ಮಾಜಿ ಸಚಿವ ವೆಂಕಟರಮಣಪ್ಪರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿ.

ಚಿತ್ರದುರ್ಗ ಮೇ. 30

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (85) ಅವರು ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಮೃತರ ಅಂತ್ಯಕ್ರಿಯೆಯು ಇಂದು (ಶನಿವಾರ) ಮಧ್ಯಾಹ್ನ 12 ಗಂಟೆಯ ನಂತರ ಅವರ ಸ್ವಗ್ರಾಮವಾದ ಹನುಮಂತನಹಳ್ಳಿಯ ತೋಟದಲ್ಲಿ ಭೋವಿ ಸಮುದಾಯದ ಧಾರ್ಮಿಕ ಸಂಪ್ರದಾಯದಂತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ಪ್ರಕ್ರಿಯೆಗಳು ನಡೆದವು.

ಮಾಜಿ ಸಚಿವ ವೆಂಕಟರಮಣಪ್ಪರವರ ಅಂತ್ಯಸಂಸ್ಕಾರದಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರೊಂದಿಗೆ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಜಗದ್ಗುರು ಕುಂಚಟಿಗ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ವಾಲ್ಮೀಕಿಗುರುಪೀಠದ ಜಗದ್ಗುರು ಶ್ರೀವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಶ್ರೀ ಯಾದವ ಮಹಾಸಂಸ್ಥಾನ (ಗೊಲ್ಲರ) ಗುರುಪೀಠದ ಜಗದ್ಗುರು ಶ್ರೀ ಕೃಷ್ಣಯಾದವ ಮಹಾಸ್ವಾಮಿಗಳು, ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಶ್ರೀ ಕುಂಬಾರ ಗುಂಡಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವ ಕುಂಬಾರಗುಂಡಯ್ಯಾ ಮಹಾಸ್ವಾಮಿಗಳು, ಶ್ರೀ ಹಡಪದಗುರುಪೀಠದ ಜಗದ್ಗುರು ಶ್ರೀ ಅನ್ನಧಾನಿ ಭಾರತೀ ಅಪ್ಪಣ್ಣ ಮಹಾಸ್ವಾಮಿಗಳು, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಹೆಳವ ಗುರುಪೀಠದ ಶ್ರೀ ಬಸವ ಬೃಂಗೇಶ್ವರ ಮಹಾಸ್ವಾಮಿಗಳು ಅಥಣಿಯ ಶಿವಬಸವ ಸ್ವಾಮೀಜಿ ಹಾಗೂ 30ಕ್ಕಿಂತ ಹೆಚ್ಚು ಸ್ವಾಮಿಗಳು ಅಂತಿಮ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *