
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 04: ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ದಾಳಿ, ಹತ್ಯೆ, ಲೂಟಿ, ಆಸ್ತಿ ಹಾನಿ ಹಾಗೂ ಮಹಿಳೆಯರ ಮೇಲಿನ ಅಮಾನವೀಯ ದೌರ್ಜನ್ಯಗಳನ್ನು ನಡೆಸುತ್ತಿರುವುದು ಅತ್ಯಂತ ಚಿಂತಾಜನಕ ಸಂಗತಿ. ಇಂತಹ ಹೇಯಕೃತ್ಯವನ್ನು ಹಿಂದು ಹಿತರಕ್ಷಣಾ ಸಮಿತಿ, ಚಿತ್ರದುರ್ಗ ಸಂಪೂರ್ಣವಾಗಿ ಖಂಡಿಸುತ್ತದೆ.
ಇದರ ಅಂಗವಾಗಿ ನಗರದ ಆನೆಬಾಗಿಲ ಬಳಿಯಿಂದ ಜಲ್ಲಾಧಿಕಾರಿಗಳ ಕಚೇರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ
ಹಿಂದು ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ
ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅದರ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಶಿವಮೊಗ್ಗದ ಪರಿವಾದ ಪ್ರಮುಖರಾದ ಹಿರಿಯರಾದ ಪಟ್ಟಾಭಿಜೀಯವರು, ನಮ್ಮ ಈ ಸಭೆ ಯಾವ ಸರ್ಕಾರ, ರಾಜಕೀಯ ಪಕ್ಷದ, ಮುಸ್ಲಿಂರವರ ವಿರುದ್ದ ಅಲ್ಲ ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ನಡೆಯುತ್ತಿರುವ
ಸಭೆಯಾಗಿದೆ. ಇದಕ್ಕೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳುವ ಜಾಗೃತಿಯನ್ನು ಸಭೆಯಾಗಿದೆ. ಇಂದಿನ ದಿನಮಾನದಲ್ಲಿ ಪ್ರಪಂಚವೇ ಸಣ್ಣ ಕುಟುಂಬವಾಗಿದೆ. ಆದ್ದರಿಂದ ಇಲ್ಲಿನ ನಡೆಯುವ ಪ್ರತಿಭಟನಾ ಸಭೆಯನ್ನು ನಡೆಸುವುದರ ಮೂಲಕ ಅಲ್ಲಿನ ಹಿಂದುಗಳಿಗೆ ಧೈರ್ಯವನ್ನು ತಂಬುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.
ವರ್ತಮಾನದ ಬಾಂಗ್ಲಾದೇಶದ ಸರ್ಕಾರ ಮತ್ತು ಅನ್ಯ ಸರ್ಕಾರಿ ಸುರಕ್ಷಾ ಸಂಸ್ಥೆಗಳು ಇದನ್ನು ನಿಲ್ಲಿಸುವ ಬದಲು ಕೇವಲ
ಮೂಕಪ್ರೇಕ್ಷಕರಾಗಿದ್ದಾರೆ. ಬಾಂಗ್ಲಾದೇಶದ ಹಿಂದೂಗಳ ವಿರುದ್ಧ ಬಲವಂತವಾಗಿ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳು ತಮ್ಮ
ಸ್ವರಕ್ಷಣೆಗಾಗಿ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಎತ್ತಿದ್ದ ಧ್ವನಿಯನ್ನು ಹತ್ತಿಕ್ಕುವ ಮತ್ತು ಅವರ ಮೇಲೆ ಅನ್ಯಾಯ ಹಾಗೂ
ಅತ್ಯಾಚಾರದಂತಹ ದುಷ್ಕೃತ್ಯಗಳನ್ನು ಎಸಗುವ ಹೊಸ ಯುಗವು ಹೊರಹೊಮ್ಮುತ್ತಿರುವಂತೆ ತೋರುತ್ತಿದೆ.ಹಾಗೆಯೇ ಇಂತಹ ಘಟನೆಗಳ
ವಿರುದ್ಧ ಹಿಂದುಗಳ ಪರ ಶಾಂತಿಯುತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಇಸ್ಕಾನ್ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸರನ್ನು
ಬಾಂಗ್ಲಾದೇಶದ ಸರಕಾರ ಬಂಧಿಸಿ ಸೆರೆಮನೆಗೆ ಕಳುಹಿಸಿರುವುದು ಅನ್ಯಾಯಪೂರ್ಣವಾದದ್ದು ಎಂದರು.
