ಚಿತ್ರದುರ್ಗ: ಯಡಿಯೂರಪ್ಪ ಸಂಧಾನ ಸಕ್ಸಸ್- ಶಾಂತವಾದ ಚಂದ್ರಪ್ಪ; ಕಾರಜೋಳ ಪರ ತಂದೆ-ಮಗ ಪ್ರಚಾರ.

ಚಿತ್ರದುರ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮದ್ಯ ಪ್ರವೇಶದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಕಗ್ಗಂಟಾಗಿದ್ದ ಸಮಸ್ಯೆ ಬಗೆಹರಿದಿದೆ. ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಚಂದ್ರಪ್ಪನವರ ಪುತ್ರ ರಘುಚಂದನ್ ಲೋಕಸಭೆಗೆ ಕಣಕ್ಕಿಳಿಯಲು ತಯಾರಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ನಡೆದ ಸಭೆಯ ಬಳಿಕ ಶಾಸಕ ಚಂದ್ರಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ. ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇವೆ. ಪುತ್ರನಿಗೆ ಪಕ್ಷದಲ್ಲಿ ಮುಂದೆ ಉತ್ತಮ ಅವಕಾಶ ಕೊಡುವ ವಿಶ್ವಾಸವಿದೆ ಎಂದು ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಹಿರಿಯ ನಾಯಕರಾದ ಯಡಿಯೂರಪ್ಪನವರು ನಮ್ಮ ಜತೆ, ನಮ್ಮ ಬೆಂಬಲಿಗರ ಜತೆ ಮಾತನಾಡಿದ್ದಾರೆ. ಅವರ ಮಾತಿಗೆ ಗೌರವ, ಮರ್ಯಾದೆ ಕೊಟ್ಟು ನನ್ನ ಮಗ ಪಕ್ಷೇತರ ಸ್ಪರ್ಧೆ ಮಾಡಲ್ಲ. ನಾವು ಪಕ್ಷದ ಪರ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Souce : https://www.kannadaprabha.com/politics/2024/Apr/03/yediyurappa-settles-chitradurga-conundrum

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *