ಮಾರ್ಚ್ 6ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಚಿತ್ರದುರ್ಗಕ್ಕೆ ಆಗಮನ

ಚಿತ್ರದುರ್ಗ, ಮಾರ್ಚ್.04: ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇದೇ ಮಾರ್ಚ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾರ್ಚ್ 6ರಂದು ಬೆಳಿಗ್ಗೆ 9ಕ್ಕೆ ಹಿರೇಕೆರೂರಿನಿಂದ ಹೊರಟು, ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11ಕ್ಕೆ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 2ಕ್ಕೆ ಹೊಸಪೇಟೆ, ಕೊಪ್ಪಳ ಮಾರ್ಗವಾಗಿ ಗದಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.

The post ಮಾರ್ಚ್ 6ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಚಿತ್ರದುರ್ಗಕ್ಕೆ ಆಗಮನ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/uVi1ZBl
via IFTTT

Views: 0

Leave a Reply

Your email address will not be published. Required fields are marked *