ಚಿತ್ರದುರ್ಗ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ,ಇದರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರಾದ ದಿವ್ಯ ಪ್ರಭು ಅವರು ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮುಂದಿನ ಎರಡು ದಿನಗಳು ನಿರಂತರ ಮಳೆಯಾಗುವ ಮುನ್ಸೂಚನೆ ಇದ್ದು ಈ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರದಂದು ರಜೆ ಘೋಷಿಸಿದ್ದಾರೆ.
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವರ್ತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮೋ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.