Cyclone Remal Alert: ಹವಾಮಾನದಲ್ಲಿ ಭಾರೀ ವೈಪರೀತ್ಯ ಉಂಟಾಗಿದ್ದು, ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ಉಂಟಾಗಿರುವ ರೆಮಲ್ ಚಂಡಮಾರುತ ಭಾನುವಾರ ಸಂಜೆ ವೇಳೆಗೆ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನದಲ್ಲಿ ಭಾರೀ ವೈಪರೀತ್ಯ ಉಂಟಾಗಿದ್ದು, ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ಉಂಟಾಗಿರುವ ರೆಮಲ್ ಚಂಡಮಾರುತ ಭಾನುವಾರ ಸಂಜೆ ವೇಳೆಗೆ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ರೆಮಲ್ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇದು ಬಂಗಾಳಕೊಲ್ಲಿಯಲ್ಲಿ ಮಾನ್ಸೂನ್ ಋತುವಿನ ಮೊದಲ ಚಂಡಮಾರುತವಾಗಿದೆ. ಈ ಚಂಡಮಾರುತದಿಂದಾಗಿ ಗಂಟೆಗೆ 102 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು. ಅದೇ ಸಮಯದಲ್ಲಿ, ಮೇ 26 ಮತ್ತು 27 ರಂದು ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು..
ಹವಾಮಾನ ಇಲಾಖೆಯು ಕೆಪುಪಾರಾ (ಬಾಂಗ್ಲಾದೇಶ) ದಿಂದ ಸುಮಾರು 800 ಕಿಮೀ ದಕ್ಷಿಣ-ನೈಋತ್ಯ ಮತ್ತು ಕ್ಯಾನಿಂಗ್ (ಪಶ್ಚಿಮ ಬಂಗಾಳ) ನಿಂದ 810 ಕಿಮೀ ದೂರದಲ್ಲಿ ಅಂದರೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇ 24 ರಂದು ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವನ್ನು ಗುರುತಿಸಿದೆ.. ರೆಮಲ್ ಚಂಡಮಾರುತವು ಪ್ರಸ್ತುತ ಉತ್ತರಕ್ಕೆ ಚಲಿಸುತ್ತಿದೆ. ಈ ಚಂಡಮಾರುತವು ಮೇ 26 ರ ಮಧ್ಯರಾತ್ರಿಯ ಹೊತ್ತಿಗೆ ಸಾಗರ್ ದ್ವೀಪ ಮತ್ತು ಖೇಪುಪಾರ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಪ್ರಕಾರ, ರೆಮಲ್ ಚಂಡಮಾರುತದಿಂದಾಗಿ ಮೇ 27 ಮತ್ತು 28 ರಂದು ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ ಮತ್ತು ತ್ರಿಪುರಾದಲ್ಲಿ ಮಳೆಯಾಗಬಹುದು. ಮೇ 26 ರಂದು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈತನ್ಮಧ್ಯೆ ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ಎಚ್ಚರಿಕೆ ನೀಡಿದೆ. ಇದಲ್ಲದೇ ಈಗಾಗಲೇ ಸಮುದ್ರದಲ್ಲಿ ಬೀಡುಬಿಟ್ಟಿರುವ ಮೀನುಗಾರರು ಮೇ 26ರೊಳಗೆ ಕರಾವಳಿಗೆ ಮರಳುವಂತೆ ಸೂಚಿಸಲಾಗಿದೆ.
‘ರೆಮಲ್’ ಚಂಡಮಾರುತವನ್ನು ಎದುರಿಸಲು ಭಾರತೀಯ ಕೋಸ್ಟ್ ಗಾರ್ಡ್ (ICG) ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ. ಸಮುದ್ರದಲ್ಲಿ ಸಂಭವನೀಯ ಜೀವ ಮತ್ತು ಆಸ್ತಿ ನಷ್ಟವನ್ನು ಕಡಿಮೆ ಮಾಡಲು ಆಯಕಟ್ಟಿನ ಸ್ಥಳಗಳಲ್ಲಿ ಒಂಬತ್ತು ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ‘9 ವಿಪತ್ತು ಪರಿಹಾರ ತಂಡಗಳನ್ನು ಹಲ್ದಿಯಾ, ಪಾರಾದಿಪ್, ಗೋಪಾಲ್ಪುರ ಮತ್ತು ಫ್ರೇಸರ್ಗಂಜ್ನಲ್ಲಿ ನಿಯೋಜಿಸಲಾಗಿದೆ. ಇದಲ್ಲದೆ, ಪೂರ್ವ ಕರಾವಳಿಯಲ್ಲಿ 10 ಹಡಗುಗಳು ಮತ್ತು 2 ವಿಮಾನಗಳನ್ನು ನಿಯೋಜಿಸಲಾಗಿದೆ, ಇದರಿಂದಾಗಿ ಅವರು ಸಮುದ್ರದಲ್ಲಿ ಇರುವ ಅಥವಾ ಹೋಗುವ ಮೀನುಗಾರರ ಮೇಲೆ ನಿಗಾ ಇಡಬಹುದು.. ಮೇ 26 ಮತ್ತು 27 ರಂದು ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು.