ಚಂಡಮಾರುತದ ಪರಿಣಾಮವಾಗಿ ಅಕಾಲಿಕ ಮಳೆ — ತರಕಾರಿ ಬೆಲೆ ಗಗನಕ್ಕೇರಿದ ಕಾರಣ ಗ್ರಾಹಕರಿಗೆ ಶಾಕ್!

ಬೆಂಗಳೂರು:Vegetable Price Hike: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿಸಿದ್ದಲ್ಲದೇ ಕರ್ನಾಟಕದ ಮೇಲು ಪರಿಣಾಮ ಬೀರಿತ್ತು. ಈ ಹಿನ್ನೆಲೆ ರಾಜ್ಯದ ಹಲವೆಡೆ ವರುಣಾರ್ಭಟ ಜೋರಾಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತರಕಾರಿ ಬೆಳೆ ಹಾಳಾಗಿದ್ದು, ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದು, ವ್ಯಾಪಾರಿಗಳು ನಷ್ಟದಲ್ಲಿದ್ದಾರೆ.

ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ (Cyclone Montha) ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ (Vegetable Rate) ಕೇಳಿದ ಗ್ರಾಹಕರು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದು, ವ್ಯಾಪಾರಿಗಳು ಖರೀದಿದಾರರಿಲ್ಲದೇ ನಷ್ಟವಾಗುತ್ತಿದೆಯೆಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ತರಕಾರಿ ಕೊಳ್ಳಲು ಹಿಂಜರಿಯುತ್ತಿರುವ ಗೃಹಿಣಿಯರು ಸೈಕ್ಲೋನ್ ಎಫೆಕ್ಟ್ನಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ.

ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.ಯಾವ ತರಕಾರಿ ಬೆಲೆ ಕೇಳಿದರೂ ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಇದರಿಂದ ಯಾರು ತರಕಾರಿ ಕೊಳ್ಳಲು ಬರುತ್ತಿಲ್ಲ, ವ್ಯಾಪಾರ ಸರಿಯಾಗಿ ನಡೆಯದೇ ಇದ್ದರೆ ಜೀವನ ಸಾಗಿಸುವುದು ಕಷ್ಟ ಎಂದು ತರಕಾರಿ ವ್ಯಾಪಾರಿಗಳು ತನ್ನ ನೋವು ತೋಡಿಕೊಂಡಿದ್ದಾರೆ. ತರಕಾರಿ ಬೆಲೆ ಕೇಳಿ ಗೃಹಿಣಿಯರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಒಂದು ಕೆಜಿ ತರಕಾರಿ ಕೊಂಡುಕೊಳ್ಳುವ ಮಹಿಳೆಯರು ಅರ್ಧ, ಕಾಲು ಕೆಜಿ ಕೊಳ್ಳಲು ಮುಂದಾಗುತ್ತಿದ್ದಾರೆ. ಈ ಬೆಲೆಯೇರಿಕೆಯ ಸಮಯದಲ್ಲಿ ತರಕಾರಿ ಕೊಂಡು ಅಡುಗೆ ಮಾಡುವುದು ಕಷ್ಟ ಎಂದು ಹೇಳಿದ್ದಾರೆ.

ಬೆಂಳೂರಿನಲ್ಲಿ ಇವತ್ತಿನ ತರಕಾರಿ ಬೆಲೆ ( ರೂಪಾಯಿಗಳಲ್ಲಿ)

ನುಗ್ಗೆಕಾಯಿ-ಕೆಜಿ- 140 ರಿಂದ 150

ಬಟಾಣಿ ಫಾರಂ- 260 ರಿಂದ 270

ಬೀನ್ಸ್- 90 ರಿಂದ 100

ಈರುಳ್ಳಿ- 40 ರಿಂದ 50

ಜವಳಿಕಾಯಿ- 100 ರಿಂದ 120

ಶುಂಠಿ- 100 ರಿಂದ 110

ಕ್ಯಾರೆಟ್- 90 ರಿಂದ 100

ತೊಗರಿಕಾಯಿ-80 ರಿಂದ 100

ಹಸಿ ಮೆಣಸಿನಕಾಯಿ- 80 ರಿಂದ 100

ಟೊಮೊಟೋ- 30 ರಿಂದ 40

ಆಲೂಗಡ್ಡೆ- 50 ರಿಂದ 60

ಹೀರೇಕಾಯಿ- 50 ರುಪಾಯಿ 60

ಬದನೆಕಾಯಿ- 60 ರಿಂದ 70

ಬೆಂಡೆಕಾಯಿ- 70 ರಿಂದ 80

ಬಿಟ್ರೂಟ್- 70 ರಿಂದ 80

ಹೂಕೋಸು- 80 ರಿಂದ 90

ಕ್ಯಾಪ್ಸಿಕಂ- 80 ರಿಂದ 90

Leave a Reply

Your email address will not be published. Required fields are marked *