತಿ ಹೆಚ್ಚಿನ ಅನುಕೂಲತೆಗಳನ್ನು ಮಾಡಿಕೊಟ್ಟಿರುವ ಈ ಬಜೆಟ್ ರಾಷ್ಟ್ರದ ಜನತೆಗೆ ಖುಷಿ ತಂದಿದೆ ಎಂದು ಭಾರತೀಯ ಜನತಾ ಪಾರ್ಟಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಎ.ಮುರಳಿ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಬಜೆಟ್ 2025 ಮಂಡನೆ ಮಾಡಿದ ಅರ್ಥ ಸಚಿವೆ ನಿರ್ಮಲ ಸೀತರಾಮನ್‍ರವರ ಮಂಡಿಸಿದ ಆಯ ವ್ಯಯದ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಪರಿಶಿಷ್ಟ ಜಾತಿ ವರ್ಗಗಳಿಗೆ, ಕಾರ್ಖಾನೆ, ಸ್ಟಾರ್ಟಪ್‍ಗಳನ್ನು ಮಾಡುವವರಿಗೆ 20,000 ಕೋಟಿ ರೂ. ಸಾಲವಾಗಿ ಕೊಡುವ, ಅನುದಾನ ಕೊಡುವ ಪ್ರಸ್ತಾವ ಸ್ವಾಗತಾರ್ಹ. ಹಿಂದೆಂದೂ ಇಲ್ಲದಂತಹ ಈ ಪ್ರಸ್ತಾವದಿಂದ ಪರಿಶಿಷ್ಟ ಜಾತಿ ವರ್ಗದವರಿಗೆ, ವಿಶೇಷವಾಗಿ ಯುವಕರಿಗೆ ಬಹಳ ಅನುಕೂಲ ಆಗಿದೆ ಎಂದು ಹೇಳಿದರು.

ನವದೆಹಲಿಯಲ್ಲಿ ಕೇಂದ್ರ ಬಜೆಟ್ 2025 ಮಂಡನೆ ಮಾಡಿದ ಅರ್ಥ ಸಚಿವೆ ನಿರ್ಮಲ ಸೀತರಾಮನ್‍ರವರ ಮಂಡಿಸಿದ ಆಯ್ಯವ್ಯಯದ
ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಭಾರತವನ್ನು ವಿಶ್ವದ ನಾಲ್ಕನೇ ಅತಿದೊಡ್ಡ ಅರ್ಥವ್ಯವಸ್ಥೆಯಾಗಿ ರೂಪಿಸಲು ಅಗತ್ಯವಿರುವ
ಕ್ರಮಗಳನ್ನು ಬಜೆಟ್‍ನಲ್ಲಿ ಕೈಗೊಂಡಿದ್ದಾರೆ ಅಂಗನವಾಡಿ ಕಾರ್ಯಕರ್ತರನ್ನು ಗಮನದಲ್ಲಿರಿಸಿ ಆ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ
ಕೊಡುವ ಒತ್ತು ಕೊಟ್ಟಿದೆ. ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡಿ, ಐಐಟಿ ಓದುವವರಿಗೆ 6 ಸಾವಿರ ಸೀಟುಗಳನ್ನು ಹಾಗೂ
10 ಸಾವಿರ ಮೆಡಿಕಲ್ ಸೀಟುಗಳನ್ನು ಹೆಚ್ಚಳ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶೇಷ ಎಂದರೆ ಮಧ್ಯಮ ವರ್ಗದ- ವೇತನದಾರರಿಗೆ ಮೊದಲು 7 ಲಕ್ಷಕ್ಕೆ ತೆರಿಗೆ ಕಟ್ಟಬೇಕಿತ್ತು. ಈಗ 12 ಲಕ್ಷದ ವರೆಗೆ ಯಾರಿಗೂ
ತೆರಿಗೆ ಇರುವುದಿಲ್ಲ. ಪತ್ರಕರ್ತರೂ ಸೇರಿದಂತೆ ತಿಂಗಳಿಗೆ 1 ಲಕ್ಷದವರೆಗೆ ಸಂಬಳ ಪಡೆಯು ವವರಿಗೆ ವಿನಾಯಿತಿ ಸಿಕ್ಕಿದೆ. 18 ಲಕ್ಷ
ಆದಾಯ ಇರುವವರಿಗೆ 70,000 ರೂ ಮಾತ್ರ ತೆರಿಗೆ. 25 ಲಕ್ಷದ ವರೆಗೆ ವೇತನದವರಿಗೆ 1.20 ಲಕ್ಷ ತೆರಿಗೆ ಬರುತ್ತದೆ. ಎಲ್ಲರನ್ನೂ
ಸರಿದೂಗಿಸಿಕೊಂಡು ಆತ್ಮನಿರ್ಭರ ಭಾರತವನ್ನು ಮಾಡುವಂಥ ಮಹಾನ್ ಕಾರ್ಯಕ್ಕೆ ಪ್ರಧಾನಿ ಮೋದಿ ಅವರ ಸರಕಾರ ಈ
ಬಜೆಟ್‍ನಲ್ಲಿ ಒತ್ತು ನೀಡಿದೆ. ವಿಕಸಿತ ಭಾರತವಾಗಿ, 4ನೇ ಅತಿದೊಡ್ಡ ಆರ್ಥಿಕತೆ ಆಗಿ ಬೆಳೆಯುವುದಕ್ಕೆ ವಿತ್ತ ಸಚಿವೆ ಪರಿಪೂರ್ಣ ಶ್ರಮ
ಹಾಕಿದ್ದಾರೆ ಎಂದು ಮುರಳಿ ನುಡಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತಮ ಆಯವ್ಯಯ ಮಂಡಿಸಿದ್ದಾರೆ. ಆದರೂ ಕಾಂಗ್ರೆಸ್‍ನವರು ಟೀಕೆ ಮಾಡ್ತಾರೆ.
ಸಿದ್ದರಾಮಯ್ಯನವರೇ, ನಿಮ್ಮ ವ್ಯಂಗ್ಯವನ್ನು ಬಿಟ್ಟುಬಿಡಿ. ಇದು ನೀವು ಮಾಡುವ ಬಜೆಟ್‍ನಂತಲ್ಲ. ಇದು ದೇಶದ ಸರ್ವಾಂಗೀಣ

ಅಭಿವೃದ್ಧಿಗೆ ಕೈಗನ್ನಡಿಯಾಗಿರುವ ಬಜೆಟ್ ಇದಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಸ್ಟಾರ್ಟಪ್ ಸೆಂಟರ್‍ಗಳನ್ನು ತೆರೆಯಲಾಗಿದೆ.
ಇದುವರೆಗೂ ಅಂತಹ ವ್ಯವಸ್ಥೆ ಇರಲಿಲ್ಲ. ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *