ಚಿತ್ರದುರ್ಗ ಡಿಸಿಸಿ ಬ್ಯಾಂಕ್‍ಗೆ ಅಧ್ಯಕ್ಷರಾದ ಸಚಿವ ಡಿ. ಸುಧಾಕರ್

ಚಿತ್ರದುರ್ಗ ಸೆ. 23 ಚಿತ್ರದುರ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‍ನ ನೂತನ ಅಧ್ಯಕ್ಷಾಗಿ ಸಚಿವ ಡಿ. ಸುಧಾಕರ್ ಉಪಾಧ್ಯಕ್ಷರಾಗಿ ಮಂಜುನಾಥ್
ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ನಗರದ ಡಿಸಿಸಿ ಬ್ಯಾಕ್‍ನಲ್ಲಿ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆ
ಅವಿರೋಧವಾಗಿ ಸಚಿವ ಡಿ ಸುಧಾಕರ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಗೆ 2004ರಿಂದ 2024ರವರೆಗೂ ಸಚಿವ ಡಿ ಸುಧಾಕರ್ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿದ್ದು ದಾಖಲೆ
ಬರೆದಿದ್ದಾರೆ. ಈ ಮಾತನಾಡಿದ ಸಚಿವ ಡಿ ಸುಧಾಕರ್ ಸಹಕಾರಿ ಬ್ಯಾಂಕ್‍ಗಳಿಂದ ಸಾಕಷ್ಟು ರೈತರ ಅಭಿವೃದ್ಧಿ ಆಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರಿಗೆ ಅನುಕೂಲವಾಗುವಂತಹ ಸಾಲ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *