
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 23 : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ವತಿಯಿಂದ ಗಾಂಧಿವೃತ್ತದಲ್ಲಿ ಬುಧವಾರ ಸಂಜೆ ತಮ್ಮ ಎಡಗೈಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಮೇಣದಬತ್ತಿ ಬೆಳಗಿ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಹತ್ಯೆಯನ್ನು ಖಂಡಿಸಿ ಕೇಂದ್ರ ಸರ್ಕಾರ ಅಲ್ಲಿಗೆ ಬರುವ
ಪ್ರವಾಸಿಗರಿಗೆ ಸೂಕ್ತವಾದ ರಕ್ಷಣೆಯನ್ನು ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದರು. ಸುಮಾರು ಅರ್ಧ ಗಂಟೆಗಳ ಕಾಲ
ಸಂತೇಪೇಟೆ ವೃತ್ತದಲ್ಲಿ ಮೊಂಬತ್ತಿಯನ್ನು ಹಚ್ಚುವುದರ ಮೂಲಕ ಮೃತರಿಗೆ ಮೌನವಾಗಿ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ನೇತೃತ್ವದಲ್ಲಿ ನಡೆದ ಮೌನ ಸಂತಾಪದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಎಂ.ಕೆ.ತಾಜ್ಪೀರ್, ಪ್ರಧಾನ ಕಾರ್ಯದರ್ಶಿ ಸಂಪತ್, ಉಪಾಧ್ಯಕ್ಷ ಎಸ್.ಎನ್. ರವಿಕುಮಾರ್, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್, ವಸೀಂ, ಕಾರ್ಯದರ್ಶಿ ವೈಶಾಕ್ಯಾದವ್ ಉಪಾಧ್ಯಕ್ಷ ಸಮರ್ಥರಾಯ್, ನಗರಾಧ್ಯಕ್ಷ ಪವನ್, ಇಂಜುಮಾಮ್, ದರ್ಶನ್, ಮಹಂತೇಶ್, ಪ್ರಧಾನ ಕಾರ್ಯದರ್ಶಿ ಪವನ್ ಸೇರಿದಂತೆ ಯೂತ್ ಕಾಂಗ್ರೆಸ್ನ ಪದಾಧಿಕಾರಿಗಳು ಸಂತಾಪದಲ್ಲಿ ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1