“ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಾವೇರಿಯ ಪಠಾಣ್ ಅವರ ಮನೆಯಲ್ಲಿ ಆತ್ಮೀಯ ಭೇಟಿ”

ಚಿತ್ರದುರ್ಗ ಆ. 12

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್

ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾಗಿರುವ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಜಾತ್ಯಾತೀತ ಹಾಗೂ ಧರ್ಮಾತೀತ ತತ್ವಗಳನ್ನು ರೂಡಿಸಿಕೊಂಡು ಮುನ್ನಡೆಯುತ್ತಿದೆ.

ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಹೆಸರಿನಿಂದ ಜಾತಿ ಸೂಚಕವಾಗಿದ್ದರೂ  ವಾಸ್ತವದಲ್ಲಿ ಸಕಲ ಜಾತಿ ಪಂಗಡಗಳ ಜನರನ್ನು ಸಮಾನವಾಗಿ ಕಾಣುವ ಶ್ರೀಗಳ ಸಮಾನತೆಯ ಭಾವ ಎಲ್ಲರನ್ನೂ ಪ್ರೀತಿಸುವ ಹಾಗೂ ಗೌರವಿಸುವ ಕಾರಣದಿಂದ ಶ್ರೀಮಠ ಸರ್ವರ ಶ್ರದ್ಧಾ ಕೇಂದ್ರವಾಗಿದೆ.

ಇದಕ್ಕೊಂದು ತಾಜಾ ಉದಾಹರಣೆಯಾಗಿ ಆ12ರ ಮಂಗಳವಾರ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಹಾವೇರಿಯ ಪಠಾಣ್ ಅವರ ನಿವಾಸಕ್ಕೆ ಭೇಟಿ ನೀಡಿ ಮುಸಲ್ಮಾನ ಬಂಧುಗಳೊಂದಿಗೆ ಮಾತುಕತೆ ನಡೆಸಿದರು. ಪಠಾಣ್ ಅವರು ಹಲವು ವರ್ಷಗಳಿಂದ ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ಭಕ್ತರಾಗಿದ್ದು ಇಂದು ತಮ್ಮ ಮನೆಗೆ ಆಹ್ವಾನಿಸಿ ಉಪಚರಿಸಿ, ಭಕ್ತಿ ಸಮರ್ಪಿಸಿದರು.

Views: 16

Leave a Reply

Your email address will not be published. Required fields are marked *