ಉಜ್ವಲ ಯೋಜನೆಯಡಿ ‘LPG ಸಿಲಿಂಡರ್ ಸಬ್ಸಿಡಿ’ ಒಂದು ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ.

ನವದೆಹಲಿ : ಮಾರ್ಚ್ 7 ರಂದು ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಪ್ರತಿ ಎಲ್ಪಿಜಿ ಸಿಲಿಂಡರ್’ಗೆ 300 ರೂ.ಗಳ ಸಬ್ಸಿಡಿಯನ್ನು ಮಾರ್ಚ್ 31, 2025 ರವರೆಗೆ ಒಂದು ವರ್ಷ ವಿಸ್ತರಿಸಿದೆ. ಅಕ್ಟೋಬರ್ನಲ್ಲಿ, ಸರ್ಕಾರವು ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನ ಪ್ರತಿ ಎಲ್ಪಿಜಿ ಸಿಲಿಂಡರ್’ಗೆ 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಿತ್ತು.

ಇನ್ನು ಇದರ ಜೊತೆಗೆ ಹೋಳಿ ಹಬ್ಬಕ್ಕೂ ಮುನ್ನ ಮೋದಿ ಸರ್ಕಾರ ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇಕಡಾ 46 ರಿಂದ 50 ಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದ್ರಂತೆ, ತುಟ್ಟಿಭತ್ಯೆಯನ್ನ ಜನವರಿ 1 ರಿಂದ ಜೂನ್ 30, 2024 ರವರೆಗೆ ಹೆಚ್ಚಿಸಲಾಗಿದೆ.

ಮಾರ್ಚ್ 7, 2024 ರ ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ತುಟ್ಟಿಭತ್ಯೆಯನ್ನ ಶೇಕಡಾ 46 ರಿಂದ 50ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 49 ಲಕ್ಷ ಕೇಂದ್ರ ನೌಕರರು ಮತ್ತು ಸುಮಾರು 68 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Views: 0

Leave a Reply

Your email address will not be published. Required fields are marked *