ಚಿತ್ರದುರ್ಗದ ಚಿತ್ರಕಲಾವಿದ ಸಿ.ಕಣ್ಮೇಶ್ ರಾಜ್ಯ ಮಟ್ಟದ ಚಿತ್ರಕಲಾ ಪ್ರಶಸ್ತಿಗೆ ಆಯ್ಕೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಸೆ. 17 : ಚಿತ್ರದುರ್ಗದ ಚಿತ್ರಕಲಾವಿದರಾದ ಸಿ.ಕಣ್ಮೇಶ್ ರವರಿಗೆ ಹಿರಿಯ ಚಿತ್ರಕಲಾವಿದರಾದ ಪಿ.ಆರ್.ತಿಪ್ಪೇಸ್ವಾಮಿ ಯವರ ಹೆಸರಿನಲ್ಲಿ ನೀಡಲಾಗುವ ಚಿತ್ರಕಲಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಾಶ್ ರಾಮನಾಯ್ಕ ತಿಳಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ಜೆ.ಎಂ.ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಕಳೆದ
ಇಪ್ಪತ್ತು ವರ್ಷಗಳಿಂದಲೂ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿರುವ ಚಿತ್ರಕಲಾವಿದ ಸಿ.ಕಣ್ಮೇಶ್‍ರವರು ಬಡುಕಟ್ಟು ಸಮುದಾಯ
ಹಾಗೂ ಜಾನಪದಕ್ಕೆ ಸಂಬಂಧಿಸಿದಂತೆ ಹೆಚ್ಚು ಚಿತ್ರಕಲೆಗಳನ್ನು ರಚಿಸಿ ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದಾರೆ ಜಿಲ್ಲೆಯ
ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯ ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಸೆ.20 ರಂದು ರಾಜ್ಯದ ಮುಖ್ಯಮಂತ್ರಿ
ಸಿದ್ದರಾಮಯ್ಯನವರು ಪ್ರದಾನ ಮಾಡುತ್ತಿರುವುದು ಜಿಲ್ಲೆಗೆ ಹೆಮ್ಮೆಯಾಗಿದೆ ಎಂದರು.

ಪಿ.ಆರ್.ತಿಪ್ಪೇಸ್ವಾಮಿ ಕೇವಲ ಜಾನಪದ ಕಲಾವಿದರಷ್ಟೆ ಅಲ್ಲ. ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ ಜಾನಪದ ವಸ್ತುಗಳನ್ನು ಸಂಗ್ರಹಿಸಿ
ಮುಂದಿನ ಪೀಳಿಗೆಗೆ ಉಳಿಸಿದ್ದಾರೆ. ಚಿತ್ರಕಲೆಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ಬರೆದು ಕಾಲೇಜುಗಳಿಗೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿರುವ ಮ್ಯೂಸಿಯಂನಲ್ಲಿ ಪಿ.ಆರ್.ತಿಪ್ಪೇಸ್ವಾಮಿರವರ ಸಂಗ್ರಹಗಳು ಇಂದಿಗೂ ಇವೆ. ಅವಿವಾಹಿತರಾಗಿದ್ದುಕೊಂಡು
ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟ ಪಿ.ಆರ್.ತಿಪ್ಪೇಸ್ವಾಮಿ ಪ್ರಶಸ್ತಿ ಸಿ.ಕಣ್ಮೇಶ್‍ಗೆ ಸಿಕ್ಕಿರುವುದು ಅವರ ಪರಿಶ್ರಮಕ್ಕೆ ತಕ್ಕ ಫಲ.
ಪ್ರಶಸ್ತಿಯು 25 ಸಾವಿರ ರೂ.ನಗದು, ಸ್ಮರಣಿಕೆಯನ್ನೊಳಗೊಂಡಿರುತ್ತದೆ ಎಂದರು.

ಜಾನಪದ ಹಾಡುಗಾರ ಹರೀಶ್ ಮಾತನಾಡುತ್ತ ಜನಪದ ಚಿತ್ರಗಳ ಮೂಲಕ ಕಲೆಯನ್ನು ಚಿತ್ರಿಸುವ ಅದ್ಬುತ ಕಲಾವಿದ ಪಿ.ಕಣ್ಮೇಶ್‍ಗೆ
ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿರುವುದು ಇಡಿ ಚಿತ್ರಕಲೆಗೆ ಸಂದ ಗೌರವ ಎಂದು ಬಣ್ಣಿಸಿದರು.

ಪ್ರಸನ್ನಕುಮಾರ್ ಮಾತನಾಡಿ ಪಿ.ಆರ್.ತಿಪ್ಪೇಸ್ವಾಮಿ ಜಿಲ್ಲೆಯ ಹೆಮ್ಮೆಯ ಕಲಾವಿದರು. ಅಂತಹವರ ಹೆಸರಿನಲ್ಲಿ ಪಿ.ಕಣ್ಮೇಶ್ ರಾಜ್ಯದ
ಮುಖ್ಯಮಂತ್ರಿಯಿಂದ ಪ್ರಶಸ್ತಿ ಸ್ವೀಕರಿಸುವುದು ಅವರ ಕಲೆಗೆ ಸಿಕ್ಕ ಗರಿಮೆ ಎಂದು ಗುಣಗಾನ ಮಾಡಿದರು.

ಕಲಾವಿದರಾದ ನಾಗರಾಜ್ ಬೇದ್ರೇ,ಸೈಯದ್ ಖುದ್ದೂಸ್, ರಮೇಶ, ತಿಮ್ಮಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *