
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜ. 11 : ಕಾಂಗ್ರೆಸ್ನಲ್ಲಿ ದಲಿತ್ ಮಾಫಿಯಾ ಶುರುವಾಗಿದೆ, ಇದು ದಲಿತ ವಿರೋಧಿ ಸರ್ಕಾರವಾಗಿದೆ. ಕಾಂಗ್ರೆಸ್ ಕೆಲ ಕುಟುಂಬಗಳ
ಹಿಡಿತದಲ್ಲಿದೆ ದಲಿತ ಮಾಫೀಯಾದಲ್ಲಿ ಎರಡು ಗುಂಪುಗಳಿವೆ ದಲಿತ ವಿರೋಧಿ ಮಾಫಿಯಾವಿದೆ, ಇನ್ನೊಂದು ದಲಿತ ಮಾಫಿಯಾವಿದೆ ಇವರೆಲ್ಲರು ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ ಕಾಂಗ್ರೆಸ್ನಲ್ಲಿ ದಲಿತರಿಗೆ ಬೆಲೆ ಇಲ್ಲ ಕಾಂಗ್ರೆಸ್ ನಾಶವಾಗುವ
ಸ್ಥಿತಿಯಲ್ಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನುಡಿದಿದ್ದಾರೆ.

ಚಿತ್ರದುರ್ಗಕ್ಕೆ ಬೇಟಿ ನೀಡಿದ್ದ ಅವರು ಮಾದಾರ ಚನ್ನಯ್ಯ ಗುರುಪೀಠ, ಛಲವಾದಿ ಗುರುಪೀಠ ಹಾಗೂ ಲಂಬಾಣಿ ಗುರುಪೀಠಗಳಿಗೆ ಬೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಿಎಂ ಸಮ್ಮುಖದಲ್ಲಿ ನಕ್ಸಲರು ಶರಣಾಗತಿ ವಿಚಾರ 25 ವರ್ಷದಿಂದ ಯಾರಿಗೂ ಸಿಗದೇ ಇರೋರು ನಿಮ್ಮ ಕೈಗೆ ಹೇಗೆ ಸಿಕ್ಕರು ಇಷ್ಟು ವರ್ಷ ಭಯನೇ ಇಲ್ಲದಿರೋರು ವಿಕ್ರಂ ಗೌಡ ಹತ್ಯೆಯಾದ್ಮೇಲೆ ಭಯ ಬಂತಾ ? ಇದೊಂದು ಸರ್ಕಾರದ ಪಿತೂರಿ ಕೆಲಸ ನಕ್ಸಲರು ಸರೆಂಡರ್ ಆಗಿಲ್ಲ,
ಸರ್ಕಾರವೇ ನಕ್ಸಲರಿಗೆ ಸರೆಂಡರ್ ಆಗಿದೆ ಬರಿಗೈನಲ್ಲಿ ಶರಣಾಗಿದ್ದಾರೆ ಅವರ ಶಸ್ತ್ರಾಸ್ತ್ರಗಳು ಎಲ್ಲೋದ್ವು, ಇವರಿಂದೆ ಇನ್ನು ನಕ್ಸಲಿರಿದ್ದಾರಾ ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದಿದ್ದಾರೆ.
ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ನಾನು ಸಿಎಂ,ನೀನು ಸಿಎಂ
ಆಗಬೇಕೆಂಬ ಪರಿಸ್ಥಿತಿ ಇದೆ ಯಾರು ಊಟಕ್ಕೂ ಸೇರುವ ಸ್ವತಂತ್ರ ಇಲ್ಲ, ಹೊಡೆದು ಆಳುವ ನೀತಿ ರಾಜ್ಯದಲ್ಲಿದೆ ಮುಡಾದಲ್ಲಿ ಸುಳ್ಳು
ದಾಖಲೆ ನೀಡಿ ಉಖಿಆ ಫ್ಯಾಮಿಲಿ ಸೈಟ್ ಪಡೆದ ವಿಚಾರ ಇದು 14 ಸೈಟ್ ಗಳ ವಿಚಾರ ವಲ್ಲ, ಸಾವಿರಾರು ಸೈಟ್ಗಳ ವಿಚಾರ
ಅವರನ್ನ ರಕ್ಷಣೆ ಮಾಡಲು ಎಲ್ಲಾ ಕೇಸ್ ಮುಚ್ಚಿ ಹಾಕುವ ಪ್ರಯತ್ನ ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿ ರಾತ್ರೋರಾತ್ರಿ ಹೋಗಿ ಸೈಟ್
ವಾಪಾಸ್ ಯಾಕ್ ಕೊಟ್ರಿ ತಪ್ಪು ಮಾಡಿದ್ದು ಅರಿವಾದ್ಮೇಲೆ ಸಿಎಂ ಸೈಟ್ ವಾಪಾಸ್ ಕೊಟ್ಟಿದೀರಿ ನಿಮಗೂ ಭ್ರಷ್ಟಾಚಾರಕ್ಕೂ ಹತ್ತಿರದ
ನಂಟಿದೆ ಸಿಎಂ ವಿರುದ್ದ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನಲ್ಲಿ ದಲಿತ್ ಮಾಫಿಯಾ ಶುರುವಾಗಿದೆ, ದಲಿತ ವಿರೋಧಿ ಸರ್ಕಾರವಿದು ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ
ಖರ್ಗೆ,ಮುನಿಯಪ್ಪ,ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್ನಲ್ಲಿ ಹಿಡಿತ ಸಾಧಿಸಿವೆ ಈ ಪಕ್ಷದಲ್ಲಿ ಇತರರಿಗೆ ಅವಕಾಶವೇ
ಇಲ್ಲದಂತಾಗಿದೆ ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ ಇವರಲ್ಲಿ ಎರಡು ಗುಂಪುಗಳಿವೆ
ದಲಿತ ವಿರೋಧಿ ಮಾಫಿಯಾವಿದೆ, ಇನ್ನೊಂದು ದಲಿತ ಮಾಫಿಯಾವಿದೆ ಇವರೆಲ್ಲರು ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ
ಕಾಂಗ್ರೆಸ್ ನಲ್ಲಿ ದಲಿತರಿಗೆ ಬೆಲೆ ಇಲ್ಲ ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
ಈ ಕೇಸ್ ಕೂಡ ಸಿಬಿಐ ಗೆ ಕೊಟ್ರೆ ಎಲ್ಲರ ಬಂಡವಾಳ ಹೊರಗಡೆ ಬರುತ್ತೆ ಇದ್ರಲ್ಲಿ ಯಾರಿದ್ದಾರೆ, ಯಾರಿಲ್ಲ ಎಂಬುದು ಪ್ರಶ್ನೆಯಲ್ಲ ನನ್ನ
ಸಂಬಂಧಿಗಳು ಇದ್ದರೂ ನಾನು ಇದನ್ನೇ ಮಾತನಾಡೋದು ಜನಪರ ವ್ಯವಸ್ಥೆ ಆಗಬೇಕೆ ಹೊರತು, ಸಂಬಂಧಿಕರು, ಸ್ವಾರ್ಥದ
ವ್ಯವಸ್ಥೆ ಆಗಬಾರದು ಎಂದ ಅವರು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಖರ್ಗೆ ಆಪ್ತ ಅರೆಸ್ಟ್ ವಿಚಾರವ್ಯವಸ್ಥಿತವಾಗಿ ಈ
ಕೇಸ್ ಮುಚ್ಚಿ ಹಾಕಲು ಸರ್ಕಾರ ಎಲ್ಲಾ ಪ್ರಯತ್ನ ಮಾಡ್ತಿದೆ ಆದ ಕಾರಣ ಈ ಕೇಸ್ ಸಿಬಿಐ ಗೆ ಕೊಡಬೇಕು ಎಲ್ಲಾ ಕೇಸ್ ಗಳನ್ನು ಮುಚ್ಚಿ
ಹಾಕುವುದೇ ಇವರ ಕೆಲಸ ಬಿಜೆಪಿ ಬಟ್ಟೆ ಹರ್ಕೊಂಡ್ರು ನಾವು ಕೇರ್ ಮಾಡಲ್ಲ ಎಂದು ಅವರು ಹೇಳ್ತಾರೆ ನಾವು ಯಾವುದೇ ಬಟ್ಟೆ
ಹರಿÀದು ಕೊಳ್ಳಲ್ಲ, ನಾವಿರೋದು ನಿಮ್ಮ ಬಟ್ಟೆ ಹರಿಯೋಕೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಶ್ರೀಮತಿ ನಾಗವೇಣಿ, ಬಿಜೆಪಿ ಮುಖಂಡರಾದ ಛಲವಾದಿ ತಿಪ್ಪೇಸ್ವಾಮಿ
ಶ್ರೀಮತಿ ಭಾರ್ಗವಿ ದ್ರಾವಿಡ್, ಮುರಾರ್ಜಿ ಸೇರಿದಂತೆ ಇತರರು ಭಾಗವಹಿಸಿದ್ದರು