ಹಿಂದು ಹಿತರಕ್ಷಣಾ ಸಮಿತಿಯು ಬಾಂಗ್ಲಾದೇಶ ಸರ್ಕಾರವನ್ನು ಆಗ್ರಹಪಡಿಸುವುದೇನೆಂದರೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ
ದೌರ್ಜನ್ಯಗಳು ತಕ್ಷಣವೇ ನಿಲ್ಲುವುದನ್ನು ಅವರು ಖಚಿತಪಡಿಸಬೇಕು ಹಾಗೂ ಇಸ್ಕಾನ್ನ ಚಿನ್ಮಯ್ ಕೃಷ್ಣದಾಸ್ ಅವರನ್ನು ಸೆರೆವಾಸದಿಂದ
ಮುಕ್ತಗೊಳಿಸಬೇಕು. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರೆ ಎಲ್ಲಾ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ತಡೆಯುವ ತನ್ನ
ಪ್ರಯತ್ನವನ್ನು ಸರ್ಕಾರ ಸಾಧ್ಯವಾದಷ್ಟು ಮುಂದುವರಿಸಬೇಕು. ಹಾಗೂ ಅದಕ್ಕೆ ಪೂರಕವಾಗಿ ವೈಶ್ವಿಕ ಅಭಿಮತವನ್ನು ರಚಿಸುವ ಆವಶ್ಯಕ
ಹೆಜ್ಜೆಯನ್ನು ಅತೀ ಶೀಘ್ರದಲ್ಲಿ ಇಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಮಹತ್ವಪೂರ್ಣ ಸಮಯದಲ್ಲಿ ಭಾರತ ಮತ್ತು ವೈಶ್ವಿಕ ಸಮುದಾಯ ಹಾಗೂ ಸಂಸ್ಥೆಗಳು ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೆ ಒಳಗಾದವರ
ಜೊತೆ ನಿಂತು ಅವರಿಗೆ ನಾವು ನಮ್ಮ ಬೆಂಬಲವನ್ನು ವ್ಯಕ್ತಪಡಿಸಬೇಕು ಮತ್ತು ಇದಕ್ಕಾಗಿ ನಮ್ಮ ನಮ್ಮ ಸರ್ಕಾರಗಳನ್ನು ಸಾಧ್ಯವಿರುವ
ಎಲ್ಲ ಪ್ರಯತ್ನಗಳ ಮೂಲಕ ಒತ್ತಾಯಿಸಬೇಕು, ಇದು ವಿಶ್ವ ಶಾಂತಿ ಮತ್ತು ಸಹೋದರತ್ವಕ್ಕೆ ಅವಶ್ಯಕವಾಗಿದೆ ಎಂದು ಹಿಂದು ಹಿತರಕ್ಷಣಾ
ಸಮಿತಿ ಬಯಸುತ್ತದೆ ಎಂದರು.
ಮಾದಾರ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳು ಮಾತನಾಡಿ, ಭಾರತೀಯರಾದ ನಾವುಗಳು ನಮ್ಮಲ್ಲಿ ಎಲ್ಲರನ್ನು ಒಂದು
ಗೂಡಿಸುತ್ತೇವೆ ಆದರೆ ಬೇರೆ ರಾಷ್ಟ್ರಗಳು ನಮ್ಮ ಮೇಲೆ ಹಲ್ಲೆಯನ್ನು ಮಾಡುವ ಕಾರ್ಯವನ್ನು ಮಾಡುತ್ತಿರುವುದು ಖಂಡನೀಯ, ಬೇರೆ
ರಾಷ್ಟ್ರಗಳಿಂದ ನಮ್ಮಲ್ಲಿ ಬಂದವರಿಗೆ ಸಹಾಯವನ್ನು ಮಾಡುತ್ತೇವೆ ಆದರೆ ಬೇರೆ ರಾಷ್ಟ್ರಗಳಲ್ಲಿ ಇರುವ ನಮ್ಮ ಹಿಂದೂಗಳ ಮೇಲೆ ಈ
ರೀತಿಯಾದ ಕೃತ್ಯವನ್ನು ನಡೆಸುವುದು ಅಂತಕಕ್ಕೆ ಈಡು ಮಾಡಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆಯನ್ನು ವಹಿಸುವುದರ
ಮೂಲಕ ಬಾಂಗ್ಲಾ ದೇಶದಲ್ಲಿನ ಹಿಂದುಗಳಿಗೆ ರಕ್ಷಣೆ ಸವೆರ್Àಯನ್ನು ಮಾಡುವ ಕಾರ್ಯವನ್ನು ಮಾಡಬೇಕಿದೆ ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಬಿಜೆಪಿ
ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ಕುಮಾರ್, ಸುರೇಶ್ ಸಿದ್ದಾಪುರ, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ
ಸೌಭಾಗ್ಯ ಬಸವರಾಜನ್, ಬಸಮ್ಮ, ವಕ್ತಾರ ನಾಗರಾಜ್ ಬೇದ್ರೇ, ಛಲವಾದಿ ತಿಪ್ಪೇಸ್ವಾಮಿ, ರಾಜ್ಯ ರೈತ ಮೋರ್ಚಾದ ಪ್ರಧಾನ
ಕಾರ್ಯದರ್ಶಿ ಮಲ್ಲಿಕಾರ್ಜನ್, ಚಂದ್ರಶೇಖರ್, ಸೇರಿದಂತೆ ಇತರರು ಭಾಗವಹಿಸಿದ್ದರು.