ಒಪಿಎಸ್ ಜಾರಿಗೆ ಆಗ್ರಹ: ಜು. 11ರಂದು ಸಿಎಂ, ಡಿಸಿಎಂಗೆ ಸರ್ಕಾರಿ ನೌಕರರಿಂದ ಬೃಹತ್ ‘ನಮ್ಮಾಭಿಮಾನ’ ಸನ್ಮಾನ

ಚಿತ್ರದುರ್ಗ,July 9:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಬೃಹತ್ ಸನ್ಮಾನ ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ “ನಮ್ಮಾಭಿಮಾನದ ಅಭಿನಂದನಾ ಸಮಾರಂಭ”ವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹಾಗೂ ವಿಭಾಗೀಯ ಉಪಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

ಕಾರ್ಯಕ್ರಮದ ರೂಪುರೇಷೆ ಮತ್ತು ಬೇಡಿಕೆಗಳು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಶನಿವಾರ (ಜು.11) ಬೆಳಗ್ಗೆ 11 ಗಂಟೆಗೆ ಈ ಬೃಹತ್ ಕಾರ್ಯಕ್ರಮ ಜರುಗಲಿದೆ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ, ನೌಕರರ ಬಹುದಿನಗಳ ಪ್ರಮುಖ ಬೇಡಿಕೆಗಳಾದ ‘ಹಳೇ ಪಿಂಚಣಿ ಯೋಜನೆ’ (OPS) ಹಾಗೂ ‘ಕೇಂದ್ರ ಮಾದರಿಯ ವೇತನ’ ಜಾರಿಗೊಳಿಸುವಂತೆ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಲಾಗುವುದು.

ಇದರ ಜೊತೆಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರನ್ನು ಇದೇ ವೇದಿಕೆಯಲ್ಲಿ ರಾಜ್ಯದ 6 ಲಕ್ಷಕ್ಕೂ ಹೆಚ್ಚು ನೌಕರರ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ದಿವ್ಯ ಸಾನ್ನಿಧ್ಯ ಮತ್ತು ಪಾಲ್ಗೊಳ್ಳುವಿಕೆ ಈ ಬೃಹತ್ ಸಮಾರಂಭದಲ್ಲಿ ನಾಡಿನ ಪ್ರಮುಖ ಮಠಾಧೀಶರುಗಳಾದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಮತ್ತು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.

ಚಿತ್ರದುರ್ಗದಿಂದ 1500ಕ್ಕೂ ಹೆಚ್ಚು ನೌಕರರ ಭಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ರಾಜ್ಯಾದ್ಯಂತ ಮೂಲೆಮೂಲೆಗಳಿಂದ ಶಿಕ್ಷಕರು, ಸರ್ಕಾರಿ ನೌಕರರು ಸೇರಿ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದಲೇ 1500ಕ್ಕೂ ಅಧಿಕ ನೌಕರರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಲತೇಶ್ ಮುದ್ದಜ್ಜಿ ಮಾಹಿತಿ ನೀಡಿದ್ದಾರೆ.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *