
ಬೆಂಗಳೂರು: ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ? ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲವೇ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಪ್ರಕ್ರಿಯೆ ಹೇಗೆ? ಯಾವೆಲ್ಲ ದಾಖಲೆಗಳು ಬೇಕು? ಎಂಬ ಪೂರ್ಣ ಮಾಹಿತಿ ಈ ವೀಡಿಯೋದಲ್ಲಿದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1, ಬಳ್ಳಾರಿ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.
*ಅರ್ಹರು:*
2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು). *ದಾಖಲೆಗಳು:* ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
ಸಮಗ್ರಸುದ್ದಿ ವ್ಯಾಟ್ಸಪ್ ಗ್ರೂಪ್ ಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/KnDIfiBURQ9G5sLEJLqshk